ಕ್ರೀಡೆ

ದುಲೀಪ್‌ ಟ್ರೋಫಿ 2023: ಕೊನೆಗೂ ಪ್ರಶಸ್ತಿ ಬರ ನೀಗಿಸಿಕೊಂಡ ದಕ್ಷಿಣ ವಲಯ

ಬೆಂಗಳೂರು: ಹಲವು ವರ್ಷಗಳ ದುಲೀಪ್ ಟ್ರೋಫಿ ಪ್ರಶಸ್ತಿ ಬರವನ್ನು ಕೊನೆಗೂ ದಕ್ಷಿಣ ವಲಯ ನೀಗಿಸಿಕೊಂಡಿದ್ದು, ಪಶ್ಚಿಮ ವಲಯ ವಿರುದ್ಧದ ಫೈನಲ್ ಪಂದ್ಯದಲ್ಲಿ 75 ರನ್ ಗಳ ಜಯ ಸಾಧಿಸಿ ಪ್ರಶಸ್ತಿಗೆ ಮುತ್ತಿಟ್ಟಿದೆ.

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ದುಲೀಪ್ ಟ್ರೋಫಿ ಫೈನಲ್  ಪಂದ್ಯದಲ್ಲಿ ಪಶ್ಚಿಮ ವಲಯ ತಂಡವನ್ನು 75 ರನ್​ಗಳಿಂದ ಮಣಿಸಿದ ದಕ್ಷಿಣ ವಲಯ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಪೃಥ್ವಿ ಶಾ, ಸೂರ್ಯಕುಮಾರ್ ಯಾದವ್, ಸರ್ಫರಾಜ್ ಖಾನ್, ಚೇತೇಶ್ವರ್ ಪೂಜಾರರಂತಹ ಸ್ಟಾರ್ ಆಟಗಾರರ ದಂಡನ್ನೇ ಹೊಂದಿದ್ದ ಪಶ್ಚಿಮ ವಲಯ ತಂಡ ಈ ಪಂದ್ಯದ ಗೆಲ್ಲುವ ಫೆವರೆಟ್ ಎನಿಸಿಕೊಂಡಿತ್ತು. ಆದರೆ ಕನ್ನಡಿಗ ವಿಧ್ವತ್ ಕಾವೇರಪ್ಪ (Vidhwath Kaverappa) ದಾಳಿಗೆ ನಲುಗಿದ ಪ್ರಿಯಾಂಕ್ ಪಾಂಚಾಲ್ ಪಡೆ ಸುಲಭವಾಗಿ ಸೋಲೊಪ್ಪಿಕೊಂಡಿತು.

ಫೈನಲ್ ಪಂದ್ಯದಲ್ಲಿ ದಕ್ಷಿಣ ವಲಯ ನೀಡಿದ 298 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಪಶ್ಚಿಮ ವಲಯ 222ರನ್ ಗಳಿಗೆ ಆಲೌಟ್ ಆಯಿತು. ಆ ಮೂಲಕ 75 ರನ್ ಗಳ ವಿರೋಚಿತ ಸೋಲು ಕಂಡಿತು.

ಮೊದಲ ಇನ್ನಿಂಗ್ಸ್​ನಲ್ಲೇ 67 ರನ್​ಗಳ ಹಿನ್ನಡೆ ಅನುಭವಿಸಿದ ಪಶ್ಚಿಮ ವಲಯ ತಂಡ ಎರಡನೇ ಇನ್ನಿಂಗ್ಸ್​ನಲ್ಲೂ ಮುಗ್ಗರಿಸಿತು.  ಆರಂಭಿಕ ಪೃಥ್ವಿ 7 ರನ್​ಗಳಿಗೆ ಬ್ಯಾಟ್ ಎತ್ತಿಟ್ಟರೆ, ನಾಯಕನ ಇನ್ನಿಂಗ್ಸ್ ಆಡಿದ ಪ್ರಿಯಾಂಕ್ ಗೆಲುವಿಗಾಗಿ ಕೊನೆಯವರೆಗೂ ಹೋರಾಡಿ 95 ರನ್ ಬಾರಿಸಿ ಔಟಾದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ಸರ್ಫರಾಜ್ 48 ರನ್ ಗಳಿಸಿದ್ದು ಬಿಟ್ಟರೆ,  ಸೂರ್ಯ ಕುಮಾರ್ 4 ರನ್ ಹಾಗೂ ಚೇತೇಶ್ವರ್ ಪೂಜಾರ 15 ರನ್​ಗಳಿಗೆ ಪೆವಿಲಿಯನ್ ಸೇರಿಕೊಂಡರು.

ಅಂತಿಮವಾಗಿ ಪಶ್ಚಿಮ ವಲಯ ತಂಡ 222 ರನ್​ಗಳಿಗೆ ಆಲೌಟ್ ಆಗುವುದರೊಂದಿಗೆ 75 ರನ್​ಗಳ ಹೀನಾಯ ಸೋಲೊಪ್ಪಿಕೊಂಡಿತು. ಇನ್ನು ಟೂರ್ನಿಯುದ್ದಕ್ಕೂ ಅದ್ಭುತ ಪ್ರದರ್ಶನ ನೀಡಿದ ಕನ್ನಡಿಗ ವಿಧ್ವತ್ ಕಾವೇರಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಹಾಗೂ ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡರು.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

3 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

3 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

4 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

6 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

9 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

9 hours ago