ಕ್ರೀಡೆ

ವಿಶ್ವಕಪ್‌ ಫೈನಲ್‌ ಗೆಲುವನ್ನು ಸಂಭ್ರಮಿಸಲು ಕಾತುರನಾಗಿದ್ದೇನೆ: ಸಿಎಂ

ಬೆಂಗಳೂರು : ಐಸಿಸಿ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಜಯ ದಾಖಲಿಸುವಂತೆ ಸಿಎಂ ಸಿದ್ದರಾಮಯ್ಯ ಅವರು ಶುಭ ಹಾರೈಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಇರುವ ಅವರು ನಾಳಿನ ವಿಶ್ವಕಪ್ ಕ್ರಿಕೆಟ್ ಪಂದ್ಯಾಕೂಟದ ಫೈನಲ್ ಪಂದ್ಯದಲ್ಲಿ ಭಾರತೀಯರ ಗೆಲುವನ್ನು ಸಂಭ್ರಮಿಸಲು ನಾನು ಎಲ್ಲರಂತೆ ಕಾತುರನಾಗಿದ್ದೇನೆ.” ಎಂದು ಬರೆದುಕೊಂಡಿದ್ದಾರೆ.

“ನಾಳಿನ ವಿಶ್ವಕಪ್ ಕ್ರಿಕೆಟ್ ಪಂದ್ಯಾಕೂಟದ ಫೈನಲ್ ಪಂದ್ಯದಲ್ಲಿ ಭಾರತೀಯರ ಗೆಲುವನ್ನು ಸಂಭ್ರಮಿಸಲು ನಾನು ಎಲ್ಲರಂತೆ ಕಾತುರನಾಗಿದ್ದೇನೆ. ಬೌಲಿಂಗ್, ಬ್ಯಾಟಿಂಗ್, ಫೀಲ್ಡಿಂಗ್ ಎಲ್ಲಾ ವಿಭಾಗಗಳಲ್ಲೂ ನಮ್ಮದು ಒಂದು ಪರಿಪೂರ್ಣ ತಂಡವಾಗಿರುವುದರಿಂದ ಈ ಬಾರಿಯ ವಿಶ್ವಕಪ್ ಭಾರತದ ಮಡಿಲು ಸೇರುವುದು ನಿಶ್ಚಿತ.” ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಭಾರತ ತಂಡ ಈ ವರ್ಲ್ಡ್‌ ಕಪ್‌ ಟೂರ್ನಿಯಲ್ಲಿ ಒಂದೇ ಒಂದು ಪಂದ್ಯವನ್ನು ಸೋಲದೇ ಫೈನಲ್‌ ತಲುಪಿದೆ. ನವೆಂಬರ್‌ 19 ರಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಅಹಮದಾಬಾದ್‌ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತೀಯ ಕಾಲಮಾನ ಮದ್ಯಾಹ್ನ 2 ಗಂಟೆಗೆ ಪಂದ್ಯ ನಡೆಯಲಿದೆ.

andolanait

Recent Posts

ಪಿಯುಸಿ : ಸರ್ಕಾರಿ ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಳದ ನಿರೀಕ್ಷೆ

ಮಕ್ಕಳೊಂದಿಗೆ ಸರ್ಕಾರಿ ಕಾಲೇಜುಗಳತ್ತ ಮುಖ ಮಾಡಿದ ಪೋಷಕರು ಗಿರೀಶ್‌ ಹುಣಸೂರು ಮೈಸೂರು : ೨೦೨೫-೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ…

29 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ಕರ್ನಾಟಕದ ಮೇಲೆ ಬಿಜೆಪಿಯ ರಾಷ್ಟ್ರೀಯ ನಾಯಕರ ಕಣ್ಣು

ದಕ್ಷಿಣದ ರಾಜ್ಯಗಳಲ್ಲಿ ತನ್ನ ಪಾರುಪತ್ಯ ಭದ್ರಗೊಳಿಸಲು ಬಿಜೆಪಿಗೆ ಕರ್ನಾಟಕ ಅವಶ್ಯ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ…

58 mins ago

ತಮಿಳುನಾಡು ಸಿಎಂ ವಿಜಯ್ ಮುಂದೆ ಸವಾಲುಗಳ ಬೆಟ್ಟ

ತಮಿಳುನಾಡಿನ ಮುಖ್ಯಮಂತ್ರಿಯಾಗಿ ಜೋಸೆಫ್ ವಿಜಯ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆ ಮೂಲಕ ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ಟಿವಿಕೆ ಮಿತ್ರ ಪಕ್ಷಗಳ…

1 hour ago

ಲ್ಯಾನ್ಸ್‌ಡೌನ್‌ ಕಟ್ಟಡಕ್ಕಿಲ್ಲ ಮುಕ್ತಿ : ಚರ್ಚೆಯಲ್ಲೇ ಕಾಲಹರಣ

ಕಟ್ಟಡವನ್ನು ಜೀರ್ಣೋದ್ಧಾರ ಮಾಡಬೇಕೋ? ನೆಲಸಮಗೊಳಿಸಿ ಹೊಸದಾಗಿ ನಿರ್ಮಿಸಬೇಕೋ? ಸುಪ್ರೀಂ ತೀರ್ಪು ಎದುರು ನೋಡುತ್ತಿರುವ ಪಾಲಿಕೆ ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು :…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.11 ಸೋಮವಾರ

2 hours ago

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

13 hours ago