ಕ್ರೀಡೆ

ಜು.6 ರಂದು ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ

ನವದೆಹಲಿ: ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಅವರ ಸ್ಥಾನಕ್ಕೆ ಜುಲೈ 6 ರಂದು ಕೊನೆಗೂ ಚುನಾವಣೆ ನಡೆಸಲು ನಿರ್ದರಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿಯಾಗಿರುವ ಚುನಾವಣಾಧಿಕಾರಿ ಮಹೇಶ್ ಮಿತ್ತಲ್ ಕುಮಾರ್ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ನಿಂದ ಮಹೇಶ್ ಕುಮಾರ್ ಮಿತ್ತಲ್ ಕುಮಾರ್ ಅವರನ್ನು ಚುನಾವಣಾ ಅಧಿಕಾರಿಯಾಗಿ ನೇಮಿಸಿದ ಒಂದು ದಿನದ ಬಳಿಕ ಚುನಾವಣಾ ದಿನಾಂಕ ಪ್ರಕಟಿಸಲಾಗಿದೆ.

ಪ್ರತಿಭಟನಾ ನಿರತ ಕುಸ್ತಿಪಟುಗಳೊಂದಿಗಿನ ಸಭೆಯ ನಂತರ, ಕ್ರೀಡಾ ಸಚಿವ ಅನುರಾಗ್ ಠಾಕೂರ್, ಜೂನ್ 30 ರೊಳಗೆ ಭಾರತೀಯ ಕುಸ್ತಿ ಒಕ್ಕೂಟಕ್ಕೆ ಚುನಾವಣೆ ನಡೆಸಲಾಗುವುದು ಎಂದು ಭರವಸೆ ನೀಡಿದ್ದರು ಆದರೆ ಈ ಗಡುವಿನೊಳಗೆ ಚುನಾವಣೆ ನಡೆಸಲು ಕಷ್ಟವಾದ ಹಿನ್ನೆಲೆಯಲ್ಲಿ ಇದೀಗ ಜುಲೈ 6 ರಂದು ಚುನಾವಣೆ ನಿಗಧಿಯಾಗಿದೆ.

ಈ ಹಿಂದೆ ಡಬ್ಲ್ಯುಎಫ್‌ಐನಿಂದ ವಿಸರ್ಜಿಸಲ್ಪಟ್ಟ ಕೆಲವು ರಾಜ್ಯ ಸಂಸ್ಥೆಗಳು ಚುನಾವಣೆಯಲ್ಲಿ ಭಾಗವಹಿಸಿ ತಮ್ಮ ಹಕ್ಕು ಚಲಾಯಸಲಿವೆ ಎನ್ನಲಾಗಿದೆ ಅದರಲ್ಲಿ “ಮಹಾರಾಷ್ಟ್ರ, ಮಧ್ಯಪ್ರದೇಶ, ಹರಿಯಾಣ ಮತ್ತು ಕರ್ನಾಟಕದಲ್ಲಿ ಎರಡು ವಿಭಿನ್ನ ರಾಜ್ಯ ಸಂಸ್ಥೆಗಳು ಡಬ್ಲ್ಯುಎಫ್‌ಐ ಚುನಾವಣೆಗಳಿಗೆ ಮತದಾರರ ಪಟ್ಟಿಯಲ್ಲಿ ಹೆಸರುಗಳನ್ನು ಸೇರಿಸಲು ಕಳುಹಿಸಿವೆ ಎಂದು ಮೂಲಗಳು ತಿಳಿಸಿವೆ.

“ಭ್ರಷ್ಟಾಚಾರ ಮತ್ತು ದುರಾಡಳಿತ” ಸೇರಿದಂತೆ ವಿವಿಧ ಕಾರಣಗಳಿಗಾಗಿ ಕರ್ನಾಟಕ, ಹರಿಯಾಣ ಮತ್ತು ಮಹಾರಾಷ್ಟ್ರದ ಕುಸ್ತಿ ಒಕ್ಕೂಟದ ಕಾರ್ಯಕಾರಿ ಸಮಿತಿಯನ್ನು 2022ರ ಜೂನ್‌ನಲ್ಲಿ ಕಾರ್ಯಕಾರಿ ಸಮಿತಿಯನ್ನು ವಿಸರ್ಜನೆ ಮಾಡಲಾಗಿತ್ತು.

ನಿರ್ಗಮಿತ ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಕುಟುಂಬದ ಯಾವುದೇ ಸದಸ್ಯರು ಅಥವಾ ಸಹವರ್ತಿಗಳಿಗೆ ಚುನಾವಣೆಗೆ ಸ್ಪರ್ಧಿಸಲು ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಕ್ರೀಡಾ ಸಚಿವ ಠಾಕೂರ್ ಅವರು ಕುಸ್ತಿಪಟುಗಳಿಗೆ ಭರವಸೆ ನೀಡಿದ್ದಾರೆ.

ಕೇಂದ್ರಾಡಳಿತ ಪ್ರದೇಶಗಳಾದ ಚಂಡೀಗಢ ಮತ್ತು ದೆಹಲಿ ಸೇರಿದಂತೆ ಭಾರತೀಯ ಕುಸ್ತಿ ಒಕ್ಕೂಟ 25 ಅಂಗಸಂಸ್ಥೆಗಳನ್ನು ಹೊಂದಿದೆ. ಪ್ರತಿ ರಾಜ್ಯ ಘಟಕ ಇಬ್ಬರು ಪ್ರತಿನಿಧಿಗಳನ್ನು ಕಳುಹಿಸಬಹುದು ಮತ್ತು ಪ್ರತಿ ಪ್ರತಿನಿಧಿ ಒಂದು ಮತ ಚಲಾಯಿಸಲು ಅರ್ಹತೆ ಪಡೆದಿದ್ಧಾರೆ.

andolanait

Recent Posts

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

3 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

3 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

3 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

3 hours ago

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

13 hours ago