ಇಂದು ( ಡಿಸೆಂಬರ್ 1 ) ಸಂಜೆ 7 ಗಂಟೆಗೆ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ನಾಲ್ಕನೇ ಟಿ ಟ್ವೆಂಟಿ ಪಂದ್ಯ ಚತ್ತೀಸ್ಗಢದ ಶಹೀದ್ ವೀರ್ ನಾರಾಯಣ್ ಸಿಂಗ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಜರುಗಲಿದೆ. ಐದು ಪಂದ್ಯಗಳ ಸರಣಿಯಲ್ಲಿ ಇಲ್ಲಿಯವರೆಗೂ 3 ಪಂದ್ಯಗಳು ಜರುಗಿದ್ದು, ಎರಡರಲ್ಲಿ ಟೀಮ್ ಇಂಡಿಯಾ ಗೆದ್ದಿದ್ದರೆ, ಇನ್ನುಳಿದ ಒಂದು ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆದ್ದಿದೆ. ಹೀಗಾಗಿ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಸರಣಿ ಜಯ ಸಾಧಿಸಲಿದ್ದು, ಈ ಮಹತ್ವದ ಪಂದ್ಯಕ್ಕೆ ಇದೀಗ ಕರೆಂಟ್ ಬಿಲ್ ಕಂಟಕ ಎದುರಾಗಿದೆ.
ಹೌದು, 2009ರಿಂದ ಈ ಕ್ರೀಡಾಂಗಣದ ಕರೆಂಟ್ ಬಿಲ್ ಪಾವತಿಸಿಲ್ಲ ಎಂಬ ಕಾರಣಕ್ಕೆ ಐದು ವರ್ಷಗಳ ಹಿಂದೆಯೇ ಇಲ್ಲಿನ ಕರೆಂಟ್ ಕನೆಕ್ಷನ್ ಅನ್ನು ವಿದ್ಯುತ್ ಸರಬರಾಜು ಕಂಪನಿ ಕಟ್ ಮಾಡಿದೆ. ಅಲ್ಲದೇ ಸಂಬಂಧಿಸಿದ ಇಲಾಖೆಗಳಿಗೆ ನೋಟಿಸ್ ಸಹ ನೀಡಲಾಗಿದೆ. ಆದರೂ ಸಹ ಈ ಬಗ್ಗೆ ಯಾವುದೇ ಪಾವತಿ ಬಾರದ ಕಾರಣ ಸ್ಟೇಡಿಯಂಗೆ ವಿದ್ಯುತ್ ಸರಬರಾಜನ್ನು ಮತ್ತೆ ಆರಂಭಿಸಲಾಗಿಲ್ಲ. ಒಟ್ಟು 3.16 ಕೋಟಿ ರೂಪಾಯಿಗಳಷ್ಟು ಕರೆಂಟ್ ಬಿಲ್ ಅನ್ನು ಸ್ಟೇಡಿಯಂ ಕಟ್ಟಬೇಕಿದೆ.
ಹೀಗಾಗಿ ಈ ಇಂದು ನಡೆಯಲಿರುವ ಪಂದ್ಯಕ್ಕೆ ವಿದ್ಯುತ್ ಸರಬರಾಜನ್ನು ಹೇಗೆ ಮಾಡಲಾಗುತ್ತದೆ, ಇದರಿಂದ ಪಂದ್ಯಕ್ಕೆ ಅಡ್ಡಿಯಾಗುತ್ತಾ ಎಂಬ ಪ್ರಶ್ನೆಗಳು ಎದ್ದಿವೆ. ಇನ್ನು ಈ ಕ್ರೀಡಾಂಗಣದ ನಿರ್ಮಾಣದ ನಂತರದ ನಿರ್ವಹಣೆಯನ್ನು ಇಲಾಖೆಗೆ ಹಸ್ತಾಂತರಿಸಲಾಗಿದ್ದು ಉಳಿದ ವೆಚ್ಚವನ್ನು ಕ್ರೀಡಾ ಇಲಾಖೆ ಪಾವತಿಸಬೇಕಿತ್ತು. ಆದರೆ ಈ ಕುರಿತು ಎರಡೂ ಇಲಾಖೆಗಳು ಪರಸ್ಪರ ಆರೋಪ ಮಾಡಿಕೊಳ್ಳುತ್ತಿವೆ. ಇನ್ನು ವಿದ್ಯುತ್ ಕಡಿತಗೊಂಡ ನಂತರ ಇಲ್ಲಿ 3 ಅಂತಾರಾಷ್ಟ್ರೀಯ ಪಂದ್ಯಗಳು ಜರುಗಿದ್ದು ಈ ಎಲ್ಲಾ ಪಂದ್ಯಗಳನ್ನು ನಡೆಸಲು ಜನರೇಟರ್ ಬಳಸಲಾಗಿತ್ತು ಎನ್ನಲಾಗಿದೆ. ಅದೇ ರೀತಿ ಇಂದಿನ ಪಂದ್ಯಕ್ಕೂ ಜನರೇಟರ್ ಬಳಸಿಯೇ ಜನರೇಟರ್ ಓಡಿಸಲಾಗುತ್ತೆ ಎನ್ನಲಾಗುತ್ತಿದೆ.
ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…
ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…
ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…
ಕೆ.ಎಸ್. ಚಂದ್ರಶೇಖರ್ ಮೂರ್ತಿ ದುಸ್ಥಿತಿಯಲ್ಲಿ ದೇಶದ ಪ್ರಪ್ರಥಮ ತಗಡೂರು ಖಾದಿ ಕೇಂದ್ರ ಜ.೩೦, ೧೯೪೮ರಂದು ಅಹಿಂಸಾ ಪ್ರತಿಪಾದಕ, ಸ್ವಾತಂತ್ರ್ಯ ಹೋರಾಟಗಾರ…
ಹೊಸ ವರ್ಷದಲ್ಲಿ ಕನ್ನಡ ಚಿತ್ರರಂಗದ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ನಿರ್ಮಾಪಕರ ಸಂಘ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಗಳ ಚುನಾವಣೆಯ ಬಿರುಸು,…
ಚಾಮರಾಜನಗರ: ಚಳಿ ಇನ್ನೂ ದೂರ ಸರಿದಿಲ್ಲ. ಆದರೂ ಬಿಸಿಲು ಬೆವರು ಹರಿಯುವ ಮಟ್ಟಿಗೆ ಸುಡುತ್ತಿದೆ. ನೆಲ ದಿನೇ ದಿನೇ ಕಾದ…