ಕ್ರೀಡೆ

ಕೋಟ್ಯಂತರ ರೂಪಾಯಿ ಕರೆಂಟ್‌ ಬಿಲ್ ಕಟ್ಟದ ಸ್ಟೇಡಿಯಂ; ಭಾರತ vs ಆಸ್ಟ್ರೇಲಿಯಾ 4ನೇ ಟಿ20 ಪಂದ್ಯ ನಡೆಯುತ್ತಾ, ಇಲ್ವಾ?

ಇಂದು ( ಡಿಸೆಂಬರ್‌ 1 ) ಸಂಜೆ 7 ಗಂಟೆಗೆ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ನಾಲ್ಕನೇ ಟಿ ಟ್ವೆಂಟಿ ಪಂದ್ಯ ಚತ್ತೀಸ್‌ಗಢದ ಶಹೀದ್‌ ವೀರ್‌ ನಾರಾಯಣ್‌ ಸಿಂಗ್‌ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಜರುಗಲಿದೆ. ಐದು ಪಂದ್ಯಗಳ ಸರಣಿಯಲ್ಲಿ ಇಲ್ಲಿಯವರೆಗೂ 3 ಪಂದ್ಯಗಳು ಜರುಗಿದ್ದು, ಎರಡರಲ್ಲಿ ಟೀಮ್‌ ಇಂಡಿಯಾ ಗೆದ್ದಿದ್ದರೆ, ಇನ್ನುಳಿದ ಒಂದು ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆದ್ದಿದೆ. ಹೀಗಾಗಿ ಈ ಪಂದ್ಯದಲ್ಲಿ ಟೀಮ್‌ ಇಂಡಿಯಾ ಗೆದ್ದರೆ ಸರಣಿ ಜಯ ಸಾಧಿಸಲಿದ್ದು, ಈ ಮಹತ್ವದ ಪಂದ್ಯಕ್ಕೆ ಇದೀಗ ಕರೆಂಟ್‌ ಬಿಲ್‌ ಕಂಟಕ ಎದುರಾಗಿದೆ.

ಹೌದು, 2009ರಿಂದ ಈ ಕ್ರೀಡಾಂಗಣದ ಕರೆಂಟ್‌ ಬಿಲ್‌ ಪಾವತಿಸಿಲ್ಲ ಎಂಬ ಕಾರಣಕ್ಕೆ ಐದು ವರ್ಷಗಳ ಹಿಂದೆಯೇ ಇಲ್ಲಿನ ಕರೆಂಟ್‌ ಕನೆಕ್ಷನ್‌ ಅನ್ನು ವಿದ್ಯುತ್‌ ಸರಬರಾಜು ಕಂಪನಿ ಕಟ್‌ ಮಾಡಿದೆ. ಅಲ್ಲದೇ ಸಂಬಂಧಿಸಿದ ಇಲಾಖೆಗಳಿಗೆ ನೋಟಿಸ್‌ ಸಹ ನೀಡಲಾಗಿದೆ. ಆದರೂ ಸಹ ಈ ಬಗ್ಗೆ ಯಾವುದೇ ಪಾವತಿ ಬಾರದ ಕಾರಣ ಸ್ಟೇಡಿಯಂಗೆ ವಿದ್ಯುತ್‌ ಸರಬರಾಜನ್ನು ಮತ್ತೆ ಆರಂಭಿಸಲಾಗಿಲ್ಲ. ಒಟ್ಟು 3.16 ಕೋಟಿ ರೂಪಾಯಿಗಳಷ್ಟು ಕರೆಂಟ್‌ ಬಿಲ್‌ ಅನ್ನು ಸ್ಟೇಡಿಯಂ ಕಟ್ಟಬೇಕಿದೆ.

ಹೀಗಾಗಿ ಈ ಇಂದು ನಡೆಯಲಿರುವ ಪಂದ್ಯಕ್ಕೆ ವಿದ್ಯುತ್‌ ಸರಬರಾಜನ್ನು ಹೇಗೆ ಮಾಡಲಾಗುತ್ತದೆ, ಇದರಿಂದ ಪಂದ್ಯಕ್ಕೆ ಅಡ್ಡಿಯಾಗುತ್ತಾ ಎಂಬ ಪ್ರಶ್ನೆಗಳು ಎದ್ದಿವೆ. ಇನ್ನು ಈ ಕ್ರೀಡಾಂಗಣದ ನಿರ್ಮಾಣದ ನಂತರದ ನಿರ್ವಹಣೆಯನ್ನು ಇಲಾಖೆಗೆ ಹಸ್ತಾಂತರಿಸಲಾಗಿದ್ದು ಉಳಿದ ವೆಚ್ಚವನ್ನು ಕ್ರೀಡಾ ಇಲಾಖೆ ಪಾವತಿಸಬೇಕಿತ್ತು. ಆದರೆ ಈ ಕುರಿತು ಎರಡೂ ಇಲಾಖೆಗಳು ಪರಸ್ಪರ ಆರೋಪ ಮಾಡಿಕೊಳ್ಳುತ್ತಿವೆ. ಇನ್ನು ವಿದ್ಯುತ್‌ ಕಡಿತಗೊಂಡ ನಂತರ ಇಲ್ಲಿ 3 ಅಂತಾರಾಷ್ಟ್ರೀಯ ಪಂದ್ಯಗಳು ಜರುಗಿದ್ದು ಈ ಎಲ್ಲಾ ಪಂದ್ಯಗಳನ್ನು ನಡೆಸಲು ಜನರೇಟರ್‌ ಬಳಸಲಾಗಿತ್ತು ಎನ್ನಲಾಗಿದೆ. ಅದೇ ರೀತಿ ಇಂದಿನ ಪಂದ್ಯಕ್ಕೂ ಜನರೇಟರ್‌ ಬಳಸಿಯೇ ಜನರೇಟರ್‌ ಓಡಿಸಲಾಗುತ್ತೆ ಎನ್ನಲಾಗುತ್ತಿದೆ.

andolana

Recent Posts

ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಬಂಧನ ನೋಟಿಸ್‌ ಹಿಂಪಡೆದ ಕೋರ್ಟ್‌

ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್‌ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…

6 hours ago

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…

9 hours ago

ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಬಂಧನ

ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್‌ ವಾರೆಂಟ್‌ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.…

9 hours ago

ಮಡಿಕೇರಿ| ಗಾಂಜಾ ಮಾರಾಟ: ಮೈಸೂರು ಮೂಲದ ನಾಲ್ವರ ಬಂಧನ

ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…

10 hours ago

ಹನೂರು: ಚಿರತೆ ದಾಳಿಗೆ ಹಸುವಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…

10 hours ago

ಹನೂರು: ಬಿಆರ್‌ಟಿ ವಲಯ ವ್ಯಾಪ್ತಿಯಲ್ಲಿ ಮತ್ತೆ ಕಾಡ್ಗಿಚ್ಚು: ಅರಣ್ಯ ಪ್ರದೇಶ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…

10 hours ago