ಕ್ರೀಡೆ

ಕೋಟ್ಯಂತರ ರೂಪಾಯಿ ಕರೆಂಟ್‌ ಬಿಲ್ ಕಟ್ಟದ ಸ್ಟೇಡಿಯಂ; ಭಾರತ vs ಆಸ್ಟ್ರೇಲಿಯಾ 4ನೇ ಟಿ20 ಪಂದ್ಯ ನಡೆಯುತ್ತಾ, ಇಲ್ವಾ?

ಇಂದು ( ಡಿಸೆಂಬರ್‌ 1 ) ಸಂಜೆ 7 ಗಂಟೆಗೆ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ನಾಲ್ಕನೇ ಟಿ ಟ್ವೆಂಟಿ ಪಂದ್ಯ ಚತ್ತೀಸ್‌ಗಢದ ಶಹೀದ್‌ ವೀರ್‌ ನಾರಾಯಣ್‌ ಸಿಂಗ್‌ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಜರುಗಲಿದೆ. ಐದು ಪಂದ್ಯಗಳ ಸರಣಿಯಲ್ಲಿ ಇಲ್ಲಿಯವರೆಗೂ 3 ಪಂದ್ಯಗಳು ಜರುಗಿದ್ದು, ಎರಡರಲ್ಲಿ ಟೀಮ್‌ ಇಂಡಿಯಾ ಗೆದ್ದಿದ್ದರೆ, ಇನ್ನುಳಿದ ಒಂದು ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆದ್ದಿದೆ. ಹೀಗಾಗಿ ಈ ಪಂದ್ಯದಲ್ಲಿ ಟೀಮ್‌ ಇಂಡಿಯಾ ಗೆದ್ದರೆ ಸರಣಿ ಜಯ ಸಾಧಿಸಲಿದ್ದು, ಈ ಮಹತ್ವದ ಪಂದ್ಯಕ್ಕೆ ಇದೀಗ ಕರೆಂಟ್‌ ಬಿಲ್‌ ಕಂಟಕ ಎದುರಾಗಿದೆ.

ಹೌದು, 2009ರಿಂದ ಈ ಕ್ರೀಡಾಂಗಣದ ಕರೆಂಟ್‌ ಬಿಲ್‌ ಪಾವತಿಸಿಲ್ಲ ಎಂಬ ಕಾರಣಕ್ಕೆ ಐದು ವರ್ಷಗಳ ಹಿಂದೆಯೇ ಇಲ್ಲಿನ ಕರೆಂಟ್‌ ಕನೆಕ್ಷನ್‌ ಅನ್ನು ವಿದ್ಯುತ್‌ ಸರಬರಾಜು ಕಂಪನಿ ಕಟ್‌ ಮಾಡಿದೆ. ಅಲ್ಲದೇ ಸಂಬಂಧಿಸಿದ ಇಲಾಖೆಗಳಿಗೆ ನೋಟಿಸ್‌ ಸಹ ನೀಡಲಾಗಿದೆ. ಆದರೂ ಸಹ ಈ ಬಗ್ಗೆ ಯಾವುದೇ ಪಾವತಿ ಬಾರದ ಕಾರಣ ಸ್ಟೇಡಿಯಂಗೆ ವಿದ್ಯುತ್‌ ಸರಬರಾಜನ್ನು ಮತ್ತೆ ಆರಂಭಿಸಲಾಗಿಲ್ಲ. ಒಟ್ಟು 3.16 ಕೋಟಿ ರೂಪಾಯಿಗಳಷ್ಟು ಕರೆಂಟ್‌ ಬಿಲ್‌ ಅನ್ನು ಸ್ಟೇಡಿಯಂ ಕಟ್ಟಬೇಕಿದೆ.

ಹೀಗಾಗಿ ಈ ಇಂದು ನಡೆಯಲಿರುವ ಪಂದ್ಯಕ್ಕೆ ವಿದ್ಯುತ್‌ ಸರಬರಾಜನ್ನು ಹೇಗೆ ಮಾಡಲಾಗುತ್ತದೆ, ಇದರಿಂದ ಪಂದ್ಯಕ್ಕೆ ಅಡ್ಡಿಯಾಗುತ್ತಾ ಎಂಬ ಪ್ರಶ್ನೆಗಳು ಎದ್ದಿವೆ. ಇನ್ನು ಈ ಕ್ರೀಡಾಂಗಣದ ನಿರ್ಮಾಣದ ನಂತರದ ನಿರ್ವಹಣೆಯನ್ನು ಇಲಾಖೆಗೆ ಹಸ್ತಾಂತರಿಸಲಾಗಿದ್ದು ಉಳಿದ ವೆಚ್ಚವನ್ನು ಕ್ರೀಡಾ ಇಲಾಖೆ ಪಾವತಿಸಬೇಕಿತ್ತು. ಆದರೆ ಈ ಕುರಿತು ಎರಡೂ ಇಲಾಖೆಗಳು ಪರಸ್ಪರ ಆರೋಪ ಮಾಡಿಕೊಳ್ಳುತ್ತಿವೆ. ಇನ್ನು ವಿದ್ಯುತ್‌ ಕಡಿತಗೊಂಡ ನಂತರ ಇಲ್ಲಿ 3 ಅಂತಾರಾಷ್ಟ್ರೀಯ ಪಂದ್ಯಗಳು ಜರುಗಿದ್ದು ಈ ಎಲ್ಲಾ ಪಂದ್ಯಗಳನ್ನು ನಡೆಸಲು ಜನರೇಟರ್‌ ಬಳಸಲಾಗಿತ್ತು ಎನ್ನಲಾಗಿದೆ. ಅದೇ ರೀತಿ ಇಂದಿನ ಪಂದ್ಯಕ್ಕೂ ಜನರೇಟರ್‌ ಬಳಸಿಯೇ ಜನರೇಟರ್‌ ಓಡಿಸಲಾಗುತ್ತೆ ಎನ್ನಲಾಗುತ್ತಿದೆ.

andolana

Recent Posts

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…

3 hours ago

ಓದುಗರ ಪತ್ರ: ಶಾಂತಿ, ಸೌಹಾರ್ದ ಸಭೆಗಳು ಹೆಚ್ಚು ಹೆಚ್ಚು ನಡೆಯಲಿ

ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…

3 hours ago

ಓದುಗರ ಪತ್ರ: ಶ್ರೇಷ್ಠ ಕಾರ್ಮಿಕ ಧುರೀಣ ಅನಂತ ಸುಬ್ಬರಾವ್

ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…

3 hours ago

ಬಾಪೂಜಿ ನೆನಪಲ್ಲಿ; ಖಾದಿ ಕೇಂದ್ರದ ಅಂಗಳದಲ್ಲಿ…

ಕೆ.ಎಸ್. ಚಂದ್ರಶೇಖರ್ ಮೂರ್ತಿ ದುಸ್ಥಿತಿಯಲ್ಲಿ ದೇಶದ ಪ್ರಪ್ರಥಮ ತಗಡೂರು ಖಾದಿ ಕೇಂದ್ರ  ಜ.೩೦, ೧೯೪೮ರಂದು ಅಹಿಂಸಾ ಪ್ರತಿಪಾದಕ, ಸ್ವಾತಂತ್ರ್ಯ ಹೋರಾಟಗಾರ…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ನಿರ್ಮಾಪಕರ ಸಂಘ, ವಾಣಿಜ್ಯ ಮಂಡಳಿ ಚುನಾವಣೆ, ಚಿತ್ರನಗರಿ, ಒಟಿಟಿ ವರ್ತಮಾನ

ಹೊಸ ವರ್ಷದಲ್ಲಿ ಕನ್ನಡ ಚಿತ್ರರಂಗದ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ನಿರ್ಮಾಪಕರ ಸಂಘ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಗಳ ಚುನಾವಣೆಯ ಬಿರುಸು,…

3 hours ago

ಚಳಿ ಇರುವಾಗಲೇ ದಿನಕ್ಕೊಂದು ‘ಅಗ್ನಿ ಕರೆ’

ಚಾಮರಾಜನಗರ: ಚಳಿ ಇನ್ನೂ ದೂರ ಸರಿದಿಲ್ಲ. ಆದರೂ ಬಿಸಿಲು ಬೆವರು ಹರಿಯುವ ಮಟ್ಟಿಗೆ ಸುಡುತ್ತಿದೆ. ನೆಲ ದಿನೇ ದಿನೇ ಕಾದ…

3 hours ago