ಕ್ರೀಡೆ

ಕೋಟ್ಯಂತರ ರೂಪಾಯಿ ಕರೆಂಟ್‌ ಬಿಲ್ ಕಟ್ಟದ ಸ್ಟೇಡಿಯಂ; ಭಾರತ vs ಆಸ್ಟ್ರೇಲಿಯಾ 4ನೇ ಟಿ20 ಪಂದ್ಯ ನಡೆಯುತ್ತಾ, ಇಲ್ವಾ?

ಇಂದು ( ಡಿಸೆಂಬರ್‌ 1 ) ಸಂಜೆ 7 ಗಂಟೆಗೆ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ನಾಲ್ಕನೇ ಟಿ ಟ್ವೆಂಟಿ ಪಂದ್ಯ ಚತ್ತೀಸ್‌ಗಢದ ಶಹೀದ್‌ ವೀರ್‌ ನಾರಾಯಣ್‌ ಸಿಂಗ್‌ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಜರುಗಲಿದೆ. ಐದು ಪಂದ್ಯಗಳ ಸರಣಿಯಲ್ಲಿ ಇಲ್ಲಿಯವರೆಗೂ 3 ಪಂದ್ಯಗಳು ಜರುಗಿದ್ದು, ಎರಡರಲ್ಲಿ ಟೀಮ್‌ ಇಂಡಿಯಾ ಗೆದ್ದಿದ್ದರೆ, ಇನ್ನುಳಿದ ಒಂದು ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆದ್ದಿದೆ. ಹೀಗಾಗಿ ಈ ಪಂದ್ಯದಲ್ಲಿ ಟೀಮ್‌ ಇಂಡಿಯಾ ಗೆದ್ದರೆ ಸರಣಿ ಜಯ ಸಾಧಿಸಲಿದ್ದು, ಈ ಮಹತ್ವದ ಪಂದ್ಯಕ್ಕೆ ಇದೀಗ ಕರೆಂಟ್‌ ಬಿಲ್‌ ಕಂಟಕ ಎದುರಾಗಿದೆ.

ಹೌದು, 2009ರಿಂದ ಈ ಕ್ರೀಡಾಂಗಣದ ಕರೆಂಟ್‌ ಬಿಲ್‌ ಪಾವತಿಸಿಲ್ಲ ಎಂಬ ಕಾರಣಕ್ಕೆ ಐದು ವರ್ಷಗಳ ಹಿಂದೆಯೇ ಇಲ್ಲಿನ ಕರೆಂಟ್‌ ಕನೆಕ್ಷನ್‌ ಅನ್ನು ವಿದ್ಯುತ್‌ ಸರಬರಾಜು ಕಂಪನಿ ಕಟ್‌ ಮಾಡಿದೆ. ಅಲ್ಲದೇ ಸಂಬಂಧಿಸಿದ ಇಲಾಖೆಗಳಿಗೆ ನೋಟಿಸ್‌ ಸಹ ನೀಡಲಾಗಿದೆ. ಆದರೂ ಸಹ ಈ ಬಗ್ಗೆ ಯಾವುದೇ ಪಾವತಿ ಬಾರದ ಕಾರಣ ಸ್ಟೇಡಿಯಂಗೆ ವಿದ್ಯುತ್‌ ಸರಬರಾಜನ್ನು ಮತ್ತೆ ಆರಂಭಿಸಲಾಗಿಲ್ಲ. ಒಟ್ಟು 3.16 ಕೋಟಿ ರೂಪಾಯಿಗಳಷ್ಟು ಕರೆಂಟ್‌ ಬಿಲ್‌ ಅನ್ನು ಸ್ಟೇಡಿಯಂ ಕಟ್ಟಬೇಕಿದೆ.

ಹೀಗಾಗಿ ಈ ಇಂದು ನಡೆಯಲಿರುವ ಪಂದ್ಯಕ್ಕೆ ವಿದ್ಯುತ್‌ ಸರಬರಾಜನ್ನು ಹೇಗೆ ಮಾಡಲಾಗುತ್ತದೆ, ಇದರಿಂದ ಪಂದ್ಯಕ್ಕೆ ಅಡ್ಡಿಯಾಗುತ್ತಾ ಎಂಬ ಪ್ರಶ್ನೆಗಳು ಎದ್ದಿವೆ. ಇನ್ನು ಈ ಕ್ರೀಡಾಂಗಣದ ನಿರ್ಮಾಣದ ನಂತರದ ನಿರ್ವಹಣೆಯನ್ನು ಇಲಾಖೆಗೆ ಹಸ್ತಾಂತರಿಸಲಾಗಿದ್ದು ಉಳಿದ ವೆಚ್ಚವನ್ನು ಕ್ರೀಡಾ ಇಲಾಖೆ ಪಾವತಿಸಬೇಕಿತ್ತು. ಆದರೆ ಈ ಕುರಿತು ಎರಡೂ ಇಲಾಖೆಗಳು ಪರಸ್ಪರ ಆರೋಪ ಮಾಡಿಕೊಳ್ಳುತ್ತಿವೆ. ಇನ್ನು ವಿದ್ಯುತ್‌ ಕಡಿತಗೊಂಡ ನಂತರ ಇಲ್ಲಿ 3 ಅಂತಾರಾಷ್ಟ್ರೀಯ ಪಂದ್ಯಗಳು ಜರುಗಿದ್ದು ಈ ಎಲ್ಲಾ ಪಂದ್ಯಗಳನ್ನು ನಡೆಸಲು ಜನರೇಟರ್‌ ಬಳಸಲಾಗಿತ್ತು ಎನ್ನಲಾಗಿದೆ. ಅದೇ ರೀತಿ ಇಂದಿನ ಪಂದ್ಯಕ್ಕೂ ಜನರೇಟರ್‌ ಬಳಸಿಯೇ ಜನರೇಟರ್‌ ಓಡಿಸಲಾಗುತ್ತೆ ಎನ್ನಲಾಗುತ್ತಿದೆ.

andolana

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

34 mins ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

37 mins ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

43 mins ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

49 mins ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

13 hours ago