ಕ್ರೀಡೆ

ಕೋಟ್ಯಂತರ ರೂಪಾಯಿ ಕರೆಂಟ್‌ ಬಿಲ್ ಕಟ್ಟದ ಸ್ಟೇಡಿಯಂ; ಭಾರತ vs ಆಸ್ಟ್ರೇಲಿಯಾ 4ನೇ ಟಿ20 ಪಂದ್ಯ ನಡೆಯುತ್ತಾ, ಇಲ್ವಾ?

ಇಂದು ( ಡಿಸೆಂಬರ್‌ 1 ) ಸಂಜೆ 7 ಗಂಟೆಗೆ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ನಾಲ್ಕನೇ ಟಿ ಟ್ವೆಂಟಿ ಪಂದ್ಯ ಚತ್ತೀಸ್‌ಗಢದ ಶಹೀದ್‌ ವೀರ್‌ ನಾರಾಯಣ್‌ ಸಿಂಗ್‌ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಜರುಗಲಿದೆ. ಐದು ಪಂದ್ಯಗಳ ಸರಣಿಯಲ್ಲಿ ಇಲ್ಲಿಯವರೆಗೂ 3 ಪಂದ್ಯಗಳು ಜರುಗಿದ್ದು, ಎರಡರಲ್ಲಿ ಟೀಮ್‌ ಇಂಡಿಯಾ ಗೆದ್ದಿದ್ದರೆ, ಇನ್ನುಳಿದ ಒಂದು ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆದ್ದಿದೆ. ಹೀಗಾಗಿ ಈ ಪಂದ್ಯದಲ್ಲಿ ಟೀಮ್‌ ಇಂಡಿಯಾ ಗೆದ್ದರೆ ಸರಣಿ ಜಯ ಸಾಧಿಸಲಿದ್ದು, ಈ ಮಹತ್ವದ ಪಂದ್ಯಕ್ಕೆ ಇದೀಗ ಕರೆಂಟ್‌ ಬಿಲ್‌ ಕಂಟಕ ಎದುರಾಗಿದೆ.

ಹೌದು, 2009ರಿಂದ ಈ ಕ್ರೀಡಾಂಗಣದ ಕರೆಂಟ್‌ ಬಿಲ್‌ ಪಾವತಿಸಿಲ್ಲ ಎಂಬ ಕಾರಣಕ್ಕೆ ಐದು ವರ್ಷಗಳ ಹಿಂದೆಯೇ ಇಲ್ಲಿನ ಕರೆಂಟ್‌ ಕನೆಕ್ಷನ್‌ ಅನ್ನು ವಿದ್ಯುತ್‌ ಸರಬರಾಜು ಕಂಪನಿ ಕಟ್‌ ಮಾಡಿದೆ. ಅಲ್ಲದೇ ಸಂಬಂಧಿಸಿದ ಇಲಾಖೆಗಳಿಗೆ ನೋಟಿಸ್‌ ಸಹ ನೀಡಲಾಗಿದೆ. ಆದರೂ ಸಹ ಈ ಬಗ್ಗೆ ಯಾವುದೇ ಪಾವತಿ ಬಾರದ ಕಾರಣ ಸ್ಟೇಡಿಯಂಗೆ ವಿದ್ಯುತ್‌ ಸರಬರಾಜನ್ನು ಮತ್ತೆ ಆರಂಭಿಸಲಾಗಿಲ್ಲ. ಒಟ್ಟು 3.16 ಕೋಟಿ ರೂಪಾಯಿಗಳಷ್ಟು ಕರೆಂಟ್‌ ಬಿಲ್‌ ಅನ್ನು ಸ್ಟೇಡಿಯಂ ಕಟ್ಟಬೇಕಿದೆ.

ಹೀಗಾಗಿ ಈ ಇಂದು ನಡೆಯಲಿರುವ ಪಂದ್ಯಕ್ಕೆ ವಿದ್ಯುತ್‌ ಸರಬರಾಜನ್ನು ಹೇಗೆ ಮಾಡಲಾಗುತ್ತದೆ, ಇದರಿಂದ ಪಂದ್ಯಕ್ಕೆ ಅಡ್ಡಿಯಾಗುತ್ತಾ ಎಂಬ ಪ್ರಶ್ನೆಗಳು ಎದ್ದಿವೆ. ಇನ್ನು ಈ ಕ್ರೀಡಾಂಗಣದ ನಿರ್ಮಾಣದ ನಂತರದ ನಿರ್ವಹಣೆಯನ್ನು ಇಲಾಖೆಗೆ ಹಸ್ತಾಂತರಿಸಲಾಗಿದ್ದು ಉಳಿದ ವೆಚ್ಚವನ್ನು ಕ್ರೀಡಾ ಇಲಾಖೆ ಪಾವತಿಸಬೇಕಿತ್ತು. ಆದರೆ ಈ ಕುರಿತು ಎರಡೂ ಇಲಾಖೆಗಳು ಪರಸ್ಪರ ಆರೋಪ ಮಾಡಿಕೊಳ್ಳುತ್ತಿವೆ. ಇನ್ನು ವಿದ್ಯುತ್‌ ಕಡಿತಗೊಂಡ ನಂತರ ಇಲ್ಲಿ 3 ಅಂತಾರಾಷ್ಟ್ರೀಯ ಪಂದ್ಯಗಳು ಜರುಗಿದ್ದು ಈ ಎಲ್ಲಾ ಪಂದ್ಯಗಳನ್ನು ನಡೆಸಲು ಜನರೇಟರ್‌ ಬಳಸಲಾಗಿತ್ತು ಎನ್ನಲಾಗಿದೆ. ಅದೇ ರೀತಿ ಇಂದಿನ ಪಂದ್ಯಕ್ಕೂ ಜನರೇಟರ್‌ ಬಳಸಿಯೇ ಜನರೇಟರ್‌ ಓಡಿಸಲಾಗುತ್ತೆ ಎನ್ನಲಾಗುತ್ತಿದೆ.

andolana

Recent Posts

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

8 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

12 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

13 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

13 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

18 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

18 hours ago