ಕ್ರೀಡೆ

ಕೋಟ್ಯಂತರ ರೂಪಾಯಿ ಕರೆಂಟ್‌ ಬಿಲ್ ಕಟ್ಟದ ಸ್ಟೇಡಿಯಂ; ಭಾರತ vs ಆಸ್ಟ್ರೇಲಿಯಾ 4ನೇ ಟಿ20 ಪಂದ್ಯ ನಡೆಯುತ್ತಾ, ಇಲ್ವಾ?

ಇಂದು ( ಡಿಸೆಂಬರ್‌ 1 ) ಸಂಜೆ 7 ಗಂಟೆಗೆ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ನಾಲ್ಕನೇ ಟಿ ಟ್ವೆಂಟಿ ಪಂದ್ಯ ಚತ್ತೀಸ್‌ಗಢದ ಶಹೀದ್‌ ವೀರ್‌ ನಾರಾಯಣ್‌ ಸಿಂಗ್‌ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಜರುಗಲಿದೆ. ಐದು ಪಂದ್ಯಗಳ ಸರಣಿಯಲ್ಲಿ ಇಲ್ಲಿಯವರೆಗೂ 3 ಪಂದ್ಯಗಳು ಜರುಗಿದ್ದು, ಎರಡರಲ್ಲಿ ಟೀಮ್‌ ಇಂಡಿಯಾ ಗೆದ್ದಿದ್ದರೆ, ಇನ್ನುಳಿದ ಒಂದು ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆದ್ದಿದೆ. ಹೀಗಾಗಿ ಈ ಪಂದ್ಯದಲ್ಲಿ ಟೀಮ್‌ ಇಂಡಿಯಾ ಗೆದ್ದರೆ ಸರಣಿ ಜಯ ಸಾಧಿಸಲಿದ್ದು, ಈ ಮಹತ್ವದ ಪಂದ್ಯಕ್ಕೆ ಇದೀಗ ಕರೆಂಟ್‌ ಬಿಲ್‌ ಕಂಟಕ ಎದುರಾಗಿದೆ.

ಹೌದು, 2009ರಿಂದ ಈ ಕ್ರೀಡಾಂಗಣದ ಕರೆಂಟ್‌ ಬಿಲ್‌ ಪಾವತಿಸಿಲ್ಲ ಎಂಬ ಕಾರಣಕ್ಕೆ ಐದು ವರ್ಷಗಳ ಹಿಂದೆಯೇ ಇಲ್ಲಿನ ಕರೆಂಟ್‌ ಕನೆಕ್ಷನ್‌ ಅನ್ನು ವಿದ್ಯುತ್‌ ಸರಬರಾಜು ಕಂಪನಿ ಕಟ್‌ ಮಾಡಿದೆ. ಅಲ್ಲದೇ ಸಂಬಂಧಿಸಿದ ಇಲಾಖೆಗಳಿಗೆ ನೋಟಿಸ್‌ ಸಹ ನೀಡಲಾಗಿದೆ. ಆದರೂ ಸಹ ಈ ಬಗ್ಗೆ ಯಾವುದೇ ಪಾವತಿ ಬಾರದ ಕಾರಣ ಸ್ಟೇಡಿಯಂಗೆ ವಿದ್ಯುತ್‌ ಸರಬರಾಜನ್ನು ಮತ್ತೆ ಆರಂಭಿಸಲಾಗಿಲ್ಲ. ಒಟ್ಟು 3.16 ಕೋಟಿ ರೂಪಾಯಿಗಳಷ್ಟು ಕರೆಂಟ್‌ ಬಿಲ್‌ ಅನ್ನು ಸ್ಟೇಡಿಯಂ ಕಟ್ಟಬೇಕಿದೆ.

ಹೀಗಾಗಿ ಈ ಇಂದು ನಡೆಯಲಿರುವ ಪಂದ್ಯಕ್ಕೆ ವಿದ್ಯುತ್‌ ಸರಬರಾಜನ್ನು ಹೇಗೆ ಮಾಡಲಾಗುತ್ತದೆ, ಇದರಿಂದ ಪಂದ್ಯಕ್ಕೆ ಅಡ್ಡಿಯಾಗುತ್ತಾ ಎಂಬ ಪ್ರಶ್ನೆಗಳು ಎದ್ದಿವೆ. ಇನ್ನು ಈ ಕ್ರೀಡಾಂಗಣದ ನಿರ್ಮಾಣದ ನಂತರದ ನಿರ್ವಹಣೆಯನ್ನು ಇಲಾಖೆಗೆ ಹಸ್ತಾಂತರಿಸಲಾಗಿದ್ದು ಉಳಿದ ವೆಚ್ಚವನ್ನು ಕ್ರೀಡಾ ಇಲಾಖೆ ಪಾವತಿಸಬೇಕಿತ್ತು. ಆದರೆ ಈ ಕುರಿತು ಎರಡೂ ಇಲಾಖೆಗಳು ಪರಸ್ಪರ ಆರೋಪ ಮಾಡಿಕೊಳ್ಳುತ್ತಿವೆ. ಇನ್ನು ವಿದ್ಯುತ್‌ ಕಡಿತಗೊಂಡ ನಂತರ ಇಲ್ಲಿ 3 ಅಂತಾರಾಷ್ಟ್ರೀಯ ಪಂದ್ಯಗಳು ಜರುಗಿದ್ದು ಈ ಎಲ್ಲಾ ಪಂದ್ಯಗಳನ್ನು ನಡೆಸಲು ಜನರೇಟರ್‌ ಬಳಸಲಾಗಿತ್ತು ಎನ್ನಲಾಗಿದೆ. ಅದೇ ರೀತಿ ಇಂದಿನ ಪಂದ್ಯಕ್ಕೂ ಜನರೇಟರ್‌ ಬಳಸಿಯೇ ಜನರೇಟರ್‌ ಓಡಿಸಲಾಗುತ್ತೆ ಎನ್ನಲಾಗುತ್ತಿದೆ.

andolana

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

8 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

9 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

10 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

11 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

16 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

16 hours ago