ಶ್ರೀಲಂಕಾ: ಎಮರ್ಜಿಂಗ್ ತಂಡಗಳ ನಡುವಣ ಏಷ್ಯಾಕಪ್ ಫೈನಲ್ ಪಂದ್ಯಕ್ಕೆ ಕೌಂಟ್ ಡೌನ್ ಶುರುವಾಗಿದೆ. ಕೊಲಂಬೊದ ಆರ್. ಪ್ರೇಮದಾಸ ಮೈದಾನದಲ್ಲಿ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಎ ಹಾಗೂ ಪಾಕಿಸ್ತಾನ್ ಎ ತಂಡಗಳು ಮುಖಾಮುಖಿಯಾಗಲಿದೆ. ಇದಕ್ಕೂ ಮುನ್ನ ಉಭಯ ತಂಡಗಳು ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಪಾಕ್ ತಂಡವನ್ನು ಟೀಮ್ ಇಂಡಿಯಾ 8 ವಿಕೆಟ್ಗಳಿಂದ ಮಣಿಸಿತ್ತು.
ಆದರೆ ಸೆಮಿಫೈನಲ್ನಲ್ಲಿ ಭರ್ಜರಿ ಕಂಬ್ಯಾಕ್ ಮಾಡುವ ಮೂಲಕ ಪಾಕಿಸ್ತಾನ್ ತಂಡವು ಫೈನಲ್ಗೆ ಲಗ್ಗೆಯಿಟ್ಟಿದೆ. ಮೊದಲ ಸೆಮಿಫೈನಲ್ನಲ್ಲಿ ಆತಿಥೇಯ ಶ್ರೀಲಂಕಾ ವಿರುದ್ಧ ಪಾಕ್ ತಂಡವು 60 ರನ್ಗಳಿಂದ ಜಯ ಸಾಧಿಸಿದರೆ ಫೈನಲ್ಗೆ ಪ್ರವೇಶಿಸಿದೆ.
ಇತ್ತ ಟೀಮ್ ಇಂಡಿಯಾ ಕಿರಿಯರು ಸೆಮಿಫೈನಲ್ನಲ್ಲಿ ಬಾಂಗ್ಲಾದೇಶ್ ತಂಡವನ್ನು 51 ರನ್ಗಳಿಂದ ಬಗ್ಗು ಬಡಿದು ಫೈನಲ್ಗೆ ಎಂಟ್ರಿ ಕೊಟ್ಟಿದೆ. ಇದೀಗ ಭಾನುವಾರ ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ-ಪಾಕಿಸ್ತಾನ್ ಮತ್ತೆ ಮುಖಾಮುಖಿಯಾಗುತ್ತಿರುವುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಈ ಪಂದ್ಯದ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.
ಈ ಪಂದ್ಯವು ಭಾನುವಾರ, ಅಂದರೆ ಜುಲೈ 23 ರಂದು ಶ್ರೀಲಂಕಾದ ಆರ್. ಪ್ರೇಮದಾಸ ಮೈದಾನದಲ್ಲಿ ನಡೆಯಲಿದೆ.
ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಯಿಂದ ಭಾರತ-ಪಾಕಿಸ್ತಾನ್ ನಡುವಣ ಪಂದ್ಯ ಆರಂಭವಾಗಲಿದೆ.
ಭಾರತ ಎ ವಿರುದ್ಧ ಪಾಕಿಸ್ತಾನ ಎ ನಡುವಣ ಫೈನಲ್ ಪಂದ್ಯವನ್ನು ಭಾರತದಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ ಚಾನೆಲ್ಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ.
ಈ ಪಂದ್ಯದ ಲೈವ್ ಸ್ಟ್ರೀಮಿಂಗ್ ಫ್ಯಾನ್ಕೋಡ್ ಅಪ್ಲಿಕೇಶನ್ ಮತ್ತು ವೆಬ್ಸೈಟ್ನಲ್ಲಿ ಲಭ್ಯವಿರುತ್ತದೆ.
ಭಾರತ ಎ ತಂಡ: ಸಾಯಿ ಸುದರ್ಶನ್, ಅಭಿಷೇಕ್ ಶರ್ಮಾ, ನಿಕಿನ್ ಜೋಸ್, ಪ್ರದೋಶ್ ರಂಜನ್ ಪಾಲ್, ಯಶ್ ಧುಲ್ (ನಾಯಕ), ರಿಯಾನ್ ಪರಾಗ್, ನಿಶಾಂತ್ ಸಿಂಧು, ಪ್ರಭ್ಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ಮಾನವ್ ಸುತಾರ್, ಯುವರಾಜ್ಸಿನ್ಹ್ ದೋಡಿಯಾ, ಹರ್ಷಿತ್ ರಾಣಾ, ಆಕಾಶ್ ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ರಾಜವರ್ಧನ್ ಹಂಗರ್ಗೇಕರ್.
ಪಾಕಿಸ್ತಾನ್ ಎ ತಂಡ: ಮೊಹಮ್ಮದ್ ಹ್ಯಾರಿಸ್ (ನಾಯಕ), ಒಮೈರ್ ಬಿನ್ ಯೂಸುಫ್, ಅಮದ್ ಬಟ್, ಅರ್ಷದ್ ಇಕ್ಬಾಲ್, ಹಸೀಬುಲ್ಲಾ, ಕಮ್ರಾನ್ ಗುಲಾಮ್, ಮೆಹ್ರಾನ್ ಮುಮ್ತಾಜ್, ಮುಬಾಸಿರ್ ಖಾನ್, ಮೊಹಮ್ಮದ್ ವಾಸಿಂ ಜೂನಿಯರ್, ಖಾಸಿಮ್ ಅಕ್ರಮ್, ಸಾಹಿಬ್ಜಾದಾ ಫರ್ಹಾನ್, ಸೈಮ್ ಅಯೂಬ್ , ಸುಫಿಯಾನ್ ಮುಖೀಮ್ ಮತ್ತು ತಯ್ಯಬ್ ತಾಹಿರ್.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…