ಕ್ರೀಡೆ

ಎಮರ್ಜಿಂಗ್ ಏಷ್ಯಾಕಪ್‌| ಭಾರತ-ಪಾಕ್ ನಡುವೆ ಫೈನಲ್ ಫೈಟ್: ನೇರ ಪ್ರಸಾರದ ಮಾಹಿತಿ ಇಲ್ಲಿದೆ

ಶ್ರೀಲಂಕಾ: ಎಮರ್ಜಿಂಗ್ ತಂಡಗಳ ನಡುವಣ ಏಷ್ಯಾಕಪ್‌ ಫೈನಲ್ ಪಂದ್ಯಕ್ಕೆ ಕೌಂಟ್ ಡೌನ್ ಶುರುವಾಗಿದೆ. ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಎ ಹಾಗೂ ಪಾಕಿಸ್ತಾನ್ ಎ ತಂಡಗಳು ಮುಖಾಮುಖಿಯಾಗಲಿದೆ. ಇದಕ್ಕೂ ಮುನ್ನ ಉಭಯ ತಂಡಗಳು ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಪಾಕ್ ತಂಡವನ್ನು ಟೀಮ್ ಇಂಡಿಯಾ 8 ವಿಕೆಟ್​ಗಳಿಂದ ಮಣಿಸಿತ್ತು.

ಆದರೆ ಸೆಮಿಫೈನಲ್​ನಲ್ಲಿ ಭರ್ಜರಿ ಕಂಬ್ಯಾಕ್ ಮಾಡುವ ಮೂಲಕ ಪಾಕಿಸ್ತಾನ್ ತಂಡವು ಫೈನಲ್​ಗೆ ಲಗ್ಗೆಯಿಟ್ಟಿದೆ. ಮೊದಲ ಸೆಮಿಫೈನಲ್​ನಲ್ಲಿ ಆತಿಥೇಯ ಶ್ರೀಲಂಕಾ ವಿರುದ್ಧ ಪಾಕ್ ತಂಡವು 60 ರನ್​ಗಳಿಂದ ಜಯ ಸಾಧಿಸಿದರೆ ಫೈನಲ್​ಗೆ ಪ್ರವೇಶಿಸಿದೆ.

ಇತ್ತ ಟೀಮ್ ಇಂಡಿಯಾ ಕಿರಿಯರು ಸೆಮಿಫೈನಲ್​ನಲ್ಲಿ ಬಾಂಗ್ಲಾದೇಶ್ ತಂಡವನ್ನು 51 ರನ್​ಗಳಿಂದ ಬಗ್ಗು ಬಡಿದು ಫೈನಲ್​ಗೆ ಎಂಟ್ರಿ ಕೊಟ್ಟಿದೆ. ಇದೀಗ ಭಾನುವಾರ ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ-ಪಾಕಿಸ್ತಾನ್ ಮತ್ತೆ ಮುಖಾಮುಖಿಯಾಗುತ್ತಿರುವುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಈ ಪಂದ್ಯದ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

ರಿಯರ ಏಷ್ಯಾಕಪ್​ ಫೈನಲ್ ಪಂದ್ಯ ಯಾವಾಗ?

ಈ ಪಂದ್ಯವು ಭಾನುವಾರ, ಅಂದರೆ ಜುಲೈ 23 ರಂದು ಶ್ರೀಲಂಕಾದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆಯಲಿದೆ.

ಭಾರತ-ಪಾಕಿಸ್ತಾನ್ ಫೈನಲ್ ಪಂದ್ಯ ಎಷ್ಟು ಗಂಟೆಗೆ ಶುರು?

ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಯಿಂದ ಭಾರತ-ಪಾಕಿಸ್ತಾನ್ ನಡುವಣ ಪಂದ್ಯ ಆರಂಭವಾಗಲಿದೆ.

ಯಾವ ಚಾನೆಲ್​ನಲ್ಲಿ ನೇರಪ್ರಸಾರ ವೀಕ್ಷಿಸಬಹುದು?

ಭಾರತ ಎ ವಿರುದ್ಧ ಪಾಕಿಸ್ತಾನ ಎ ನಡುವಣ ಫೈನಲ್ ಪಂದ್ಯವನ್ನು ಭಾರತದಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ ಚಾನೆಲ್​ಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ.

ಲೈವ್ ಸ್ಟೀಮಿಂಗ್ ವೀಕ್ಷಿಸುವುದು ಹೇಗೆ?

ಈ ಪಂದ್ಯದ ಲೈವ್ ಸ್ಟ್ರೀಮಿಂಗ್ ಫ್ಯಾನ್‌ಕೋಡ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತದೆ.

ಭಾರತ ಎ ತಂಡ: ಸಾಯಿ ಸುದರ್ಶನ್, ಅಭಿಷೇಕ್ ಶರ್ಮಾ, ನಿಕಿನ್ ಜೋಸ್, ಪ್ರದೋಶ್ ರಂಜನ್ ಪಾಲ್, ಯಶ್ ಧುಲ್ (ನಾಯಕ), ರಿಯಾನ್ ಪರಾಗ್, ನಿಶಾಂತ್ ಸಿಂಧು, ಪ್ರಭ್‌ಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ಮಾನವ್ ಸುತಾರ್, ಯುವರಾಜ್‌ಸಿನ್ಹ್ ದೋಡಿಯಾ, ಹರ್ಷಿತ್ ರಾಣಾ, ಆಕಾಶ್ ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ರಾಜವರ್ಧನ್ ಹಂಗರ್ಗೇಕರ್.

ಪಾಕಿಸ್ತಾನ್ ಎ ತಂಡ: ಮೊಹಮ್ಮದ್ ಹ್ಯಾರಿಸ್ (ನಾಯಕ), ಒಮೈರ್ ಬಿನ್ ಯೂಸುಫ್, ಅಮದ್ ಬಟ್, ಅರ್ಷದ್ ಇಕ್ಬಾಲ್, ಹಸೀಬುಲ್ಲಾ, ಕಮ್ರಾನ್ ಗುಲಾಮ್, ಮೆಹ್ರಾನ್ ಮುಮ್ತಾಜ್, ಮುಬಾಸಿರ್ ಖಾನ್, ಮೊಹಮ್ಮದ್ ವಾಸಿಂ ಜೂನಿಯರ್, ಖಾಸಿಮ್ ಅಕ್ರಮ್, ಸಾಹಿಬ್ಜಾದಾ ಫರ್ಹಾನ್, ಸೈಮ್ ಅಯೂಬ್ , ಸುಫಿಯಾನ್ ಮುಖೀಮ್ ಮತ್ತು ತಯ್ಯಬ್ ತಾಹಿರ್.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

10 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

10 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

11 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

13 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

16 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

16 hours ago