ಕ್ರೀಡೆ

ಹತ್ತಾರು ಅವಿಸ್ಮರಣೀಯ ಕ್ರೀಡಾಸ್ಪೂರ್ತಿಯ ಕ್ಷಣಗಳಿಗೆ ದಾಖಲಾದ ಪ್ಯಾರಿಸ್‌ ಒಲಿಂಪಿಕ್ಸ್‌

ಪ್ಯಾರಿಸ್:‌ ಪ್ಯಾರಿಸ್‌ನಲ್ಲಿ ಕಳೆದ ತಡರಾತ್ರಿ ವಿಶ್ವದ ಮಹಾನ್‌ ಕ್ರೀಡಾಮೇಳ ಒಲಿಂಪಿಕ್ಸ್‌ ಕೂಟಕ್ಕೆ ತೆರೆಬಿದ್ದಿದೆ.

ಕಳೆದ 19 ದಿನಗಳಿಂದ ಪ್ಯಾರಿಸ್‌ನಲ್ಲಿ ನಡೆದ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಈ ಬಾರಿ ಹಲವು ದಾಖಲೆಗಳು ನಿರ್ಮಾಣವಾಗಿವೆ.

ಈ ಒಲಿಂಪಿಕ್ಸ್‌ನಲ್ಲಿ ಹೊಸ ತಾರೆಗಳು ಉದಯಿಸಿದ್ದು, ಹತ್ತಾರು ಅವಿಸ್ಮರಣೀಯ ಕ್ರೀಡಾಸ್ಪೂರ್ತಿಯ ಕ್ಷಣಗಳು ದಾಖಲಾಗಿವೆ.

ಕಾರ್ಯಕ್ರಮದಲ್ಲಿ ಮುಂದಿನ 2028ರಲ್ಲಿ ಒಲಿಂಪಿಕ್ಸ್‌ ಕೂಟಕ್ಕೆ ಆತಿಥ್ಯ ವಹಿಸಲಿರುವ ಮನರಂಜನೆ ನಗರಿ ಲಾಸ್‌ ಏಂಜಲೀಸ್‌ಗೆ ಬಾವುಟವನ್ನು ಹಸ್ತಾಂತರಿಸಲಾಯಿತು. ಆತಿಥೇಯ ಫ್ರಾನ್ಸ್‌ನ ಈಜು ಚಾಂಪಿಯನ್‌ ಲಿಯೊ ಮಾರಷಾ ಕ್ರೀಡಾಜ್ಯೋತಿಯನ್ನು ಹಸ್ತಾಂತರಿಸಿದರು.

ಈ ಬಾರಿ ಒಟ್ಟು 126 ಪದಕಗಳನ್ನು ಜಯಿಸಿದ ವಿಶ್ವದ ದೊಡ್ಡಣ್ಣ ಅಮೆರಿಕಾವು ತನ್ನ ದೇಶದ ಲಾಸ್‌ ಏಂಜಲೀಸ್‌ನಲ್ಲಿ ಮುಂದಿನ ಬಾರಿ ಒಲಿಂಪಿಕ್ಸ್‌ಗೆ ಆತಿಥ್ಯ ವಹಿಸುವುದು ಅತ್ಯಂತ ವಿಶೇಷವೆನಿಸಿದೆ.

ಈ ಬಾರಿ ಪ್ಯಾರಿಸ್‌ನಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ 200ಕ್ಕೂ ಹೆಚ್ಚು ದೇಶಗಳ 10 ಸಾವಿರಕ್ಕೂ ಹೆಚ್ಚು ಕ್ರೀಡಾಪಟುಗಳು ತಮ್ಮ ಸಾಮರ್ಥ್ಯ ಪಣಕ್ಕಿಟ್ಟಿದ್ದರು. ಇಲ್ಲಿ ಪದಕ ಗೆದ್ದವರು ಸಂಭ್ರಮಿಸಿದರು. ಸೋತವರು ಮುಂದಿನ ಬಾರಿ ಜಯಿಸುವ ಕನಸಿನೊಂದಿಗೆ ತಮ್ಮ ತಮ್ಮ ದೇಶಗಳಿಗೆ ಮರಳಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರು| ರಾಜ್ಯಶಾಸ್ತ್ರದಲ್ಲಿ ಪಿಎಚ್‌ಡಿ ಪಡೆದ ಮಾಜಿ ಸಚಿವ ಸಿ.ಟಿ.ರವಿ

ಮೈಸೂರು: ಮಾಜಿ ಸಚಿವ ಸಿ.ಟಿ.ರವಿ ಅವರಿಂದು ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿ ಪದವಿ ಪಡೆದಿದ್ದಾರೆ. ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌…

15 mins ago

ಮಹಾರಾಷ್ಟ್ರ ಡಿಸಿಎಂ ಆಗಿ ಅಜಿತ್‌ ಪವಾರ್‌ ಪತ್ನಿ ಸುನೇತ್ರಾ ಆಯ್ಕೆ, ಇಂದು ಸಂಜೆ ಪ್ರಮಾಣವಚನ ಸ್ವೀಕಾರ?

ಮುಂಬೈ: ವಿಮಾನ ಪತನ ದುರಂತದಲ್ಲಿ ಸಾವನ್ನಪ್ಪಿದ ಡಿಸಿಎಂ ಅಜಿತ್‌ ಪವಾರ್‌ ಪತ್ನಿ ಸುನೇಂದ್ರ ಪವಾರ್‌ ಅವರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ನೇಮಿಸಲು…

33 mins ago

ಉದ್ಯಮಿ ಸಿ.ಜೆ.ರಾಯ್‌ ಸಾವಿನ ಬಗ್ಗೆ ಸಚಿವ ಪರಮೇಶ್ವರ್‌ ಮಾಹಿತಿ

ಬೆಂಗಳೂರು: ರಿಯಲ್‌ ಎಸ್ಟೇಟ್‌ ಉದ್ಯಮಿ, ಕಾನ್ಪಿಡೆಂಟ್‌ ಗ್ರೂಪ್‌ ಚೇರ್ಮನ್‌ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ…

1 hour ago

ನಾಳೆ ಕೇಂದ್ರ ಬಜೆಟ್‌ ಮಂಡನೆ ಮಂಡನೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ನಾಳೆ 9ನೇ ಬಾರಿಗೆ ಬಜೆಟ್‌ ಮಂಡನೆ ಮಾಡಲಿದ್ದಾರೆ. ಈ ಮೂಲಕ…

2 hours ago

ಬನ್ನೇರುಘಟ್ಟದ ಕಾಸಾಗ್ರ್ಯಾಂಡ್‌ನಲ್ಲಿ ಇಂದು ಸಂಜೆ ಉದ್ಯಮಿ ಸಿ.ಜೆ.ರಾಯ್ ಅಂತ್ಯಕ್ರಿಯೆ

ಬೆಂಗಳೂರು: ಖ್ಯಾತ ಉದ್ಯಮಿ ಮತ್ತು ಕಾನ್ಪಿಡೆಂಟ್‌ ಗ್ರೂಪ್‌ ಸಂಸ್ಥಾಪಕ ಹಾಗೂ ಅಧ್ಯಕ್ಷರಾಗಿದ್ದ ಸಿ.ಜೆ.ರಾಯ್‌ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,…

2 hours ago

ಓದುಗರ ಪತ್ರ: ಮೈಸೂರಿನಲ್ಲಿ ಮಳೆ ನೀರು ಕೊಯ್ಲು ಥೀಮ್ ಪಾರ್ಕ್ ಕನ್ನಡಿಯೊಳಗಿನ ಗಂಟು

ಮೈಸೂರು ನಗರದಲ್ಲಿ ಮಳೆನೀರು ಕೊಯ್ಲು ಥೀಮ್ ಪಾರ್ಕ್ ಸ್ಥಾಪಿಸುವ ಹಿಂದಿನ ಹಾಗೂ ಈಗಿನ ಸರ್ಕಾರಗಳ ಭರವಸೆ ಇನ್ನೂ ಕನ್ನಡಿಯೊಳಗಿನ ಗಂಟಾಗಿಯೇ…

6 hours ago