ಕ್ರೀಡೆ

ಹತ್ತಾರು ಅವಿಸ್ಮರಣೀಯ ಕ್ರೀಡಾಸ್ಪೂರ್ತಿಯ ಕ್ಷಣಗಳಿಗೆ ದಾಖಲಾದ ಪ್ಯಾರಿಸ್‌ ಒಲಿಂಪಿಕ್ಸ್‌

ಪ್ಯಾರಿಸ್:‌ ಪ್ಯಾರಿಸ್‌ನಲ್ಲಿ ಕಳೆದ ತಡರಾತ್ರಿ ವಿಶ್ವದ ಮಹಾನ್‌ ಕ್ರೀಡಾಮೇಳ ಒಲಿಂಪಿಕ್ಸ್‌ ಕೂಟಕ್ಕೆ ತೆರೆಬಿದ್ದಿದೆ.

ಕಳೆದ 19 ದಿನಗಳಿಂದ ಪ್ಯಾರಿಸ್‌ನಲ್ಲಿ ನಡೆದ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಈ ಬಾರಿ ಹಲವು ದಾಖಲೆಗಳು ನಿರ್ಮಾಣವಾಗಿವೆ.

ಈ ಒಲಿಂಪಿಕ್ಸ್‌ನಲ್ಲಿ ಹೊಸ ತಾರೆಗಳು ಉದಯಿಸಿದ್ದು, ಹತ್ತಾರು ಅವಿಸ್ಮರಣೀಯ ಕ್ರೀಡಾಸ್ಪೂರ್ತಿಯ ಕ್ಷಣಗಳು ದಾಖಲಾಗಿವೆ.

ಕಾರ್ಯಕ್ರಮದಲ್ಲಿ ಮುಂದಿನ 2028ರಲ್ಲಿ ಒಲಿಂಪಿಕ್ಸ್‌ ಕೂಟಕ್ಕೆ ಆತಿಥ್ಯ ವಹಿಸಲಿರುವ ಮನರಂಜನೆ ನಗರಿ ಲಾಸ್‌ ಏಂಜಲೀಸ್‌ಗೆ ಬಾವುಟವನ್ನು ಹಸ್ತಾಂತರಿಸಲಾಯಿತು. ಆತಿಥೇಯ ಫ್ರಾನ್ಸ್‌ನ ಈಜು ಚಾಂಪಿಯನ್‌ ಲಿಯೊ ಮಾರಷಾ ಕ್ರೀಡಾಜ್ಯೋತಿಯನ್ನು ಹಸ್ತಾಂತರಿಸಿದರು.

ಈ ಬಾರಿ ಒಟ್ಟು 126 ಪದಕಗಳನ್ನು ಜಯಿಸಿದ ವಿಶ್ವದ ದೊಡ್ಡಣ್ಣ ಅಮೆರಿಕಾವು ತನ್ನ ದೇಶದ ಲಾಸ್‌ ಏಂಜಲೀಸ್‌ನಲ್ಲಿ ಮುಂದಿನ ಬಾರಿ ಒಲಿಂಪಿಕ್ಸ್‌ಗೆ ಆತಿಥ್ಯ ವಹಿಸುವುದು ಅತ್ಯಂತ ವಿಶೇಷವೆನಿಸಿದೆ.

ಈ ಬಾರಿ ಪ್ಯಾರಿಸ್‌ನಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ 200ಕ್ಕೂ ಹೆಚ್ಚು ದೇಶಗಳ 10 ಸಾವಿರಕ್ಕೂ ಹೆಚ್ಚು ಕ್ರೀಡಾಪಟುಗಳು ತಮ್ಮ ಸಾಮರ್ಥ್ಯ ಪಣಕ್ಕಿಟ್ಟಿದ್ದರು. ಇಲ್ಲಿ ಪದಕ ಗೆದ್ದವರು ಸಂಭ್ರಮಿಸಿದರು. ಸೋತವರು ಮುಂದಿನ ಬಾರಿ ಜಯಿಸುವ ಕನಸಿನೊಂದಿಗೆ ತಮ್ಮ ತಮ್ಮ ದೇಶಗಳಿಗೆ ಮರಳಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ದ್ವೇಷ ಭಾಷಣ ಮಾಡುವುದರಲ್ಲಿ ಬಿಜೆಪಿಯವರು ಪಿತಾಮಹರು: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಳಗಾವಿ: ದ್ವೇಷ ಭಾಷಣ ವಿಧೇಯಕ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯವರು ದ್ವೇಷ ಭಾಷಣ ಮಾಡದೇ…

14 mins ago

ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿ ಬಂಧನ

ಮೈಸೂರು: ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮೈಸೂರಿನ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆಯಲ್ಲಿ ಈ ಘಟನೆ…

45 mins ago

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು 60 ಇಂಡಿಗೋ ವಿಮಾನಗಳ ಹಾರಾಟ ರದ್ದು

ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು ಕೂಡ 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ…

1 hour ago

ಓದುಗರ ಪತ್ರ:  ನಂಜನಗೂಡಿನ ಪ್ರಮುಖ ವೃತ್ತಕ್ಕೆ ಬಿ.ವಿ.ಪಂಡಿತರ ಹೆಸರಿಡಿ

ನಂಜನಗೂಡಿನ ಸದ್ವೈದ್ಯ ಶಾಲಾ ಸಂಸ್ಥಾಪಕರಾಗಿದ್ದ ಬಿ.ವಿ.ಪಂಡಿತರು ಆಯುರ್ವೇದ ಉತ್ಪನ್ನಗಳನ್ನು ರೂಪಿಸಿದ ಹಿರಿಮೆ ಹೊಂದಿದ್ದಾರೆ. ದಂತಧಾವನ ಚೂರ್ಣ (ನಂಜನಗೂಡು ಹಲ್ಲು ಪುಡಿ)…

1 hour ago

ಓದುಗರ ಪತ್ರ:  ಭೈರಪ್ಪ ಸ್ಮಾರಕ, ತಿಮ್ಮಕ್ಕ ವಸ್ತು ಸಂಗ್ರಹಾಲಯ ಸ್ವಾಗತಾರ್ಹ

ಮೈಸೂರಿನಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕ ನಿರ್ಮಾಣ ಹಾಗೂ ಬೇಲೂರಿನಲ್ಲಿ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ವಸ್ತು ಸಂಗ್ರಹಾಲಯ…

1 hour ago

ಓದುಗರ ಪತ್ರ:  ಗೋಪಾಲಸ್ವಾಮಿ ಬೆಟ್ಟದ ಬಸ್ ಪ್ರಯಾಣ ದರ ಇಳಿಕೆ ಮಾಡಿ

ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಇತಿಹಾಸ ಪ್ರಸಿದ್ಧ ಕ್ಷೇತ್ರ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಪ್ರವೇಶವಿರುವುದಿಲ್ಲ. ರಾಜ್ಯ ರಸ್ತೆ ಸಾರಿಗೆ ನಿಗಮದ…

2 hours ago