ಕ್ರೀಡೆ

ಹತ್ತಾರು ಅವಿಸ್ಮರಣೀಯ ಕ್ರೀಡಾಸ್ಪೂರ್ತಿಯ ಕ್ಷಣಗಳಿಗೆ ದಾಖಲಾದ ಪ್ಯಾರಿಸ್‌ ಒಲಿಂಪಿಕ್ಸ್‌

ಪ್ಯಾರಿಸ್:‌ ಪ್ಯಾರಿಸ್‌ನಲ್ಲಿ ಕಳೆದ ತಡರಾತ್ರಿ ವಿಶ್ವದ ಮಹಾನ್‌ ಕ್ರೀಡಾಮೇಳ ಒಲಿಂಪಿಕ್ಸ್‌ ಕೂಟಕ್ಕೆ ತೆರೆಬಿದ್ದಿದೆ.

ಕಳೆದ 19 ದಿನಗಳಿಂದ ಪ್ಯಾರಿಸ್‌ನಲ್ಲಿ ನಡೆದ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಈ ಬಾರಿ ಹಲವು ದಾಖಲೆಗಳು ನಿರ್ಮಾಣವಾಗಿವೆ.

ಈ ಒಲಿಂಪಿಕ್ಸ್‌ನಲ್ಲಿ ಹೊಸ ತಾರೆಗಳು ಉದಯಿಸಿದ್ದು, ಹತ್ತಾರು ಅವಿಸ್ಮರಣೀಯ ಕ್ರೀಡಾಸ್ಪೂರ್ತಿಯ ಕ್ಷಣಗಳು ದಾಖಲಾಗಿವೆ.

ಕಾರ್ಯಕ್ರಮದಲ್ಲಿ ಮುಂದಿನ 2028ರಲ್ಲಿ ಒಲಿಂಪಿಕ್ಸ್‌ ಕೂಟಕ್ಕೆ ಆತಿಥ್ಯ ವಹಿಸಲಿರುವ ಮನರಂಜನೆ ನಗರಿ ಲಾಸ್‌ ಏಂಜಲೀಸ್‌ಗೆ ಬಾವುಟವನ್ನು ಹಸ್ತಾಂತರಿಸಲಾಯಿತು. ಆತಿಥೇಯ ಫ್ರಾನ್ಸ್‌ನ ಈಜು ಚಾಂಪಿಯನ್‌ ಲಿಯೊ ಮಾರಷಾ ಕ್ರೀಡಾಜ್ಯೋತಿಯನ್ನು ಹಸ್ತಾಂತರಿಸಿದರು.

ಈ ಬಾರಿ ಒಟ್ಟು 126 ಪದಕಗಳನ್ನು ಜಯಿಸಿದ ವಿಶ್ವದ ದೊಡ್ಡಣ್ಣ ಅಮೆರಿಕಾವು ತನ್ನ ದೇಶದ ಲಾಸ್‌ ಏಂಜಲೀಸ್‌ನಲ್ಲಿ ಮುಂದಿನ ಬಾರಿ ಒಲಿಂಪಿಕ್ಸ್‌ಗೆ ಆತಿಥ್ಯ ವಹಿಸುವುದು ಅತ್ಯಂತ ವಿಶೇಷವೆನಿಸಿದೆ.

ಈ ಬಾರಿ ಪ್ಯಾರಿಸ್‌ನಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ 200ಕ್ಕೂ ಹೆಚ್ಚು ದೇಶಗಳ 10 ಸಾವಿರಕ್ಕೂ ಹೆಚ್ಚು ಕ್ರೀಡಾಪಟುಗಳು ತಮ್ಮ ಸಾಮರ್ಥ್ಯ ಪಣಕ್ಕಿಟ್ಟಿದ್ದರು. ಇಲ್ಲಿ ಪದಕ ಗೆದ್ದವರು ಸಂಭ್ರಮಿಸಿದರು. ಸೋತವರು ಮುಂದಿನ ಬಾರಿ ಜಯಿಸುವ ಕನಸಿನೊಂದಿಗೆ ತಮ್ಮ ತಮ್ಮ ದೇಶಗಳಿಗೆ ಮರಳಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬರಕ್ಕೆ ತತ್ತರಿಸುತ್ತಿರುವ ಕೃಷ್ಣ ಗೊಲ್ಲರು

ಡಾ.ರಘುಪತಿ ಮಹದೇಶ್ವರ ಬೆಟ್ಟಕ್ಕೆ ಹೋಗುವಾಗ ಹನೂರು ದಾಟಿದರೆ ನಿಮಗೆ ದೊಡ್ಡಿ ಹೆಸರಿನ ಹಲವು ಹಳ್ಳಿಗಳು ಸಿಗುತ್ತವೆ. ಹಾಗೆಯೇ ನೂರಾರು ದನಗಳೂ,ಅದೂ…

3 hours ago

ಕೊಡಗಿನಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಕಡಿವಾಣ

ನವೀನ್ ಡಿಸೋಜ ೧೬,೦೬೩ ಪ್ರಕರಣ ದಾಖಲು, ೧.೦೬ ಕೋಟಿ ರೂ. ದಂಡ ಸಂಗ್ರಹ ಹೆಲ್ಮೆಟ್, ಸೀಟ್‌ಬೆಲ್ಟ್ ಧರಿಸದಿರುವುದು, ದಾಖಲೆಗಳಿಲ್ಲದೆ ವಾಹನ…

3 hours ago

ತಮಿಳುನಾಡಿಗೆ ನೀರು; 72 ಅಡಿಗೆ ಕುಸಿದ ಕಬಿನಿ ಜಲಾಶಯ

ಮಂಜು ಕೋಟೆ ಹೊರಹರಿವಿನ ಪ್ರಮಾಣ ಕಡಿಮೆ ಮಾಡಿರುವ ಅಧಿಕಾರಿಗಳು; ರೈತರಿಗೆ, ಜನರಿಗೆ ನೀರಿನ ಸಮಸ್ಯೆ ಆತಂಕ  ಎಚ್.ಡಿ.ಕೋಟೆ: ಈ ಬಾರಿ…

3 hours ago

ಮೇವಿನ ಕೊರತೆ; ಹಸಿರು ಮೇವು ಖರೀದಿಗೆ ಮುಂದಾದ ರೈತರು

ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳಲ್ಲಿ ಮೇವಿಗೆ ಭರ್ಜರಿ ಬೇಡಿಕೆ; ಹಾಲು ಉತ್ಪಾದಕರಿಗೆ ಹೊಡೆತ ಕೆ.ಆರ್.ನಗರ: ಮಳೆ ಕೊರತೆಯಿಂದ ಬರಗಾಲ ಆವರಿಸಿದ್ದು,…

4 hours ago

ಗಜಪಯಣಕ್ಕೆ ನಡೆದಿದೆ ಭರದ ಸಿದ್ಧತೆ

ದಾ.ರಾ.ಮಹೇಶ್ ವೀರನಹೊಸಹಳ್ಳಿಯಲ್ಲಿ ಕಲಾತಂಡಗಳೊಡನೆ ಸ್ವಾಗತ ಕೋರಲು ಅರಣ್ಯ ಇಲಾಖೆ ಸಜ್ಜು  ವೀರನಹೊಸಹಳ್ಳಿ: ಆಗಸ್ಟ್ ೨೬ರಂದು ಆರಂಭವಾಗಲಿರುವ ಗಜ ಪಯಣಕ್ಕೆ ವಿವಿಧ…

4 hours ago