ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವೆಂಕಟೇಶ್ ಅಯ್ಯರ್ ಹೊಸ ಜೀವನದ ಅಧ್ಯಾಯಕ್ಕೆ ಮುನ್ನುಡಿ ಬರೆದಿದ್ದಾರೆ.
ಟೀಮ್ ಇಂಡಿಯಾ ಮತ್ತು ಕೆಕೆಆರ್ ತಂಡದ ಪ್ರಸಿದ್ಧ ಆಟಗಾರ ವೆಂಕಟೇಶ್ ಅಯ್ಯರ್ ಅವರು ಶೃತಿ ರಘುನಾಥನ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇನ್ನೂ ನಿಶ್ಚಿತಾರ್ಥದ ಫೋಟೋಗಳನ್ನು ವೆಂಕಟೇಶ್ ಅವರು ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದು, ನನ್ನ ಜೀವನದ ಮುಂದಿನ ಅಧ್ಯಾಯಕ್ಕೆ ಮುಂದಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ. ನವ ಜೋಡಿಗೆ ಅಭಿಮಾನಿಗಳು ಶುಭ ಕೋರಿದ್ದಾರೆ
ಇನ್ನು ಎಂಗೇಜ್ಮೆಂಟ್ ನಲ್ಲಿ ವೆಂಕಟೇಶ್ ಅಯ್ಯರ್ ಅವರು ಗೋಲ್ಡನ್ ಕುರ್ತಾದಲ್ಲಿ ಮಿಂಚಿದ್ದಾರೆ. ಅವರ ಸಂಗಾತಿ ವೈಲೆಟ್ ಅಂಡ್ ಬ್ಲೂ ಕಲರ್ ರೇಷ್ಮೆ ಸೀರೆ ಉಟ್ಟು ಕಾಸಿನ ಸರ ತಟ್ಟು ಟ್ರೆಡಿಷನಲ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಮತ್ತೊಂದು ಫೋಟೋದಲ್ಲಿ ವೆಂಕಟೇಶ್ ಅಯ್ಯರ್ ಅವರು ಬಿಳಿ ಬಣ್ಣದ ಕುರ್ತಾ ತೊಟ್ಟಿದ್ದು, ಶೃತಿ ರಘುನಾಥನ್ ಅವರು ಗುಲಾಬಿ ಬಣ್ಣದ ರೇಷ್ಮೆ ಸೀರೆ ಧರಿಸಿದ್ದಾರೆ.
ವೆಂಕಟೇಶ್ ಅಯ್ಯರ್ ಅವರು 2015ರಲ್ಲಿ ಹೊಲ್ಕರ್ ಸ್ಟೇಡಿಯಂ ನಲ್ಲಿ ರೈಲ್ವೆ ಕ್ರಿಕೆಟ್ ತಂಡದ ವಿರುದ್ಧ ತಮ್ಮ ಚೊಚ್ಚಲ ಟಿ 20 ಪಂದ್ಯವನ್ನು ಆಡಿದ್ದರು. 2018-19 ರಲ್ಲಿ ರಣಜಿ ಟ್ರೋಫಿಯಲ್ಲಿ ಮಧ್ಯ ಪ್ರದೇಶಕ್ಕೆ ಪ್ರಥಮ ದರ್ಜೆಯಲ್ಲಿ ಪಾದರ್ಪಣೆ ಮಾಡಿದ್ದರು. 2021-22 ರಲ್ಲಿ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಸರಾಸರಿ 155 ರನ್ ಗಳಿಸುವ ಮೂಲಕ ಮಧ್ಯಪ್ರದೇಶದ ಅಗ್ರ ಸ್ಕೋರರ್ ಆಗಿ ಮುಂದುವರೆದಿದ್ದರು. 2021 – 22 ರಲ್ಲಿ ನಡೆದ ಹಜಾರೆ ಟ್ರೋಫಿಯಲ್ಲಿಯೂ ಕೂಡ ಅದೇ ಫಾರ್ಮ್ ಮುಂದುವರಿಸಿದರು. 63.16 ರ ಸರಾಸರಿಯಲ್ಲಿ 379 ರನ್ ಗಳಿಸಿದ್ದರು. 133 ಕ್ಕಿಂತ ಹೆಚ್ಚಿನ ಸ್ಟ್ರೈಕ್ ರೇಟ್ ನೊಂದಿಗೆ ಕೆಳ ಮಧ್ಯಮ ಕ್ರಮಾಂಕದೊಂದಿಗೆ ಬ್ಯಾಟಿಂಗ್ ಮಾಡಿದ್ದರು. ಇದು ಎರಡು ಶತಕಗಳನ್ನು ಒಳಗೊಂಡಿತ್ತು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…