ಕ್ರೀಡೆ

ಎಂಗೇಜ್ ಆದ ಟೀಮ್ ಇಂಡಿಯಾ ಆಟಗಾರ

ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವೆಂಕಟೇಶ್ ಅಯ್ಯರ್ ಹೊಸ ಜೀವನದ ಅಧ್ಯಾಯಕ್ಕೆ ಮುನ್ನುಡಿ ಬರೆದಿದ್ದಾರೆ.

ಟೀಮ್ ಇಂಡಿಯಾ ಮತ್ತು ಕೆಕೆಆರ್ ತಂಡದ ಪ್ರಸಿದ್ಧ ಆಟಗಾರ ವೆಂಕಟೇಶ್ ಅಯ್ಯರ್ ಅವರು ಶೃತಿ ರಘುನಾಥನ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇನ್ನೂ ನಿಶ್ಚಿತಾರ್ಥದ ಫೋಟೋಗಳನ್ನು ವೆಂಕಟೇಶ್ ಅವರು ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದು, ನನ್ನ ಜೀವನದ ಮುಂದಿನ ಅಧ್ಯಾಯಕ್ಕೆ ಮುಂದಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ. ನವ ಜೋಡಿಗೆ ಅಭಿಮಾನಿಗಳು ಶುಭ ಕೋರಿದ್ದಾರೆ

ಇನ್ನು ಎಂಗೇಜ್ಮೆಂಟ್ ನಲ್ಲಿ ವೆಂಕಟೇಶ್ ಅಯ್ಯರ್ ಅವರು ಗೋಲ್ಡನ್ ಕುರ್ತಾದಲ್ಲಿ ಮಿಂಚಿದ್ದಾರೆ. ಅವರ ಸಂಗಾತಿ ವೈಲೆಟ್ ಅಂಡ್ ಬ್ಲೂ ಕಲರ್ ರೇಷ್ಮೆ ಸೀರೆ ಉಟ್ಟು ಕಾಸಿನ ಸರ ತಟ್ಟು ಟ್ರೆಡಿಷನಲ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಮತ್ತೊಂದು ಫೋಟೋದಲ್ಲಿ ವೆಂಕಟೇಶ್ ಅಯ್ಯರ್ ಅವರು ಬಿಳಿ ಬಣ್ಣದ ಕುರ್ತಾ ತೊಟ್ಟಿದ್ದು, ಶೃತಿ ರಘುನಾಥನ್ ಅವರು ಗುಲಾಬಿ ಬಣ್ಣದ ರೇಷ್ಮೆ ಸೀರೆ ಧರಿಸಿದ್ದಾರೆ.

ವೆಂಕಟೇಶ್ ಅಯ್ಯರ್ ಅವರು 2015ರಲ್ಲಿ ಹೊಲ್ಕರ್ ಸ್ಟೇಡಿಯಂ ನಲ್ಲಿ ರೈಲ್ವೆ ಕ್ರಿಕೆಟ್ ತಂಡದ ವಿರುದ್ಧ ತಮ್ಮ ಚೊಚ್ಚಲ ಟಿ 20 ಪಂದ್ಯವನ್ನು ಆಡಿದ್ದರು. 2018-19 ರಲ್ಲಿ ರಣಜಿ ಟ್ರೋಫಿಯಲ್ಲಿ ಮಧ್ಯ ಪ್ರದೇಶಕ್ಕೆ ಪ್ರಥಮ ದರ್ಜೆಯಲ್ಲಿ ಪಾದರ್ಪಣೆ ಮಾಡಿದ್ದರು. 2021-22 ರಲ್ಲಿ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಸರಾಸರಿ 155 ರನ್ ಗಳಿಸುವ ಮೂಲಕ ಮಧ್ಯಪ್ರದೇಶದ ಅಗ್ರ ಸ್ಕೋರರ್ ಆಗಿ ಮುಂದುವರೆದಿದ್ದರು. 2021 – 22 ರಲ್ಲಿ ನಡೆದ ಹಜಾರೆ ಟ್ರೋಫಿಯಲ್ಲಿಯೂ ಕೂಡ ಅದೇ ಫಾರ್ಮ್ ಮುಂದುವರಿಸಿದರು. 63.16 ರ ಸರಾಸರಿಯಲ್ಲಿ 379 ರನ್ ಗಳಿಸಿದ್ದರು. 133 ಕ್ಕಿಂತ ಹೆಚ್ಚಿನ ಸ್ಟ್ರೈಕ್ ರೇಟ್ ನೊಂದಿಗೆ ಕೆಳ ಮಧ್ಯಮ ಕ್ರಮಾಂಕದೊಂದಿಗೆ ಬ್ಯಾಟಿಂಗ್ ಮಾಡಿದ್ದರು. ಇದು ಎರಡು ಶತಕಗಳನ್ನು ಒಳಗೊಂಡಿತ್ತು.

lokesh

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 24 ಬುಧವಾರ

2 hours ago

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

16 hours ago

ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…

18 hours ago

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

19 hours ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

19 hours ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

19 hours ago