ಕ್ರೀಡೆ

ಸೌತ್‌ ಆಫ್ರಿಕಾ ಸಂಘಟಿತ ಆಟದ ಮುಂದೆ ಮಂಡಿಯೂರಿದ ಇಂಗ್ಲೆಂಡ್‌

ಮುಂಬೈ: ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಇಂಗ್ಲೆಂಡ್ ವಿರುದ್ಧ ದಕ್ಷಿಣ ಆಫ್ರಿಕಾ 229 ರನ್ ಗಳ ಭರ್ಜರಿ ಜಯ ಗಳಿಸಿದೆ.

ಇಲ್ಲಿನ ವಾಂಖೆಡೆ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಸೌತ್‌ ಆಪ್ರಿಕಾ ಮತ್ತು ಇಂಗ್ಲೆಂಡ್‌ ನಡುವಿನ ಪಂದ್ಯದಲ್ಲಿ ಸೌತ್‌ ಆಪ್ರಿಕಾ ತಂಡ 50 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 399 ರನ್‌ಗಳ ಬೃಹತ್‌ ಮೊತ್ತ ಪೇರಿಸಿತು. ಇದನ್ನು ಚೇಸಿಂಗ್‌ ಮಾಡಿದ ಇಂಗ್ಲೆಂಡ್‌ 22 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡು 170 ರನ್‌ ಗಳಿಸಿ, 229 ರನ್‌ಗಳ ಹಿನಾಯ ಸೋಲನುಭವಿಸಿತು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಅವಕಾಶ ಪಡೆದ ದಕ್ಷಿಣ ಆಫ್ರಿಕಾ 50 ಓವರ್ ಗಳಲ್ಲಿ ಆರು ವಿಕೆಟ್ ಕಳೆದುಕೊಂಡು 399 ರನ್ ಗಳಿಸಿತು.

ಮೊದಲ ಓವರ್ ನಲ್ಲಿ ಡಿಕಾಕ್ ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ದ.ಆಫ್ರಿಕಾಗೆ ರೀಜಾ ಹೆಂಡ್ರಿಕ್ಸ್ ಮತ್ತು ಡ್ಯೂಸನ್ 121 ರನ್ ಜೊತೆಯಾಟವಾಡಿ ಆಧರಿಸಿದರು. ರೀಜಾ ಹೆಂಡ್ರಿಕ್ಸ್ 85 ರನ್ ಗಳಿಸಿದರೆ, ವಾನ್ ಡರ್ ಡ್ಯೂಸನ್ 60 ರನ್ ಗಳಿಸಿದರು. ಹಂಗಾಮಿ ನಾಯಕ ಐಡೆನ್‌ ಮಾರ್ಕ್ರಮ್‌ 42 ರನ್ ಗಳಿಸಿದರು.

ಮತ್ತೊಂದೆಡೆ ಹೆನ್ರಿಕ್ ಕ್ಲಾಸೆನ್ ಮತ್ತು ಮ್ಯಾಕ್ರೊ ಯಾನ್ಸನ್ ಅದ್ಭುತ ಜೊತೆಯಾಟದಿಂದ ನೆರವಾದರು. ಹೊಡೆಬಡಿ ಹೊಡೆತಗಳಿಂದ ಪ್ರೇಕ್ಷಕರನ್ನು ರಂಜಿಸಿದ ಜೋಡಿ 151 ರನ್ ಜೊತೆಯಾಟವಾಡಿದರು. ಕ್ಲಾಸನ್ ಕೇವಲ 67 ಎಸೆತಗಳಲ್ಲಿ ನಾಲ್ಕು ಸಿಕ್ಸರ್ ನೆರವಿನಿಂದ 109 ರನ್ ಬಾರಿಸಿದರು.

ಮತ್ತೊಂದೆಡೆ ಮನಬಂದಂತೆ ಚಚ್ಚಿದ ಯಾನ್ಸನ್ ಕೇವಲ 42 ಎಸೆತಗಳಲ್ಲಿ 75 ರನ್ ಬಾರಿಸಿದರು. ಯಾನ್ಸನ್ ಏಳು ಸಿಕ್ಸರ್ ಬಾರಿಸಿ ಮಿಂಚಿದರು. ಕೊನೆಯ ಹತ್ತು ಓವರ್ ಗಳಲ್ಲಿ 143 ರನ್ ಹರಿದು ಬಂತು.

ಈ ಮೊತ್ತ ಬೆನ್ನತ್ತಿದ ಇಂಗ್ಲೆಂಡ್‌ಗೆ ಯೋಜಿತ ಆರಂಭ ದೊರೆಯಲಿಲ್ಲ. ಆರಂಭಿಕರಾದ ಜಾನಿ ಬೈರ್ ಸ್ಟೋವ್ 10 ರನ್ ಗೆ ಲುಂಗಿ ಗಿಡಿಗೆ ವಿಕೆಟ್‌ ಒಪ್ಪಿಸಿದರೇ, ಡೇವಿಡ್ ಮಲನ್(6) ಹಾಗೂ ಜೋ ರೂಟ್ (2) ಮಾರ್ಕೋ ಜಾನ್ಸನ್ ದಾಳಿಗೆ ವಿಕೆಟ್‌ ನೀಡಿದರು. ನಾಯಕ ಬಟ್ಲರ್‌ ಸೇರಿದಂತೆ ಮತ್ತಾರಿಂದಲೂ ನಿರೀಕ್ಷಿತ ಆಟ ಕಂಡುಬರಲಿಲ್ಲ. ಕಡೇ ಗಳಿಗೆಯಲ್ಲಿ ಸ್ಪೋಟಕ ಬ್ಯಾಟ್ ಬೀಸಿದ ಮಾರ್ಕ್ ವುಡ್ 43 ಗಳಿಸಿದರೆ ಗಸ್ ಅಟ್ಕಿನ್ಸನ್ 35 ರನ್ ಗಳಿಸಿದರು. ರೀಸ್ ಟಾಪ್ಲಿ ಗಾಯದಿಂದಾಗಿ ನಿವೃತ್ತಿಯಾದ ಪರಿಣಾಮ 170 ಕ್ಕೆ ಆಲೌಟ್ ಆಯಿತು.

ಸೌತ್‌ ಆಫ್ರಿಕಾ ಪರ ಜೆರಾಲ್ಡ್ 3 ವಿಕೆಟ್ ಪಡೆದರೆ ಲುಂಗಿ ಗಿಡಿ, ಮಾರ್ಕೋ ಜಾನ್ಸನ್ 2 ಹಾಗೂ ಕಗಿಸೊ ರಬಾಡ ಮತ್ತು ಕೇಶವ್ ಮಹಾರಾಜ್ ತಲಾ ಒಂದು ವಿಕೆಟ್ ಪಡೆದರು.

ಪಂದ್ಯ ಶ್ರೇಷ್ಠ : ಹೆನ್ರಿಕ್‌ ಕ್ಲಾಸನ್

andolanait

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

3 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

5 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

7 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

8 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

9 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

9 hours ago