ನವದೆಹಲಿ: ಇಂಗ್ಲೆಂಡ್ ತಂಡದ ಸ್ಫೋಟಕ ಬ್ಯಾಟ್ಸ್ಮನ್ ಅಲೆಕ್ಸ್ ಹೇಲ್ಸ್ ಅವರು ಶುಕ್ರವಾರ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಹಠಾತ್ ವಿದಾಯ ಘೋಷಿಸಿದ್ದಾರೆ. ಕಳೆದ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ತಂಡ ಪ್ರಶಸ್ತಿ ಮುಡಿಗೇರಿಸಿಕೊಳ್ಳುವಲ್ಲಿ ಅಲೆಕ್ಸ್ ಹೇಲ್ಸ್ ಕೂಡ ಪ್ರಮುಖ ಪಾತ್ರವಹಿಸಿದ್ದರು.
ಆಸ್ಟ್ರೇಲಿಯಾ ಆತಿಥ್ಯದ 2022ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಜಾನಿ ಬೈರ್ಸ್ಟೋವ್ ಗಾಯಗೊಂಡು ತಂಡದಿಂದ ಹೊರ ಬಿದ್ದಿದ್ದರು. ಇವರ ಸ್ಥಾನಕ್ಕೆ ಬಂದಿದ್ದ ಅಲೆಕ್ಸ್ ಹೇಲ್ಸ್, ತಮ್ಮ ಸಿಡಿಲಬ್ಬರದ ಬ್ಯಾಟಿಂಗ್ನಿಂದ ಗಮನ ಸೆಳೆದಿದ್ದರು. ಜೋಸ್ ಬಟ್ಲರ್ ಜತೆ ಇನಿಂಗ್ಸ್ ಆರಂಭಿಸಿದ್ದ ಹೇಲ್ಸ್ ಕೂಡ ಪವರ್ಪ್ಲೇನಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದರು.
https://www.instagram.com/p/CvhSNoYsWuH/
ಸೆಮಿಫೈನಲ್ ಪಂದ್ಯದಲ್ಲಿ ಭಾರತ ವಿರುದ್ಧ ಅಜೇಯ 86 ರನ್ ಸಿಡಿಸಿದ್ದ ಅಲೆಕ್ಸ್ ಹೇಲ್ಸ್, ಇಂಗ್ಲೆಂಡ್ ತಂಡ ಫೈನಲ್ಗೇರಲು ನೆರವಾಗಿದ್ದರು. ಇನ್ನು ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಮಣಿಸಿದ್ದ ಇಂಗ್ಲೆಂಡ್ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಒಟ್ಟಾರೆ ಈ ಟೂರ್ನಿಯಲ್ಲಿ ಹೇಲ್ಸ್, 212 ರನ್ಗಳನ್ನು ಕಲೆ ಹಾಕಿದ್ದರು. ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದರೂ ನಾಟಿಂಗ್ಹ್ಯಾಮ್ ಶೈರ್ ಪರ ದೇಶಿ ಕ್ರಿಕೆಟ್ ಹಾಗೂ ವಿಶ್ವದ ವಿವಿಧ ಫ್ರಾಂಚೈಸಿ ಲೀಗ್ಗಳಲ್ಲಿ ಆಡುವುದಾಗಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ತಿಳಿಸಿದ್ದಾರೆ.
ಇಂಗ್ಲೆಂಡ್ ಪ್ರತಿನಿಧಿಸಿದ್ದಕ್ಕೆ ಹೆಮ್ಮೆಯಾಗಿದೆ: ಹೇಲ್ಸ್
“ಇಂಗ್ಲೆಂಡ್ ಜೆರ್ಸಿಯಲ್ಲಿ ನನ್ನ ವೃತ್ತಿ ಜೀವನದುದ್ದಕ್ಕೂ ಹಲವು ಏಳು-ಬೀಳುಗಳನ್ನು ಅನುಭವಿಸಿದ್ದೇನೆ. ಇದೊಂದು ಅಸಾಧಾರಣ ಪ್ರಯಾಣವಾಗಿದ್ದು, ಇಂಗ್ಲೆಂಡ್ಗಾಗಿ ನನ್ನ ಕೊನೆಯ ಪಂದ್ಯದಲ್ಲಿ ವಿಶ್ವಕಪ್ ಗೆದ್ದಿರುವುದು ನನಗೆ ತೃಪ್ತಿ ತಂದಿದೆ,” ಎಂದು ಬಲಗೈ ಬ್ಯಾಟ್ಸ್ಮನ್ ಹೇಳಿಕೊಂಡಿದ್ದಾರೆ.
2014ರಲ್ಲಿ ಶ್ರೀಲಂಕಾ ವಿರುದ್ಧ ಟಿ20 ಪಂದ್ಯದಲ್ಲಿ 65 ಎಸೆತಗಳಲ್ಲಿ ಅಜೇಯ 116 ರನ್ ಸಿಡಿಸಿದ್ದ ಅಲೆಕ್ಸ್ ಹೇಲ್ಸ್ ದಾಖಲೆ ಬರೆದಿದ್ದರು. ಆ ಮೂಲಕ ಟಿ20 ಕ್ರಿಕೆಟ್ನಲ್ಲಿ ಶತಕ ಸಿಡಿಸಿದ ಮೊದಲ ಇಂಗ್ಲೆಂಡ್ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದರು. ಇಲ್ಲಿಯವರೆಗೂ 70 ಏಕದಿನ ಪಂದ್ಯಗಳಿಂದ 2419 ರನ್, 75 ಟಿ20ಐ ಪಂದ್ಯಗಳಿಂದ 2074 ರನ್ ಹಾಗೂ 11 ಟೆಸ್ಟ್ ಪಂದ್ಯಗಳಿಂದ 573 ರನ್ ಬಾರಿಸಿರುವ ಅಲೆಕ್ಸ್ ಹೇಲ್ಸ್, ಎಲ್ಲಾ ಸ್ವರೂಪದಲ್ಲಿಯೂ 7 ಶತಕ ಹಾಗೂ 26 ಅರ್ಧಶತಕಗಳನ್ನು ಸಿಡಿಸಿದ್ದಾರೆ.
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…