ಟಿ20 ವಿಶ್ವಕಪ್: ಮೆಲ್ಬೋರ್ನ್ನಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನವನ್ನು ಮಣಿಸಿದ ಇಂಗ್ಲೆಂಡ್ ಎರಡನೇ ಬಾರಿಗೆ ಟಿ20 ಚಾಂಪಿಯನ್ ಪಟ್ಟಕ್ಕೇರುವಲ್ಲಿ ಯಶಸ್ವಿಯಾಗಿದೆ. ಆಸ್ಟ್ರೇಲಿಯಾದಲ್ಲಿ 30 ವರ್ಷಗಳ ಹಿಂದಿನ ಕಾಕತಾಳೀಯವನ್ನು ಪುನರಾವರ್ತಿಸಿ ಫೈನಲ್ ತಲುಪಿದ ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ಕೊನೆಯ ಹಂತದಲ್ಲಿ ಎಲ್ಲವೂ ಬದಲಾಯಿತು. 30 ವರ್ಷಗಳ ಹಿಂದೆ ಅಂದರೆ 1992ರ ಏಕದಿನ ವಿಶ್ವಕಪ್ನಲ್ಲಿ ಇದೇ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿ ವಿಶ್ವ ಚಾಂಪಿಯನ್ ಆಗಿದ್ದ ಪಾಕಿಸ್ತಾನ ಮತ್ತೊಮ್ಮೆ ಅದೇ ಸಾಧನೆಯನ್ನು ಪುನರಾವರ್ತಿಸುವ ತವಕದಲ್ಲಿದ್ದರೂ ಇಂಗ್ಲೆಂಡ್ ತಂಡ ಅದಕ್ಕೆ ಅವಕಾಶ ನೀಡಲಿಲ್ಲ. ಮೂರು ವರ್ಷಗಳ ಹಿಂದೆ ಲಾರ್ಡ್ಸ್ನಲ್ಲಿ ಇಂಗ್ಲೆಂಡ್ ತಂಡವನ್ನು ಏಕದಿನ ಕ್ರಿಕೆಟ್ನ ವಿಶ್ವ ಚಾಂಪಿಯನ್ ಮಾಡಿದ್ದ ಬೆನ್ ಸ್ಟೋಕ್ಸ್, ಮತ್ತೊಮ್ಮೆ ಆಂಗ್ಲ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದರು. ಈ ಗೆಲುವಿನೊಂದಿಗೆ ಇಂಗ್ಲೆಂಡ್ ತಂಡ ಪಾಕ್ ಜೊತೆಗಿನ 30 ವರ್ಷಗಳ ಹಳೆಯ ಸೋಲಿನ ಖಾತೆಯ ಲೆಕ್ಕವನ್ನು ಚುಕ್ತ ಮಾಡಿದೆ.
ಮೆಲ್ಬೋರ್ನ್ನಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನವನ್ನು ಮಣಿಸಿದ ಇಂಗ್ಲೆಂಡ್ ಎರಡನೇ ಬಾರಿಗೆ ಟಿ20 ಚಾಂಪಿಯನ್ ಪಟ್ಟಕ್ಕೇರುವಲ್ಲಿ ಯಶಸ್ವಿಯಾಗಿದೆ. ಆಸ್ಟ್ರೇಲಿಯಾದಲ್ಲಿ 30 ವರ್ಷಗಳ ಹಿಂದಿನ ಕಾಕತಾಳೀಯವನ್ನು ಪುನರಾವರ್ತಿಸಿ ಫೈನಲ್ ತಲುಪಿದ ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ಕೊನೆಯ ಹಂತದಲ್ಲಿ ಎಲ್ಲವೂ ಬದಲಾಯಿತು. 30 ವರ್ಷಗಳ ಹಿಂದೆ ಅಂದರೆ 1992ರ ಏಕದಿನ ವಿಶ್ವಕಪ್ನಲ್ಲಿ ಇದೇ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿ ವಿಶ್ವ ಚಾಂಪಿಯನ್ ಆಗಿದ್ದ ಪಾಕಿಸ್ತಾನ ಮತ್ತೊಮ್ಮೆ ಅದೇ ಸಾಧನೆಯನ್ನು ಪುನರಾವರ್ತಿಸುವ ತವಕದಲ್ಲಿದ್ದರೂ ಇಂಗ್ಲೆಂಡ್ ತಂಡ ಅದಕ್ಕೆ ಅವಕಾಶ ನೀಡಲಿಲ್ಲ. ಮೂರು ವರ್ಷಗಳ ಹಿಂದೆ ಲಾರ್ಡ್ಸ್ನಲ್ಲಿ ಇಂಗ್ಲೆಂಡ್ ತಂಡವನ್ನು ಏಕದಿನ ಕ್ರಿಕೆಟ್ನ ವಿಶ್ವ ಚಾಂಪಿಯನ್ ಮಾಡಿದ್ದ ಬೆನ್ ಸ್ಟೋಕ್ಸ್, ಮತ್ತೊಮ್ಮೆ ಆಂಗ್ಲ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದರು. ಈ ಗೆಲುವಿನೊಂದಿಗೆ ಇಂಗ್ಲೆಂಡ್ ತಂಡ ಪಾಕ್ ಜೊತೆಗಿನ 30 ವರ್ಷಗಳ ಹಳೆಯ ಸೋಲಿನ ಖಾತೆಯ ಲೆಕ್ಕವನ್ನು ಚುಕ್ತ ಮಾಡಿದೆ.
137 ರನ್ಗಳ ಸಾಧಾರಣ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ಕೂಡ ಆರಂಭದಲ್ಲೇ ಹೇಲ್ಸ್ ವಿಕೆಟ್ ಕಳೆದುಕೊಂಡು ಆತಂಕಕ್ಕೆ ಒಳಗಾಗಿತ್ತು. ಆದರೆ ನಾಯಕ ಬಟ್ಲರ್ ರನ್ ರೇಟ್ ಕುಸಿಯಲು ಬಿಡದೆ ತಂಡ ಒತ್ತಡಕ್ಕೆ ಸಿಲುಕದಂತೆ ಮಾಡಿದರು. 28 ರನ್ಗಳಿಗೆ ಬಟ್ಲರ್ ತಮ್ಮ ಇನ್ನಿಂಗ್ಸ್ ಮುಗಿಸಿದರೆ, ಸಾಲ್ಟ್ ಕೂಡ 10 ರನ್ಗೆ ಸುಸ್ತಾದರು. ಈ ವಿಕೆಟ್ಗಳ ಬಳಿಕ ಜೊತೆಯಾದ ಸ್ಟೋಕ್ಸ್ ಹಾಗೂ ಬ್ರೂಕ್ ತಂಡವನ್ನು ಗೆಲುವಿನ ದಡದತ್ತ ಕೊಂಡೊಯ್ದರು. ಬ್ರೂಕ್ 20 ರನ್ ಗಳಿಸಿ ಬ್ಯಾಟ್ ಎತ್ತಿಟ್ಟರೆ ಸ್ಟೋಕ್ಸ್ ಮಾತ್ರ ಅಜೇಯ ಅರ್ಧಶತಕ ಸಿಡಿಸಿ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಯಶಸ್ವಿಯಾದರು. ಬ್ರೂಕ್ ವಿಕೆಟ್ ಬಳಿಕ ಬಂದ ಅಲಿ ಕೂಡ ಬಿರುಸಿನ ಬ್ಯಾಟಿಂಗ್ ಮಾಡಿ 13 ಎಸೆತಗಳಲ್ಲಿ 19 ರನ್ ಕಲೆಹಾಕಿದರು.
ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…
ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ಗೆ ರಾಜ್ಯ ಸರ್ಕಾರ ರಿಲೀಫ್ ನೀಡಿದೆ. ವಾಟಾಳ್ ನಾಗರಾಜ್ ಮೇಲಿನ ಕೇಸ್ಗಳನ್ನು ಸರ್ಕಾರ ಹಿಂಪಡೆಯಲು…
ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್…
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್ಸ್ಪಾಟ್ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…
ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…
ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…