ಕ್ರೀಡೆ

ಇಂಗ್ಲೆಂಡ್‌ ವಿರುದ್ಧ ನಾಳೆ ಗೆದ್ದರೆ ಫೈನಲ್‌ ನಲ್ಲಿ ಮತ್ತೆ ಪಾಕ್‌ ಜತೆ ಮುಖಾಮುಖಿ

ಸಾಂಪ್ರದಾಯಿಕ ಎದುರಾಳಿಗಳು ಎದುರಾದರೆ ಟಿ& 20 ಪಂದ್ಯ ಮತ್ತಷ್ಟು ರೋಚಕ

ಅಡಿಲೇಡ್: ಈ ಬಾರಿ ಟಿ- 20 ವಿಶ್ವಕಪ್ ಗೆದ್ದೇ ಗೆಲ್ಲುತ್ತೇವೆ ಎಂದು ಛಲ ತೊಟ್ಟಿರುವ ಭಾರತ ತಂಡ, ಸೂಪರ್ ೧೨ರಲ್ಲಿ ೫ ಪಂದ್ಯಗಳಿಂದ ೮ ಅಂಕಗಳೊಂದಿಗೆ ಗ್ರೂಪ್ ೨ರಲ್ಲಿ ಅಗ್ರಸ್ಥಾನದೊಂದಿಗೆ ಸೆಮಿಫೈನಲ್ ಪ್ರವೇಶಿಸಿದೆ.

ಗುರುವಾರ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಪ್ರಮುಖ ಪಂ ದ್ಯಕ್ಕಾಗಿ ರೋಹಿತ್ ಶರ್ಮಾ ನಾಯಕತ್ವದ ತಂಡ ಸಜ್ಜಾಗಿದೆ.
ಅಡಿಲೇಡ್ ಓವಲ್‌ನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧ ಟಿ೨೦ ವಿಶ್ವಕಪ್‌ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಸೆಣಸಾಡಲಿದ್ದು, ಇಲ್ಲಿ ಗೆದ್ದ ತಂಡ ಪ್ರಶಸ್ತಿ ಸುತ್ತಿಗೆ ಮುನ್ನಡೆಯಲಿದೆ.

2022ರ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಸೂರ್ಯಕುಮಾರ್ ಯಾದವ್ ಅವರು ಮೂರು ಅರ್ಧಶತಕಗಳನ್ನು ದಾಖಲಿಸಿ ಭಾರತದ ಮಹತ್ವದ ಆಟಗಾರನಾಗಿ ಹೊರಹೊಮ್ಮಿದ್ದಾರೆ. ಇನ್ನು ತಂಡದ ವಿಷಯಕ್ಕೆ ಬಂದರೆ ಸ್ಪಿನ್ನರ್‌ಗಳನ್ನು ಎದುರಿಸಲು ಎಡಗೈ ಬ್ಯಾಟ್ಸ್‌ಮನ್‌ಗೆ ಅವಕಾಶವನ್ನು ನೀಡಲು ತಂಡದ ನಾಯಕ ಬಯಸಿದ್ದಾರೆ. ಆದರೆ ವಿಕೆಟ್ ಕೀಪರ್‌ಗಳಿಬ್ಬರೂ ತಂಡದ ಆಯ್ಕೆಯಲ್ಲಿರುತ್ತಾರೆ,
ಮಂಗಳವಾರ ನೆಟ್ಸ್ ಅಭ್ಯಾಸದ ವೇಳೆ ರೋಹಿತ್ ಶರ್ಮಾ ಅವರ ಮುಂಗೈಗೆ ಪೆಟ್ಟು ಬಿದ್ದಿತ್ತು. ಅದರ ಬಗ್ಗೆ ಮಾತನಾಡಿರುವ ರೋಹಿತ್ “” ನನಗೆ ನಿನ್ನೆ ಬಾಲ್ ತಾಗಿದೆ, ಆದರೆ ಇದೀಗ ಚೇತರಿಕೆಯಾಗಿದೆ ಎಂದು ತೋರುತ್ತದೆ, ಸಣ್ಣದಾದ ಏಟು ಕಂಡುಬಂದಿದೆ, ಆದರೆ ಈಗ ಅದು ಸಂಪೂರ್ಣವಾಗಿ ಗುಣಮುಖವಾಗಿದೆʼʼ ಎಂದಿದ್ದಾರೆ.

 

2013ರಲ್ಲಿ ಭಾರತ ಎಂಎಸ್ ಧೋನಿ ನಾಯಕತ್ವದಲ್ಲಿ ಚಾಂಪಿಯನ್ಸ್ ಟ್ರೋಫಿ ಗೆದ್ದಿತ್ತು. ಇದಕ್ಕೂ ಮುನ್ನ 2007ರಲ್ಲಿ ಟಿ೨೦ ವಿಶ್ವಕಪ್ ಗೆದ್ದು ಬೀಗಿತ್ತು. ಭಾರತ ತಂಡವು ಕೊನೆಯದಾಗಿ ಐಸಿಸಿ ಟೂರ್ನಿಯನ್ನು ಅನ್ನು ಗೆದ್ದು ಒಂಬತ್ತು ವರ್ಷಗಳಾಗಿವೆ. ಅಂದಿನಿಂದ ಐಸಿಸಿ ಪ್ರಶಸ್ತಿಯು ಪ್ರತಿ ಬಾರಿಯೂ ಟೀಂ ಇಂಡಿಯಾಗೆ ಗಗನಕುಸುಮವಾಗಿದೆ. ಆದರೆ ಈ ಬಾರಿ ಸೆಮಿಫೈನಲ್ ಹಂತ ತಲುಪಿದ್ದು, ಮತ್ತೊಂದು ವಿಶ್ವಕಪ್ ಗೆಲ್ಲುವ ಸನಿಹದಲ್ಲಿದೆ.


ಸೂರ್ಯಕುಮಾರ್ ತನ್ನದೇ ಶೈಲಿಯಲ್ಲಿ ಆಡಲು ಇಷ್ಟಪಡುತ್ತಾನೆ. ಅದು ಬಹುಶಃ ಸೂರ್ಯಕುಮಾರ್ ಯಾದವ್ ಸ್ವಭಾವ.‌ ಅವನು ನಿರ್ಭೀತಿಯಿಂದ ಆಡುತ್ತಾನೆ. ಪಂದ್ಯದ ಪರಿಸ್ಥಿತಿಗನುಗುಣವಾಗಿ ತಂಡದ ಒತ್ತಡವನ್ನು ಬ್ಯಾಟಿಂಗ್ ಮೂಲಕ ನಿಭಾಯಿಸುತ್ತಾನೆ. ಇದು ತಂಡಕ್ಕೆ ವರದಾನವಾಗಿದೆ. ಸೂರ್ಯಕುಮಾರ್ ತನ್ನದೇ ಶೈಲಿಯಲ್ಲಿ ಆಡಲು ಇಷ್ಟಪಡುತ್ತಾನೆ. ಅದು 10 ರನ್‌ಗೆ 2 ವಿಕೆಟ್ ಬಿದ್ದಿರಬಹುದು ಅಥವಾ 100ಕ್ಕೆ 2 ವಿಕೆಟ್‌ ಆಗಿರಬಹುದು—

ರೋಹಿತ್ ಶರ್ಮಾ, ತಂಡದ ನಾಯಕ

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago