ಕ್ರೀಡೆ

ಇಂಗ್ಲೆಂಡ್‌ ವಿರುದ್ಧ ನಾಳೆ ಗೆದ್ದರೆ ಫೈನಲ್‌ ನಲ್ಲಿ ಮತ್ತೆ ಪಾಕ್‌ ಜತೆ ಮುಖಾಮುಖಿ

ಸಾಂಪ್ರದಾಯಿಕ ಎದುರಾಳಿಗಳು ಎದುರಾದರೆ ಟಿ& 20 ಪಂದ್ಯ ಮತ್ತಷ್ಟು ರೋಚಕ

ಅಡಿಲೇಡ್: ಈ ಬಾರಿ ಟಿ- 20 ವಿಶ್ವಕಪ್ ಗೆದ್ದೇ ಗೆಲ್ಲುತ್ತೇವೆ ಎಂದು ಛಲ ತೊಟ್ಟಿರುವ ಭಾರತ ತಂಡ, ಸೂಪರ್ ೧೨ರಲ್ಲಿ ೫ ಪಂದ್ಯಗಳಿಂದ ೮ ಅಂಕಗಳೊಂದಿಗೆ ಗ್ರೂಪ್ ೨ರಲ್ಲಿ ಅಗ್ರಸ್ಥಾನದೊಂದಿಗೆ ಸೆಮಿಫೈನಲ್ ಪ್ರವೇಶಿಸಿದೆ.

ಗುರುವಾರ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಪ್ರಮುಖ ಪಂ ದ್ಯಕ್ಕಾಗಿ ರೋಹಿತ್ ಶರ್ಮಾ ನಾಯಕತ್ವದ ತಂಡ ಸಜ್ಜಾಗಿದೆ.
ಅಡಿಲೇಡ್ ಓವಲ್‌ನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧ ಟಿ೨೦ ವಿಶ್ವಕಪ್‌ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಸೆಣಸಾಡಲಿದ್ದು, ಇಲ್ಲಿ ಗೆದ್ದ ತಂಡ ಪ್ರಶಸ್ತಿ ಸುತ್ತಿಗೆ ಮುನ್ನಡೆಯಲಿದೆ.

2022ರ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಸೂರ್ಯಕುಮಾರ್ ಯಾದವ್ ಅವರು ಮೂರು ಅರ್ಧಶತಕಗಳನ್ನು ದಾಖಲಿಸಿ ಭಾರತದ ಮಹತ್ವದ ಆಟಗಾರನಾಗಿ ಹೊರಹೊಮ್ಮಿದ್ದಾರೆ. ಇನ್ನು ತಂಡದ ವಿಷಯಕ್ಕೆ ಬಂದರೆ ಸ್ಪಿನ್ನರ್‌ಗಳನ್ನು ಎದುರಿಸಲು ಎಡಗೈ ಬ್ಯಾಟ್ಸ್‌ಮನ್‌ಗೆ ಅವಕಾಶವನ್ನು ನೀಡಲು ತಂಡದ ನಾಯಕ ಬಯಸಿದ್ದಾರೆ. ಆದರೆ ವಿಕೆಟ್ ಕೀಪರ್‌ಗಳಿಬ್ಬರೂ ತಂಡದ ಆಯ್ಕೆಯಲ್ಲಿರುತ್ತಾರೆ,
ಮಂಗಳವಾರ ನೆಟ್ಸ್ ಅಭ್ಯಾಸದ ವೇಳೆ ರೋಹಿತ್ ಶರ್ಮಾ ಅವರ ಮುಂಗೈಗೆ ಪೆಟ್ಟು ಬಿದ್ದಿತ್ತು. ಅದರ ಬಗ್ಗೆ ಮಾತನಾಡಿರುವ ರೋಹಿತ್ “” ನನಗೆ ನಿನ್ನೆ ಬಾಲ್ ತಾಗಿದೆ, ಆದರೆ ಇದೀಗ ಚೇತರಿಕೆಯಾಗಿದೆ ಎಂದು ತೋರುತ್ತದೆ, ಸಣ್ಣದಾದ ಏಟು ಕಂಡುಬಂದಿದೆ, ಆದರೆ ಈಗ ಅದು ಸಂಪೂರ್ಣವಾಗಿ ಗುಣಮುಖವಾಗಿದೆʼʼ ಎಂದಿದ್ದಾರೆ.

 

2013ರಲ್ಲಿ ಭಾರತ ಎಂಎಸ್ ಧೋನಿ ನಾಯಕತ್ವದಲ್ಲಿ ಚಾಂಪಿಯನ್ಸ್ ಟ್ರೋಫಿ ಗೆದ್ದಿತ್ತು. ಇದಕ್ಕೂ ಮುನ್ನ 2007ರಲ್ಲಿ ಟಿ೨೦ ವಿಶ್ವಕಪ್ ಗೆದ್ದು ಬೀಗಿತ್ತು. ಭಾರತ ತಂಡವು ಕೊನೆಯದಾಗಿ ಐಸಿಸಿ ಟೂರ್ನಿಯನ್ನು ಅನ್ನು ಗೆದ್ದು ಒಂಬತ್ತು ವರ್ಷಗಳಾಗಿವೆ. ಅಂದಿನಿಂದ ಐಸಿಸಿ ಪ್ರಶಸ್ತಿಯು ಪ್ರತಿ ಬಾರಿಯೂ ಟೀಂ ಇಂಡಿಯಾಗೆ ಗಗನಕುಸುಮವಾಗಿದೆ. ಆದರೆ ಈ ಬಾರಿ ಸೆಮಿಫೈನಲ್ ಹಂತ ತಲುಪಿದ್ದು, ಮತ್ತೊಂದು ವಿಶ್ವಕಪ್ ಗೆಲ್ಲುವ ಸನಿಹದಲ್ಲಿದೆ.


ಸೂರ್ಯಕುಮಾರ್ ತನ್ನದೇ ಶೈಲಿಯಲ್ಲಿ ಆಡಲು ಇಷ್ಟಪಡುತ್ತಾನೆ. ಅದು ಬಹುಶಃ ಸೂರ್ಯಕುಮಾರ್ ಯಾದವ್ ಸ್ವಭಾವ.‌ ಅವನು ನಿರ್ಭೀತಿಯಿಂದ ಆಡುತ್ತಾನೆ. ಪಂದ್ಯದ ಪರಿಸ್ಥಿತಿಗನುಗುಣವಾಗಿ ತಂಡದ ಒತ್ತಡವನ್ನು ಬ್ಯಾಟಿಂಗ್ ಮೂಲಕ ನಿಭಾಯಿಸುತ್ತಾನೆ. ಇದು ತಂಡಕ್ಕೆ ವರದಾನವಾಗಿದೆ. ಸೂರ್ಯಕುಮಾರ್ ತನ್ನದೇ ಶೈಲಿಯಲ್ಲಿ ಆಡಲು ಇಷ್ಟಪಡುತ್ತಾನೆ. ಅದು 10 ರನ್‌ಗೆ 2 ವಿಕೆಟ್ ಬಿದ್ದಿರಬಹುದು ಅಥವಾ 100ಕ್ಕೆ 2 ವಿಕೆಟ್‌ ಆಗಿರಬಹುದು—

ರೋಹಿತ್ ಶರ್ಮಾ, ತಂಡದ ನಾಯಕ

andolanait

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

2 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

3 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

3 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

5 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

8 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

9 hours ago