ಕ್ರೀಡೆ

ಇಂಗ್ಲೆಂಡ್‌ ವಿರುದ್ಧ ನಾಳೆ ಗೆದ್ದರೆ ಫೈನಲ್‌ ನಲ್ಲಿ ಮತ್ತೆ ಪಾಕ್‌ ಜತೆ ಮುಖಾಮುಖಿ

ಸಾಂಪ್ರದಾಯಿಕ ಎದುರಾಳಿಗಳು ಎದುರಾದರೆ ಟಿ& 20 ಪಂದ್ಯ ಮತ್ತಷ್ಟು ರೋಚಕ

ಅಡಿಲೇಡ್: ಈ ಬಾರಿ ಟಿ- 20 ವಿಶ್ವಕಪ್ ಗೆದ್ದೇ ಗೆಲ್ಲುತ್ತೇವೆ ಎಂದು ಛಲ ತೊಟ್ಟಿರುವ ಭಾರತ ತಂಡ, ಸೂಪರ್ ೧೨ರಲ್ಲಿ ೫ ಪಂದ್ಯಗಳಿಂದ ೮ ಅಂಕಗಳೊಂದಿಗೆ ಗ್ರೂಪ್ ೨ರಲ್ಲಿ ಅಗ್ರಸ್ಥಾನದೊಂದಿಗೆ ಸೆಮಿಫೈನಲ್ ಪ್ರವೇಶಿಸಿದೆ.

ಗುರುವಾರ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಪ್ರಮುಖ ಪಂ ದ್ಯಕ್ಕಾಗಿ ರೋಹಿತ್ ಶರ್ಮಾ ನಾಯಕತ್ವದ ತಂಡ ಸಜ್ಜಾಗಿದೆ.
ಅಡಿಲೇಡ್ ಓವಲ್‌ನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧ ಟಿ೨೦ ವಿಶ್ವಕಪ್‌ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಸೆಣಸಾಡಲಿದ್ದು, ಇಲ್ಲಿ ಗೆದ್ದ ತಂಡ ಪ್ರಶಸ್ತಿ ಸುತ್ತಿಗೆ ಮುನ್ನಡೆಯಲಿದೆ.

2022ರ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಸೂರ್ಯಕುಮಾರ್ ಯಾದವ್ ಅವರು ಮೂರು ಅರ್ಧಶತಕಗಳನ್ನು ದಾಖಲಿಸಿ ಭಾರತದ ಮಹತ್ವದ ಆಟಗಾರನಾಗಿ ಹೊರಹೊಮ್ಮಿದ್ದಾರೆ. ಇನ್ನು ತಂಡದ ವಿಷಯಕ್ಕೆ ಬಂದರೆ ಸ್ಪಿನ್ನರ್‌ಗಳನ್ನು ಎದುರಿಸಲು ಎಡಗೈ ಬ್ಯಾಟ್ಸ್‌ಮನ್‌ಗೆ ಅವಕಾಶವನ್ನು ನೀಡಲು ತಂಡದ ನಾಯಕ ಬಯಸಿದ್ದಾರೆ. ಆದರೆ ವಿಕೆಟ್ ಕೀಪರ್‌ಗಳಿಬ್ಬರೂ ತಂಡದ ಆಯ್ಕೆಯಲ್ಲಿರುತ್ತಾರೆ,
ಮಂಗಳವಾರ ನೆಟ್ಸ್ ಅಭ್ಯಾಸದ ವೇಳೆ ರೋಹಿತ್ ಶರ್ಮಾ ಅವರ ಮುಂಗೈಗೆ ಪೆಟ್ಟು ಬಿದ್ದಿತ್ತು. ಅದರ ಬಗ್ಗೆ ಮಾತನಾಡಿರುವ ರೋಹಿತ್ “” ನನಗೆ ನಿನ್ನೆ ಬಾಲ್ ತಾಗಿದೆ, ಆದರೆ ಇದೀಗ ಚೇತರಿಕೆಯಾಗಿದೆ ಎಂದು ತೋರುತ್ತದೆ, ಸಣ್ಣದಾದ ಏಟು ಕಂಡುಬಂದಿದೆ, ಆದರೆ ಈಗ ಅದು ಸಂಪೂರ್ಣವಾಗಿ ಗುಣಮುಖವಾಗಿದೆʼʼ ಎಂದಿದ್ದಾರೆ.

 

2013ರಲ್ಲಿ ಭಾರತ ಎಂಎಸ್ ಧೋನಿ ನಾಯಕತ್ವದಲ್ಲಿ ಚಾಂಪಿಯನ್ಸ್ ಟ್ರೋಫಿ ಗೆದ್ದಿತ್ತು. ಇದಕ್ಕೂ ಮುನ್ನ 2007ರಲ್ಲಿ ಟಿ೨೦ ವಿಶ್ವಕಪ್ ಗೆದ್ದು ಬೀಗಿತ್ತು. ಭಾರತ ತಂಡವು ಕೊನೆಯದಾಗಿ ಐಸಿಸಿ ಟೂರ್ನಿಯನ್ನು ಅನ್ನು ಗೆದ್ದು ಒಂಬತ್ತು ವರ್ಷಗಳಾಗಿವೆ. ಅಂದಿನಿಂದ ಐಸಿಸಿ ಪ್ರಶಸ್ತಿಯು ಪ್ರತಿ ಬಾರಿಯೂ ಟೀಂ ಇಂಡಿಯಾಗೆ ಗಗನಕುಸುಮವಾಗಿದೆ. ಆದರೆ ಈ ಬಾರಿ ಸೆಮಿಫೈನಲ್ ಹಂತ ತಲುಪಿದ್ದು, ಮತ್ತೊಂದು ವಿಶ್ವಕಪ್ ಗೆಲ್ಲುವ ಸನಿಹದಲ್ಲಿದೆ.


ಸೂರ್ಯಕುಮಾರ್ ತನ್ನದೇ ಶೈಲಿಯಲ್ಲಿ ಆಡಲು ಇಷ್ಟಪಡುತ್ತಾನೆ. ಅದು ಬಹುಶಃ ಸೂರ್ಯಕುಮಾರ್ ಯಾದವ್ ಸ್ವಭಾವ.‌ ಅವನು ನಿರ್ಭೀತಿಯಿಂದ ಆಡುತ್ತಾನೆ. ಪಂದ್ಯದ ಪರಿಸ್ಥಿತಿಗನುಗುಣವಾಗಿ ತಂಡದ ಒತ್ತಡವನ್ನು ಬ್ಯಾಟಿಂಗ್ ಮೂಲಕ ನಿಭಾಯಿಸುತ್ತಾನೆ. ಇದು ತಂಡಕ್ಕೆ ವರದಾನವಾಗಿದೆ. ಸೂರ್ಯಕುಮಾರ್ ತನ್ನದೇ ಶೈಲಿಯಲ್ಲಿ ಆಡಲು ಇಷ್ಟಪಡುತ್ತಾನೆ. ಅದು 10 ರನ್‌ಗೆ 2 ವಿಕೆಟ್ ಬಿದ್ದಿರಬಹುದು ಅಥವಾ 100ಕ್ಕೆ 2 ವಿಕೆಟ್‌ ಆಗಿರಬಹುದು—

ರೋಹಿತ್ ಶರ್ಮಾ, ತಂಡದ ನಾಯಕ

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

8 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

9 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

10 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

11 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

1 day ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago