ಬೆಂಗಳೂರು : ಇಲ್ಲಿನ ಎಂ ಚಿನ್ನಸ್ವಾಮಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023 ಟೂರ್ನಿಯ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಶ್ರೀಲಂಕಾ ಗೆಲುವಿಗೆ 157 ರನ್ ಸಾಧಾರಣ ಗುರಿ ನೀಡಿದೆ.
ವಿಶ್ವಕಪ್ ಟೂರ್ನಿಯಲ್ಲಿ ತನ್ನ ಕಳಪೆ ಆಟ ಮುಂದುವರಿಸಿದ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡ ಶ್ರೀಲಂಕಾ ಮಾರಕ ಬೌಲಿಂಗ್ ದಾಳಿಗೆ ನಲುಗಿ 33.2 ಓವರ್ ಗಳಲ್ಲಿ 156 ರನ್ ಗೆ ಆಲೌಟ್ ಆಯಿತು.
ಬ್ಯಾಟಿಂಗ್ ಸ್ವರ್ಗ ಎಂದು ಹೆಸರುವಾಸಿಯಾಗಿರುವ ಎಂ ಚಿನ್ನಸ್ವಾಮಿ ಮೈದಾನದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡ ನಿರೀಕ್ಷೆಯಂತೆ ಬ್ಯಾಟಿಂಗ್ ಆಯ್ದುಕೊಂಡಿತು. ಆದರೆ ನಾಯಕನ ಯೋಜನೆ ಹುಸಿಗೊಳಿಸುವಂತೆ ಬ್ಯಾಟ್ ಬೀಸಿದ ಇಂಗ್ಲೆಂಡ್ ಬ್ಯಾಟರ್ಸ್, ಲಂಕಾ ಸಂಘಟಿತ ಬೌಲಿಂಗ್ ಗೆ ಪೆವಿಲಿಯನ್ ಕಡೆಗೆ ಹೆಜ್ಜೆ ಹಾಕಿದರು.
ಏಕಾಂಗಿ ಹೊರಾಟ ನಡೆಸಿದ ಬೆನ್ ಸ್ಟೋಕ್ಸ್ 6 ಬೌಂಡರಿ ಸಹಿತ 43 ರನ್ ಬಾರಿಸಿ ತಂಡದ ಪರ ಗರಿಷ್ಠ ರನ್ ಸ್ಕೋರರ್ ಎನಿಸಿಕೊಂಡರು. ಇಂಗ್ಲೆಂಡ್ ಆರಂಭಿಕ ಆಟಗಾರರಾದ ಜಾನ್ನಿ ಬೈರ್ ಸ್ಟೋವ್ 30 ಗಳಿಸಿದರೆ ಡೇವಿಡ್ ಮಲನ್ 28 ರನ್ ಗಳಿಸಿ ಕ್ರಮವಾಗಿ ಕಸುನ್ ರಜಿತಾ ಹಾಗೂ ಏಂಜಲೊ ಮಾಥ್ಯೂಸ್ ಗೆ ವಿಕೆಟ್ ಒಪ್ಪಿಸಿದರು. ಜೊ ರೂಟ್(3) ಜೋಸ್ ಬಟ್ಲರ್(8) ಲಿಯಾಮ್ ಲಿವಿಂಗ್ ಸ್ಟೋನ್ (1) ಮೊಯೀನ್ ಅಲಿ (15) ಕ್ರಿಸ್ ವೂಕ್ಸ್ (0) ಡೇವಿಡ್ ವಿಲ್ಲಿ (10) ಅದಿಲ್ ರಶೀದ್ (2) ಮಾರ್ಕ್ ವುಡ್ (5) ರನ್ ಬಾರಿಸಿದರು.
ಲಂಕಾ ಪರ ಆಘಾತಕಾರಿ ಬೌಲಿಂಗ್ ನಡೆಸಿದ ಲಹಿರು ಕುಮಾರ 3 ವಿಕೆಟ್ ಪಡೆದು ಸಂಭ್ರಮಿಸಿದರೆ ಅನುಭವಿ ಆಟಗಾರ ಏಂಜಲೊ ಮಾಥ್ಯೂಸ್ ಹಾಗೂ ಕಸುನ್ ರಜಿತಾ ತಲಾ 2 ಹಾಗೂ ಮಹೀಶ್ ತೀಕ್ಷಣ ಒಂದು ವಿಕೆಟ್ ಪಡೆದರು.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…