ಬೆಂಗಳೂರು : ಇಲ್ಲಿನ ಎಂ ಚಿನ್ನಸ್ವಾಮಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023 ಟೂರ್ನಿಯ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಶ್ರೀಲಂಕಾ ಗೆಲುವಿಗೆ 157 ರನ್ ಸಾಧಾರಣ ಗುರಿ ನೀಡಿದೆ.
ವಿಶ್ವಕಪ್ ಟೂರ್ನಿಯಲ್ಲಿ ತನ್ನ ಕಳಪೆ ಆಟ ಮುಂದುವರಿಸಿದ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡ ಶ್ರೀಲಂಕಾ ಮಾರಕ ಬೌಲಿಂಗ್ ದಾಳಿಗೆ ನಲುಗಿ 33.2 ಓವರ್ ಗಳಲ್ಲಿ 156 ರನ್ ಗೆ ಆಲೌಟ್ ಆಯಿತು.
ಬ್ಯಾಟಿಂಗ್ ಸ್ವರ್ಗ ಎಂದು ಹೆಸರುವಾಸಿಯಾಗಿರುವ ಎಂ ಚಿನ್ನಸ್ವಾಮಿ ಮೈದಾನದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡ ನಿರೀಕ್ಷೆಯಂತೆ ಬ್ಯಾಟಿಂಗ್ ಆಯ್ದುಕೊಂಡಿತು. ಆದರೆ ನಾಯಕನ ಯೋಜನೆ ಹುಸಿಗೊಳಿಸುವಂತೆ ಬ್ಯಾಟ್ ಬೀಸಿದ ಇಂಗ್ಲೆಂಡ್ ಬ್ಯಾಟರ್ಸ್, ಲಂಕಾ ಸಂಘಟಿತ ಬೌಲಿಂಗ್ ಗೆ ಪೆವಿಲಿಯನ್ ಕಡೆಗೆ ಹೆಜ್ಜೆ ಹಾಕಿದರು.
ಏಕಾಂಗಿ ಹೊರಾಟ ನಡೆಸಿದ ಬೆನ್ ಸ್ಟೋಕ್ಸ್ 6 ಬೌಂಡರಿ ಸಹಿತ 43 ರನ್ ಬಾರಿಸಿ ತಂಡದ ಪರ ಗರಿಷ್ಠ ರನ್ ಸ್ಕೋರರ್ ಎನಿಸಿಕೊಂಡರು. ಇಂಗ್ಲೆಂಡ್ ಆರಂಭಿಕ ಆಟಗಾರರಾದ ಜಾನ್ನಿ ಬೈರ್ ಸ್ಟೋವ್ 30 ಗಳಿಸಿದರೆ ಡೇವಿಡ್ ಮಲನ್ 28 ರನ್ ಗಳಿಸಿ ಕ್ರಮವಾಗಿ ಕಸುನ್ ರಜಿತಾ ಹಾಗೂ ಏಂಜಲೊ ಮಾಥ್ಯೂಸ್ ಗೆ ವಿಕೆಟ್ ಒಪ್ಪಿಸಿದರು. ಜೊ ರೂಟ್(3) ಜೋಸ್ ಬಟ್ಲರ್(8) ಲಿಯಾಮ್ ಲಿವಿಂಗ್ ಸ್ಟೋನ್ (1) ಮೊಯೀನ್ ಅಲಿ (15) ಕ್ರಿಸ್ ವೂಕ್ಸ್ (0) ಡೇವಿಡ್ ವಿಲ್ಲಿ (10) ಅದಿಲ್ ರಶೀದ್ (2) ಮಾರ್ಕ್ ವುಡ್ (5) ರನ್ ಬಾರಿಸಿದರು.
ಲಂಕಾ ಪರ ಆಘಾತಕಾರಿ ಬೌಲಿಂಗ್ ನಡೆಸಿದ ಲಹಿರು ಕುಮಾರ 3 ವಿಕೆಟ್ ಪಡೆದು ಸಂಭ್ರಮಿಸಿದರೆ ಅನುಭವಿ ಆಟಗಾರ ಏಂಜಲೊ ಮಾಥ್ಯೂಸ್ ಹಾಗೂ ಕಸುನ್ ರಜಿತಾ ತಲಾ 2 ಹಾಗೂ ಮಹೀಶ್ ತೀಕ್ಷಣ ಒಂದು ವಿಕೆಟ್ ಪಡೆದರು.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…