ಬೆಂಗಳೂರು : ಇಲ್ಲಿನ ಎಂ ಚಿನ್ನಸ್ವಾಮಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023 ಟೂರ್ನಿಯ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಶ್ರೀಲಂಕಾ ಗೆಲುವಿಗೆ 157 ರನ್ ಸಾಧಾರಣ ಗುರಿ ನೀಡಿದೆ.
ವಿಶ್ವಕಪ್ ಟೂರ್ನಿಯಲ್ಲಿ ತನ್ನ ಕಳಪೆ ಆಟ ಮುಂದುವರಿಸಿದ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡ ಶ್ರೀಲಂಕಾ ಮಾರಕ ಬೌಲಿಂಗ್ ದಾಳಿಗೆ ನಲುಗಿ 33.2 ಓವರ್ ಗಳಲ್ಲಿ 156 ರನ್ ಗೆ ಆಲೌಟ್ ಆಯಿತು.
ಬ್ಯಾಟಿಂಗ್ ಸ್ವರ್ಗ ಎಂದು ಹೆಸರುವಾಸಿಯಾಗಿರುವ ಎಂ ಚಿನ್ನಸ್ವಾಮಿ ಮೈದಾನದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡ ನಿರೀಕ್ಷೆಯಂತೆ ಬ್ಯಾಟಿಂಗ್ ಆಯ್ದುಕೊಂಡಿತು. ಆದರೆ ನಾಯಕನ ಯೋಜನೆ ಹುಸಿಗೊಳಿಸುವಂತೆ ಬ್ಯಾಟ್ ಬೀಸಿದ ಇಂಗ್ಲೆಂಡ್ ಬ್ಯಾಟರ್ಸ್, ಲಂಕಾ ಸಂಘಟಿತ ಬೌಲಿಂಗ್ ಗೆ ಪೆವಿಲಿಯನ್ ಕಡೆಗೆ ಹೆಜ್ಜೆ ಹಾಕಿದರು.
ಏಕಾಂಗಿ ಹೊರಾಟ ನಡೆಸಿದ ಬೆನ್ ಸ್ಟೋಕ್ಸ್ 6 ಬೌಂಡರಿ ಸಹಿತ 43 ರನ್ ಬಾರಿಸಿ ತಂಡದ ಪರ ಗರಿಷ್ಠ ರನ್ ಸ್ಕೋರರ್ ಎನಿಸಿಕೊಂಡರು. ಇಂಗ್ಲೆಂಡ್ ಆರಂಭಿಕ ಆಟಗಾರರಾದ ಜಾನ್ನಿ ಬೈರ್ ಸ್ಟೋವ್ 30 ಗಳಿಸಿದರೆ ಡೇವಿಡ್ ಮಲನ್ 28 ರನ್ ಗಳಿಸಿ ಕ್ರಮವಾಗಿ ಕಸುನ್ ರಜಿತಾ ಹಾಗೂ ಏಂಜಲೊ ಮಾಥ್ಯೂಸ್ ಗೆ ವಿಕೆಟ್ ಒಪ್ಪಿಸಿದರು. ಜೊ ರೂಟ್(3) ಜೋಸ್ ಬಟ್ಲರ್(8) ಲಿಯಾಮ್ ಲಿವಿಂಗ್ ಸ್ಟೋನ್ (1) ಮೊಯೀನ್ ಅಲಿ (15) ಕ್ರಿಸ್ ವೂಕ್ಸ್ (0) ಡೇವಿಡ್ ವಿಲ್ಲಿ (10) ಅದಿಲ್ ರಶೀದ್ (2) ಮಾರ್ಕ್ ವುಡ್ (5) ರನ್ ಬಾರಿಸಿದರು.
ಲಂಕಾ ಪರ ಆಘಾತಕಾರಿ ಬೌಲಿಂಗ್ ನಡೆಸಿದ ಲಹಿರು ಕುಮಾರ 3 ವಿಕೆಟ್ ಪಡೆದು ಸಂಭ್ರಮಿಸಿದರೆ ಅನುಭವಿ ಆಟಗಾರ ಏಂಜಲೊ ಮಾಥ್ಯೂಸ್ ಹಾಗೂ ಕಸುನ್ ರಜಿತಾ ತಲಾ 2 ಹಾಗೂ ಮಹೀಶ್ ತೀಕ್ಷಣ ಒಂದು ವಿಕೆಟ್ ಪಡೆದರು.
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…
ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…
ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…
ಭೇರ್ಯ ಮಹೇಶ್ ಭೇರ್ಯ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…