ಬೆಂಗಳೂರು : ಇಲ್ಲಿನ ಎಂ ಚಿನ್ನಸ್ವಾಮಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023 ಟೂರ್ನಿಯ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಶ್ರೀಲಂಕಾ ಗೆಲುವಿಗೆ 157 ರನ್ ಸಾಧಾರಣ ಗುರಿ ನೀಡಿದೆ.
ವಿಶ್ವಕಪ್ ಟೂರ್ನಿಯಲ್ಲಿ ತನ್ನ ಕಳಪೆ ಆಟ ಮುಂದುವರಿಸಿದ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡ ಶ್ರೀಲಂಕಾ ಮಾರಕ ಬೌಲಿಂಗ್ ದಾಳಿಗೆ ನಲುಗಿ 33.2 ಓವರ್ ಗಳಲ್ಲಿ 156 ರನ್ ಗೆ ಆಲೌಟ್ ಆಯಿತು.
ಬ್ಯಾಟಿಂಗ್ ಸ್ವರ್ಗ ಎಂದು ಹೆಸರುವಾಸಿಯಾಗಿರುವ ಎಂ ಚಿನ್ನಸ್ವಾಮಿ ಮೈದಾನದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡ ನಿರೀಕ್ಷೆಯಂತೆ ಬ್ಯಾಟಿಂಗ್ ಆಯ್ದುಕೊಂಡಿತು. ಆದರೆ ನಾಯಕನ ಯೋಜನೆ ಹುಸಿಗೊಳಿಸುವಂತೆ ಬ್ಯಾಟ್ ಬೀಸಿದ ಇಂಗ್ಲೆಂಡ್ ಬ್ಯಾಟರ್ಸ್, ಲಂಕಾ ಸಂಘಟಿತ ಬೌಲಿಂಗ್ ಗೆ ಪೆವಿಲಿಯನ್ ಕಡೆಗೆ ಹೆಜ್ಜೆ ಹಾಕಿದರು.
ಏಕಾಂಗಿ ಹೊರಾಟ ನಡೆಸಿದ ಬೆನ್ ಸ್ಟೋಕ್ಸ್ 6 ಬೌಂಡರಿ ಸಹಿತ 43 ರನ್ ಬಾರಿಸಿ ತಂಡದ ಪರ ಗರಿಷ್ಠ ರನ್ ಸ್ಕೋರರ್ ಎನಿಸಿಕೊಂಡರು. ಇಂಗ್ಲೆಂಡ್ ಆರಂಭಿಕ ಆಟಗಾರರಾದ ಜಾನ್ನಿ ಬೈರ್ ಸ್ಟೋವ್ 30 ಗಳಿಸಿದರೆ ಡೇವಿಡ್ ಮಲನ್ 28 ರನ್ ಗಳಿಸಿ ಕ್ರಮವಾಗಿ ಕಸುನ್ ರಜಿತಾ ಹಾಗೂ ಏಂಜಲೊ ಮಾಥ್ಯೂಸ್ ಗೆ ವಿಕೆಟ್ ಒಪ್ಪಿಸಿದರು. ಜೊ ರೂಟ್(3) ಜೋಸ್ ಬಟ್ಲರ್(8) ಲಿಯಾಮ್ ಲಿವಿಂಗ್ ಸ್ಟೋನ್ (1) ಮೊಯೀನ್ ಅಲಿ (15) ಕ್ರಿಸ್ ವೂಕ್ಸ್ (0) ಡೇವಿಡ್ ವಿಲ್ಲಿ (10) ಅದಿಲ್ ರಶೀದ್ (2) ಮಾರ್ಕ್ ವುಡ್ (5) ರನ್ ಬಾರಿಸಿದರು.
ಲಂಕಾ ಪರ ಆಘಾತಕಾರಿ ಬೌಲಿಂಗ್ ನಡೆಸಿದ ಲಹಿರು ಕುಮಾರ 3 ವಿಕೆಟ್ ಪಡೆದು ಸಂಭ್ರಮಿಸಿದರೆ ಅನುಭವಿ ಆಟಗಾರ ಏಂಜಲೊ ಮಾಥ್ಯೂಸ್ ಹಾಗೂ ಕಸುನ್ ರಜಿತಾ ತಲಾ 2 ಹಾಗೂ ಮಹೀಶ್ ತೀಕ್ಷಣ ಒಂದು ವಿಕೆಟ್ ಪಡೆದರು.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…