ಕ್ರೀಡೆ

ವಿಶ್ವಕಪ್ ಗೆಲ್ಲುವಲ್ಲಿ ಪ್ರತಿಯೊಬ್ಬರ ಪಾತ್ರ ಇರುತ್ತದೆ: ಎಬಿಡಿ ಅಚ್ಚರಿ ಹೇಳಿಕೆ!

ನವದೆಹಲಿ : ಕ್ರಿಕೆಟ್ ಒಂದು ತಂಡದ ಆಟವಾಗಿದ್ದು, ವಿಶ್ವಕಪ್‌ನಂತಹ ಟೂರ್ನಿಗಳಲ್ಲಿ ಸಿಗುವ ಗೆಲುವಿನ ಶ್ರೇಯವನ್ನು ಕೇವಲ ಒಬ್ಬ ಆಟಗಾರನಿಗೆ ನೀಡುವುದು ಸರಿಯಲ್ಲ ಎಂದು ದಕ್ಷಿಣ ಆಫ್ರಿಕಾ ಮಾಜಿ ನಾಯಕ ಎಬಿ ಡಿ ವಿಲಿಯರ್ಸ್ ಹೇಳಿದ್ದಾರೆ.

2011 ಹಾಗೂ 2019ರ ಒಡಿಐ ವಿಶ್ವಕಪ್ ಟ್ರೋಫಿ ಗೆದ್ದಾಗ ಇದಕ್ಕೆ ಮಹೇಂದ್ರ ಸಿಂಗ್ ಧೋನಿ ಹಾಗೂ ಬೆನ್ ಸ್ಟೋಕ್ಸ್ ಅವರೇ ಕಾರಣ ಎಂಬ ತಪ್ಪು ತಿಳುವಳಿಕೆ ಇತ್ತು. ಆದರೆ, ಭಾರತ ಹಾಗೂ ಇಂಗ್ಲೆಂಡ್ ಪ್ರಶಸ್ತಿ ಗೆಲ್ಲುವುದರ ಹಿಂದೆ ತಂಡದ ಆಟಗಾರರ ಶ್ರಮವಿದೆ ಎಂದು ದಕ್ಷಿಣ ಆಫ್ರಿಕಾದ ಮಾಜಿ ಬ್ಯಾಟ್ಸ್‌ಮನ್‌ ತಿಳಿಸಿದ್ದಾರೆ.

2011ರಲ್ಲಿ ನಡೆದಿದ್ದ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದ ಎಂಎಸ್ ಧೋನಿ, ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಶ್ರೀಲಂಕಾ ವಿರುದ್ಧ ನಡೆದಿದ್ದ ಫೈನಲ್ ಪಂದ್ಯದಲ್ಲಿ ವೇಗಿ ನುವಾನ್ ಕುಲಶೇಖರ ಬೌಲಿಂಗ್‌ನಲ್ಲಿ ಸಿಕ್ಸರ್ ಸಿಡಿಸಿ ತಂಡಕ್ಕೆ ಗೆಲುವು ತಂದುಕೊಟ್ಟಿದ್ದರು. ತಮ್ಮ ಅಜೇಯ 91 ರನ್‌ಗಳಿಂದಾಗಿ ಎಎಸ್ ಧೋಜಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.

ಕ್ರಿಕೆಟ್ ಒಂದು ತಂಡದ ಆಟ: ತಮ್ಮದೇ ಆದ ಅಧಿಕೃತ ಯುಟ್ಯೂಬ್ ಚಾನೆಲ್ ನಲ್ಲಿ ಅಪ್ ಲೋಡ್ ಮಾಡಿರುವ ವಿಡಿಯೋದಲ್ಲಿ ದಕ್ಷಿಣ ಆಫ್ರಿಕಾದ ಸ್ಫೋಟಕ ಆಟಗಾರ, ಕ್ರಿಕೆಟ್ ಒಂದು ತಂಡದ ಆಟವಾಗಿದ್ದು, ವಿಶ್ವಕಪ್ ಗೆಲ್ಲುವಲ್ಲಿ ಪ್ರತಿಯೊಬ್ಬರ ಪಾತ್ರ ಇರುತ್ತದೆ ಎಂಬುದನ್ನು ಜನರು ಮೊದಲು ತಿಳಿದುಕೊಳ್ಳಬೇಕು ಎಂದು ಹೇಳಿದ್ದಾರೆ.

“ಕ್ರಿಕೆಟ್ ಒಂದು ಗುಂಪು ಆಟವಾಗಿದೆ. ಯಾವುದೇ ಒಬ್ಬ ಆಟಗಾರ ತನ್ನ ಪ್ರದರ್ಶನದಿಂದ ಮಾತ್ರ ಟ್ರೋಫಿಯನ್ನು ಎತ್ತಿ ಹಿಡಿಯಲು ಸಾಧ್ಯವೇ ಇಲ್ಲ. ಆದರೆ, ಪ್ರಶಸ್ತಿ ಗೆಲ್ಲುವುದರ ಸಂಪೂರ್ಣ ಶ್ರೇಯವನ್ನು ಕೇವಲ ಒಬ್ಬ ಆಟಗಾರನಿಗೆ ನೀಡಿರುವುದನ್ನು ನಾನು ಸಾಮಾಜಿಕ ಜಾಲತಾಣಗಳಲ್ಲಿ ಸೂಕ್ಷ್ಮವಾಗಿ ಗಮನಿಸಿದ್ದೇನೆ. ಭಾರತ ತಂಡ ವಿಶ್ವಕಪ್ ಗೆದ್ದಿದೆ ಎಂಬುದನ್ನು ನೆನಪಿಡಿ. ಅದನ್ನು ಮರೆತು ಬಿಡಬೇಡಿ. ಅದೇ ರೀತಿ 2019ರಲ್ಲಿ ಲಾರ್ಡ್ಸ್ ಮೈದಾನದಲ್ಲಿ ಬೆನ್ ಸ್ಟೋಕ್ಸ್ ಒಬ್ಬರೇ ಟ್ರೋಫಿ ಗೆದ್ದಿಲ್ಲ, ಅದು ಇಡೀ ಇಂಗ್ಲೆಂಡ್ ತಂಡದ ಶ್ರಮವಾಗಿತ್ತು,” ಎಂದು ಡಿವಿಲಿಯರ್ಸ್‌ ತಿಳಿಸಿದ್ದಾರೆ.

2019ರ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಗೆಲುವು ಸಾಧಿಸಿದ್ದ ಇಂಗ್ಲೆಂಡಡ ತಂಡ ಚೊಚ್ಚಲ ವಿಶ್ವಕಪ್ ಗೆದ್ದು ಸಂಭ್ರಮಿಸಿತ್ತು. ಆ ಪಂದ್ಯದಲ್ಲಿ ಇಂಗ್ಲೆಂಡ್ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಅಜೇಯ 84 ರನ್ ಸಿಡಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದರು.

ಗೆಲುವಿನ ಹಿಂದೆ ಹಲವು ಸಂಗತಿಗಳಿರುತ್ತವೆ: ವಿಶ್ವಕಪ್ ಗೆಲುವಿನಲ್ಲಿ ಕೇವಲ ಕೆಲವೇ ಆಟಗಾರರು ಮಾತ್ರ ಕಾರಣರಾಗುವುದಿಲ್ಲ, ಆಟಗಾರರು ಹಾಗೂ ಸಹಾಯಕ ಸಿಬ್ಬಂದಿಗಳ ಶ್ರಮವೂ ಮುಖ್ಯವಾಗಿರುತ್ತದೆ ಎಂದು ಎಬಿ ಡಿ ವಿಲಿಯರ್ಸ್ ಸ್ಪಷ್ಟಪಡಿಸಿದ್ದಾರೆ.

“ವಿಶ್ವಕಪ್ ಗೆಲ್ಲಬೇಕೆಂದರೆ ಹಲವು ಸಂಗತಿಗಳು ಪ್ರಮುಖ ಪಾತ್ರ ವಹಿಸುತ್ತವೆ. ಕೋಚಿಂಗ್ ಸಿಬ್ಬಂದಿ, ಆಯ್ಕೆ ಮಂಡಳಿ, ಕಮಿಟಿ ಸದಸ್ಯರು, ನಿರ್ದೇಶಕರು, ಹೆಡ್ ಕೋಚ್, ಆಟಗಾರರು ಮತ್ತು ಮೀಸಲು ಆಟಗಾರರು ಎಲ್ಲರ ಶ್ರಮವೂ ಇರುತ್ತದೆ ಎಂಬುದು ನನ್ನ ಭಾವನೆ,” ಎಂದು ದಕ್ಷಿಣ ಆಫ್ರಿಕಾ ಮಾಜಿ ನಾಯಕ ತಿಳಿಸಿದ್ದಾರೆ.

andolanait

Recent Posts

ಮಡಿಕೇರಿ| ಜಿಪ್ಸಿ ವಾಹನ ವಶಪಡಿಸಿಕೊಂಡ ಪೊಲೀಸರು: ಕಾರಣ ಏನ್‌ ಗೊತ್ತಾ?

ಮಡಿಕೇರಿ: ಅನಧಿಕೃತವಾಗಿ ವಾಹನದ ಸ್ವರೂಪ ಬದಲಾಯಿಸಿಕೊಂಡು ಕರ್ಕಶ ಶಬ್ಧದ ಸೈಲೆನ್ಸರ್‌ ಅಳವಡಿಸಿಕೊಂಡು ಸಾರ್ವಜನಿಕರಿಗೆ ಭಾರೀ ಕಿರಿಕಿರಿ ಮಾಡುತ್ತಿದ್ದ ಜಿಪ್ಸಿ ವಾಹನವೊಂದನ್ನು…

1 hour ago

ರಸ್ತೆ ಮಧ್ಯೆ ಪುಂಡರ ವ್ಹೀಲಿಂಗ್:‌ ವಿಡಿಯೋ ವೈರಲ್‌

ಹಾಸನ: ಪುಂಡರಿಬ್ಬರು ವ್ಹೀಲಿಂಗ್‌ ಮಾಡಿ ವಾಹನ ಸವಾರರಿಗೆ ಕಿರಿಕಿರಿ ಉಂಟು ಮಾಡಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಮುದುಡಿ ರಸ್ತೆಯಲ್ಲಿ…

1 hour ago

ಚಾರ್ಮಾಡಿ ಘಾಟ್‌ ಅರಣ್ಯದಲ್ಲಿ ಮತ್ತೆ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯ ನಾಶ

ಚಿಕ್ಕಮಗಳೂರು: ಚಾರ್ಮಾಡಿ ಅರಣ್ಯದಲ್ಲಿ ಭಾರೀ ಬೆಂಕಿ ಅನಾಹುತವಾಗಿದ್ದು, ಸೂಕ್ಷ್ಮ ಹುಲ್ಲುಗಾವಲು ಬೆಂಕಿಯಲ್ಲಿ ಭಸ್ಮವಾಗಿದೆ. ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಸಮೀಪವಿರುವ ಚಾರ್ಮಾಡಿ…

2 hours ago

ವಿರಾಜಪೇಟೆ| ಮಣ್ಣು ಕುಸಿದು ಟಿಪ್ಪರ್ ಚಾಲಕ ಸಾವು

ವಿರಾಜಪೇಟೆ: ಟಿಪ್ಪರ್ ಮೇಲೆ ಮಣ್ಣು ಕುಸಿದು ಚಾಲಕ ಮೃತಪಟ್ಟಿದ್ದು, ಮತ್ತೋರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿರಾಜಪೇಟೆಯ ಕದನೂರಿನಲ್ಲಿ ನಡೆದಿದೆ.…

2 hours ago

ಕುಶಾಲನಗರ| ಕಳಪೆ ಕಾಮಗಾರಿಗೆ ಶಾಸಕ ಡಾ.ಮಂಥರ್ ಗೌಡ ಅಸಮಾಧಾನ

ಕುಶಾಲನಗರ: ಪುರಸಭೆ ವ್ಯಾಪ್ತಿಯ ಎರಡನೇ ವಾರ್ಡ್‌ನ ನಿಂಗೇಗೌಡ ಬಡಾವಣೆಯ ರಸ್ತೆಯ ಕಾಮಗಾರಿ ಉದ್ಘಾಟನೆಗೆ ಬಂದ ಶಾಸಕರು ಕಾಮಗಾರಿ ವೀಕ್ಷಿಸಿ ಅತೃಪ್ತಗೊಂಡು…

3 hours ago

ಓದುಗರ ಪತ್ರ: ಕಾನ್ಫಿಡೆಂಟ್ ಮಾಲೀಕನಿಗೆ ಬದುಕುವ ಕಾನ್ಫಿಡೆಂಟ್ ಇಲ್ಲದಾಯಿತೇ?

ಕೋಟಿ ಕೋಟಿ ಹಣವಿದ್ದರೂ ನೆಮ್ಮದಿಯ ಸಂಬಂಧಗಳು ಇಲ್ಲದಿದ್ದರೆ ಜೀವನ ನಿರರ್ಥಕ. ಐಷಾರಾಮಿ ಬದುಕು ಎಂಬುದು ಸೌಕರ್ಯಗಳನ್ನು ನೀಡಬಲ್ಲದೇ ಹೊರತು, ಶಾಶ್ವತ…

4 hours ago