ಕ್ರೀಡೆ

ವಿಶ್ವಕಪ್ ಗೆಲ್ಲುವಲ್ಲಿ ಪ್ರತಿಯೊಬ್ಬರ ಪಾತ್ರ ಇರುತ್ತದೆ: ಎಬಿಡಿ ಅಚ್ಚರಿ ಹೇಳಿಕೆ!

ನವದೆಹಲಿ : ಕ್ರಿಕೆಟ್ ಒಂದು ತಂಡದ ಆಟವಾಗಿದ್ದು, ವಿಶ್ವಕಪ್‌ನಂತಹ ಟೂರ್ನಿಗಳಲ್ಲಿ ಸಿಗುವ ಗೆಲುವಿನ ಶ್ರೇಯವನ್ನು ಕೇವಲ ಒಬ್ಬ ಆಟಗಾರನಿಗೆ ನೀಡುವುದು ಸರಿಯಲ್ಲ ಎಂದು ದಕ್ಷಿಣ ಆಫ್ರಿಕಾ ಮಾಜಿ ನಾಯಕ ಎಬಿ ಡಿ ವಿಲಿಯರ್ಸ್ ಹೇಳಿದ್ದಾರೆ.

2011 ಹಾಗೂ 2019ರ ಒಡಿಐ ವಿಶ್ವಕಪ್ ಟ್ರೋಫಿ ಗೆದ್ದಾಗ ಇದಕ್ಕೆ ಮಹೇಂದ್ರ ಸಿಂಗ್ ಧೋನಿ ಹಾಗೂ ಬೆನ್ ಸ್ಟೋಕ್ಸ್ ಅವರೇ ಕಾರಣ ಎಂಬ ತಪ್ಪು ತಿಳುವಳಿಕೆ ಇತ್ತು. ಆದರೆ, ಭಾರತ ಹಾಗೂ ಇಂಗ್ಲೆಂಡ್ ಪ್ರಶಸ್ತಿ ಗೆಲ್ಲುವುದರ ಹಿಂದೆ ತಂಡದ ಆಟಗಾರರ ಶ್ರಮವಿದೆ ಎಂದು ದಕ್ಷಿಣ ಆಫ್ರಿಕಾದ ಮಾಜಿ ಬ್ಯಾಟ್ಸ್‌ಮನ್‌ ತಿಳಿಸಿದ್ದಾರೆ.

2011ರಲ್ಲಿ ನಡೆದಿದ್ದ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದ ಎಂಎಸ್ ಧೋನಿ, ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಶ್ರೀಲಂಕಾ ವಿರುದ್ಧ ನಡೆದಿದ್ದ ಫೈನಲ್ ಪಂದ್ಯದಲ್ಲಿ ವೇಗಿ ನುವಾನ್ ಕುಲಶೇಖರ ಬೌಲಿಂಗ್‌ನಲ್ಲಿ ಸಿಕ್ಸರ್ ಸಿಡಿಸಿ ತಂಡಕ್ಕೆ ಗೆಲುವು ತಂದುಕೊಟ್ಟಿದ್ದರು. ತಮ್ಮ ಅಜೇಯ 91 ರನ್‌ಗಳಿಂದಾಗಿ ಎಎಸ್ ಧೋಜಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.

ಕ್ರಿಕೆಟ್ ಒಂದು ತಂಡದ ಆಟ: ತಮ್ಮದೇ ಆದ ಅಧಿಕೃತ ಯುಟ್ಯೂಬ್ ಚಾನೆಲ್ ನಲ್ಲಿ ಅಪ್ ಲೋಡ್ ಮಾಡಿರುವ ವಿಡಿಯೋದಲ್ಲಿ ದಕ್ಷಿಣ ಆಫ್ರಿಕಾದ ಸ್ಫೋಟಕ ಆಟಗಾರ, ಕ್ರಿಕೆಟ್ ಒಂದು ತಂಡದ ಆಟವಾಗಿದ್ದು, ವಿಶ್ವಕಪ್ ಗೆಲ್ಲುವಲ್ಲಿ ಪ್ರತಿಯೊಬ್ಬರ ಪಾತ್ರ ಇರುತ್ತದೆ ಎಂಬುದನ್ನು ಜನರು ಮೊದಲು ತಿಳಿದುಕೊಳ್ಳಬೇಕು ಎಂದು ಹೇಳಿದ್ದಾರೆ.

“ಕ್ರಿಕೆಟ್ ಒಂದು ಗುಂಪು ಆಟವಾಗಿದೆ. ಯಾವುದೇ ಒಬ್ಬ ಆಟಗಾರ ತನ್ನ ಪ್ರದರ್ಶನದಿಂದ ಮಾತ್ರ ಟ್ರೋಫಿಯನ್ನು ಎತ್ತಿ ಹಿಡಿಯಲು ಸಾಧ್ಯವೇ ಇಲ್ಲ. ಆದರೆ, ಪ್ರಶಸ್ತಿ ಗೆಲ್ಲುವುದರ ಸಂಪೂರ್ಣ ಶ್ರೇಯವನ್ನು ಕೇವಲ ಒಬ್ಬ ಆಟಗಾರನಿಗೆ ನೀಡಿರುವುದನ್ನು ನಾನು ಸಾಮಾಜಿಕ ಜಾಲತಾಣಗಳಲ್ಲಿ ಸೂಕ್ಷ್ಮವಾಗಿ ಗಮನಿಸಿದ್ದೇನೆ. ಭಾರತ ತಂಡ ವಿಶ್ವಕಪ್ ಗೆದ್ದಿದೆ ಎಂಬುದನ್ನು ನೆನಪಿಡಿ. ಅದನ್ನು ಮರೆತು ಬಿಡಬೇಡಿ. ಅದೇ ರೀತಿ 2019ರಲ್ಲಿ ಲಾರ್ಡ್ಸ್ ಮೈದಾನದಲ್ಲಿ ಬೆನ್ ಸ್ಟೋಕ್ಸ್ ಒಬ್ಬರೇ ಟ್ರೋಫಿ ಗೆದ್ದಿಲ್ಲ, ಅದು ಇಡೀ ಇಂಗ್ಲೆಂಡ್ ತಂಡದ ಶ್ರಮವಾಗಿತ್ತು,” ಎಂದು ಡಿವಿಲಿಯರ್ಸ್‌ ತಿಳಿಸಿದ್ದಾರೆ.

2019ರ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಗೆಲುವು ಸಾಧಿಸಿದ್ದ ಇಂಗ್ಲೆಂಡಡ ತಂಡ ಚೊಚ್ಚಲ ವಿಶ್ವಕಪ್ ಗೆದ್ದು ಸಂಭ್ರಮಿಸಿತ್ತು. ಆ ಪಂದ್ಯದಲ್ಲಿ ಇಂಗ್ಲೆಂಡ್ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಅಜೇಯ 84 ರನ್ ಸಿಡಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದರು.

ಗೆಲುವಿನ ಹಿಂದೆ ಹಲವು ಸಂಗತಿಗಳಿರುತ್ತವೆ: ವಿಶ್ವಕಪ್ ಗೆಲುವಿನಲ್ಲಿ ಕೇವಲ ಕೆಲವೇ ಆಟಗಾರರು ಮಾತ್ರ ಕಾರಣರಾಗುವುದಿಲ್ಲ, ಆಟಗಾರರು ಹಾಗೂ ಸಹಾಯಕ ಸಿಬ್ಬಂದಿಗಳ ಶ್ರಮವೂ ಮುಖ್ಯವಾಗಿರುತ್ತದೆ ಎಂದು ಎಬಿ ಡಿ ವಿಲಿಯರ್ಸ್ ಸ್ಪಷ್ಟಪಡಿಸಿದ್ದಾರೆ.

“ವಿಶ್ವಕಪ್ ಗೆಲ್ಲಬೇಕೆಂದರೆ ಹಲವು ಸಂಗತಿಗಳು ಪ್ರಮುಖ ಪಾತ್ರ ವಹಿಸುತ್ತವೆ. ಕೋಚಿಂಗ್ ಸಿಬ್ಬಂದಿ, ಆಯ್ಕೆ ಮಂಡಳಿ, ಕಮಿಟಿ ಸದಸ್ಯರು, ನಿರ್ದೇಶಕರು, ಹೆಡ್ ಕೋಚ್, ಆಟಗಾರರು ಮತ್ತು ಮೀಸಲು ಆಟಗಾರರು ಎಲ್ಲರ ಶ್ರಮವೂ ಇರುತ್ತದೆ ಎಂಬುದು ನನ್ನ ಭಾವನೆ,” ಎಂದು ದಕ್ಷಿಣ ಆಫ್ರಿಕಾ ಮಾಜಿ ನಾಯಕ ತಿಳಿಸಿದ್ದಾರೆ.

andolanait

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

7 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

7 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

7 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

10 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

10 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

10 hours ago