ಕ್ರೀಡೆ

ಆಸೀಸ್‌ ವಿರುದ್ಧ ಭಾರತಕ್ಕೆ ರೋಚಕ ಜಯ: 4-1 ರಿಂದ ಸರಣಿ ವಶ

ಬೆಂಗಳೂರು : ಭಾರತ ತಂಡದ ಸಂಘಟಿತ ಬೌಲಿಂಗ್‌ ಮುಂದೆ ಮಂಕಾದ ಆಸ್ಟ್ರೇಲಿಯಾ ತಂಡ 6 ರನ್‌ಗಳಿಂದ ಸೋಲು ಅನುಭವಿಸಿದೆ.

ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಕೊನೆಯ ಫೈನಲ್‌ ಪಂದ್ಯದಲ್ಲಿ ಭಾರತ ತಂಡ ಆಸೀಸ್‌ ಸೋಲಿಸುವ ಮೂಲಕ ಸರಣಿಯನ್ನು 4-1 ರಿಂದ ವಶಪಡಿಸಿಕೊಂಡಿತು.

ಟಾಸ್ ಸೋತು ಬ್ಯಾಟಿಂಗ್‌ ಮಾಡಿದ ಭಾರತ ತಂಡ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 160 ರನ್ ಗಳಿಸಿತು. ಭಾರತದ ಬ್ಯಾಟರ್ ಗಳು ಉತ್ತಮ ಆರಂಭ ಪಡೆದರಾದರೂ ಭಾರತ ತಂಡ 33 ರನ್ ಗಳಿಸಿದ್ದಾಗ ಯಶಸ್ವಿ ಜೈಸ್ವಾಲ್ 21 ರನ್ ಗಳಿಸಿ ವಿಕೆಟ್ ಒಪ್ಪಿಸಿದಾಗ, ತಂಡ ಆಘಾತಕ್ಕೊಳಗಾಯಿತು. 4.6 ನೇ ಓವರ್ ನಲ್ಲಿ ಋತುರಾಜ್ ಗಾಯಕ್ವಾಡ್ ಔಟ್ ಆದಾಗ ಭಾರತ ತಂಡ ಕುಸಿಯುವ ಭೀತಿಗೊಳಗಾಯಿತು.

ಸೂರ್ಯ ಕುಮಾರ್ ಯಾದವ್ ಈ ಬಾರಿಯೂ ವೈಫಲ್ಯ ಅನುಭವಿಸಿದರು. ಕೇವಲ 5 ರನ್ ಗಳಿಸಿ ಪೆವಿಲಿಯನ್ ಗೆ ಮರಳಿದರು. ಸ್ಪೋಟಕ ಬ್ಯಾಟರ್ ರಿಂಕು ಸಿಂಗ್, ತನ್ನೀರ್ ಸಂಗ ಅವರ ಎಸೆತದಲ್ಲಿ ಟಿಮ್ ಡೇವಿಡ್ ಗೆ ಕ್ಯಾಚಿತ್ತು 6 ರನ್ ಗೆ ವಿಕೆಟ್ ಒಪ್ಪಿಸಿದರು. 53 ರನ್ ಗಳೊಂದಿಗೆ ಏಕಾಂಗಿ ಹೋರಾಟ ನಡೆಸಿದ ಶ್ರೇಯಸ್ ಅಯ್ಯರ್ ಭಾರತ ತಂಡಕ್ಕೆ ಆಸರೆಯಾದರು. 37 ಎಸೆತಗಳಲ್ಲಿ 53 ರನ್ ಗಳಿಸಿದರು. ಜಿತೇಶ್ ಶರ್ಮಾ24, ಅಕ್ಸರ್ ಪಟೇಲ್ 31 ರನ್ ಗಳಿಸಿ ತಂಡದ ಮೊತ್ತವನ್ನು 160ರ ಗಡಿ ದಾಟಿಸಿದರು.

ಭಾರತ ನೀಡಿದ 160 ರನ್ ಗಳ ಬೆನ್ನತ್ತಿದ ಆಸ್ಟ್ರೇಲಿಯ ಆರಂಭದಲ್ಲಿಯೇ ಜೋಶ್ ಪಿಲಿಪ್ 4 ವಿಕೆಟ್ ಕಳೆದುಕೊಂಡಿತು. ಆರಂಭಿಕ ಆಟಗಾರ ಟ್ರಾವೆಸ್ ಹೆಡ್ 28 ರನ್ ಗಳಿಸಿ ಉತ್ತಮ ಹೋರಾಟದ ಆಟ ಪ್ರದರ್ಶಿಸಿದರು. ಆದರೆ ರವಿ ಬಿಷ್ಟೋಯೊ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆಗಿ, ಆಸ್ಟ್ರೇಲಿಯಕ್ಕೆ ಆಘಾತ ನೀಡಿದರು. ಮೂರನೇ ಕ್ರಮಾಂಕದಲ್ಲಿ ಕ್ರೀಸ್ ಗೆ ಬಂದ ಬೆನ್ ಮೆಕ್ಕರ್ಮಾಟ್ 36 ಎಸೆತಗಳಲ್ಲಿ 5 ಸಿಕ್ಸರ್ ಸಹಿತ 54 ರನ್ ಗಳಿಸಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿ ಆಸ್ಟ್ರೇಲಿಯಾಗೆ ಗೆಲುವಿನ ಭರವಸೆ ನೀಡಿದರು. ಕೊನೆಯಲ್ಲಿ ಅಬ್ಬರಿಸಿದ ನಾಯಕ ಮ್ಯಾಥ್ಯೂ ವೇಡ್‌ 22ರನ್‌ ಬಾರಿಸಿ ಗೆಲುವಿನ ಭರವಸೆ ನೀಡಿದರು. ಆದರೆ ತಂಡವನ್ನು ಗೆಲುವಿನ ದಡ ಸೇರಿಸಲು ಆಗಲಿಲ್ಲ. ಭಾರತ ತಂಡ ಬೌಲಿಂಗ್‌ ಪ್ರದರ್ಶನಕ್ಕೆ ಮಂಕಾದ ಆಸೀಸ್‌ ಸರಣಿ ಸೋಲು ಅನುಭವಿಸಿತು.

ಭಾರತ ಪರ ಅರ್ಷ್‌ದೀಪ್‌ ಸಿಂಗ್‌ 2, ಮುಖೇಶ್‌ ಕುಮಾರ್‌ 3, ರವಿ ಬಿಷ್ನೋಯಿ 2 ಮತ್ತು ಅಕ್ಷರ್‌ಪಟೇಲ್‌ 1 ಪಡೆದರು.

ಪಂದ್ಯಶ್ರೇಷ್ಠ : ಅಕ್ಷರ್‌ ಪಟೇಲ್‌
ಸರಣಿ ಶ್ರೇಷ್ಠ : ರವಿ ಬಿಷ್ಣೋಯಿ

andolanait

Recent Posts

ಹುಣಸೂರಿನಲ್ಲಿ ಹಾಡಹಗಲೇ ಚಿನ್ನಭರಣ ದರೋಡೆ : ಐಜಿಪಿ ಬೋರಲಿಂಗಯ್ಯ ಹೇಳಿದ್ದೇನು?

ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌…

31 mins ago

ವರುಣಾ ನಾಲೆಯಲ್ಲಿ ಮಹಿಳೆ ಶವ ಪತ್ತೆ : ಚಿನ್ನಕ್ಕಾಗಿ ಕೊಲೆ ಶಂಕೆ?

ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…

55 mins ago

ವಾಯುನೆಲೆ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪಾಕಿಸ್ತಾನ

ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…

1 hour ago

ಸಿನಿ ಪಯಣಕ್ಕೆ ದಳಪತಿ ವಿಜಯ್‌ ವಿದಾಯ : ಭಾವುಕರಾಗಿ ಅಭಿಮಾನಿಗಳಿಗೆ ಹೇಳಿದ್ದೇನು?

ಚೆನ್ನೈ : ದಳಪತಿ ವಿಜಯ್‌ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…

1 hour ago

ರಾಷ್ಟ್ರಪಿತನ‌ ಹೆಸರನ್ನೇ ಅಳಿಸುವ ಪಿತೂರಿಯನ್ನು ಸೋಲಿಸೋಣ : ಸಿ.ಎಂ.ಸಿದ್ದರಾಮಯ್ಯ ಕರೆ

ಬೆಂಗಳೂರು : ಕಾಂಗ್ರೆಸ್‌ ಎಂದರೆ ಕೇವಲ ಒಂದು ರಾಜಕೀಯ ಪಕ್ಷವಲ್ಲ. ಇದೊಂದು ಚಳುವಳಿ ಮತ್ತು ಸಿದ್ಧಾಂತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

1 hour ago

ಬೀದಿನಾಯಿ ದಾಳಿ : ಇಬ್ಬರು ವಿದ್ಯಾರ್ಥಿಗಳೂ ಸೇರಿದಂತೆ ನಾಲ್ವರಿಗೆ ಗಾಯ

ಗೋಣಿಕೊಪ್ಪ : ಪಟ್ಟಣದಲ್ಲಿ ಬೀದಿನಾಯಿ ದಾಳಿಗೆ ಇಬ್ಬರು ವಿದ್ಯಾರ್ಥಿಗಳೂ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಈ ಘಟನೆಯಿಂದ ಎಚ್ಚೆತ್ತ ಸ್ಥಳೀಯರು ಮತ್ತಷ್ಟು…

2 hours ago