ಬೆಂಗಳೂರು : ಭಾರತ ತಂಡದ ಸಂಘಟಿತ ಬೌಲಿಂಗ್ ಮುಂದೆ ಮಂಕಾದ ಆಸ್ಟ್ರೇಲಿಯಾ ತಂಡ 6 ರನ್ಗಳಿಂದ ಸೋಲು ಅನುಭವಿಸಿದೆ.
ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಕೊನೆಯ ಫೈನಲ್ ಪಂದ್ಯದಲ್ಲಿ ಭಾರತ ತಂಡ ಆಸೀಸ್ ಸೋಲಿಸುವ ಮೂಲಕ ಸರಣಿಯನ್ನು 4-1 ರಿಂದ ವಶಪಡಿಸಿಕೊಂಡಿತು.
ಟಾಸ್ ಸೋತು ಬ್ಯಾಟಿಂಗ್ ಮಾಡಿದ ಭಾರತ ತಂಡ ನಿಗದಿತ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 160 ರನ್ ಗಳಿಸಿತು. ಭಾರತದ ಬ್ಯಾಟರ್ ಗಳು ಉತ್ತಮ ಆರಂಭ ಪಡೆದರಾದರೂ ಭಾರತ ತಂಡ 33 ರನ್ ಗಳಿಸಿದ್ದಾಗ ಯಶಸ್ವಿ ಜೈಸ್ವಾಲ್ 21 ರನ್ ಗಳಿಸಿ ವಿಕೆಟ್ ಒಪ್ಪಿಸಿದಾಗ, ತಂಡ ಆಘಾತಕ್ಕೊಳಗಾಯಿತು. 4.6 ನೇ ಓವರ್ ನಲ್ಲಿ ಋತುರಾಜ್ ಗಾಯಕ್ವಾಡ್ ಔಟ್ ಆದಾಗ ಭಾರತ ತಂಡ ಕುಸಿಯುವ ಭೀತಿಗೊಳಗಾಯಿತು.
ಸೂರ್ಯ ಕುಮಾರ್ ಯಾದವ್ ಈ ಬಾರಿಯೂ ವೈಫಲ್ಯ ಅನುಭವಿಸಿದರು. ಕೇವಲ 5 ರನ್ ಗಳಿಸಿ ಪೆವಿಲಿಯನ್ ಗೆ ಮರಳಿದರು. ಸ್ಪೋಟಕ ಬ್ಯಾಟರ್ ರಿಂಕು ಸಿಂಗ್, ತನ್ನೀರ್ ಸಂಗ ಅವರ ಎಸೆತದಲ್ಲಿ ಟಿಮ್ ಡೇವಿಡ್ ಗೆ ಕ್ಯಾಚಿತ್ತು 6 ರನ್ ಗೆ ವಿಕೆಟ್ ಒಪ್ಪಿಸಿದರು. 53 ರನ್ ಗಳೊಂದಿಗೆ ಏಕಾಂಗಿ ಹೋರಾಟ ನಡೆಸಿದ ಶ್ರೇಯಸ್ ಅಯ್ಯರ್ ಭಾರತ ತಂಡಕ್ಕೆ ಆಸರೆಯಾದರು. 37 ಎಸೆತಗಳಲ್ಲಿ 53 ರನ್ ಗಳಿಸಿದರು. ಜಿತೇಶ್ ಶರ್ಮಾ24, ಅಕ್ಸರ್ ಪಟೇಲ್ 31 ರನ್ ಗಳಿಸಿ ತಂಡದ ಮೊತ್ತವನ್ನು 160ರ ಗಡಿ ದಾಟಿಸಿದರು.
ಭಾರತ ನೀಡಿದ 160 ರನ್ ಗಳ ಬೆನ್ನತ್ತಿದ ಆಸ್ಟ್ರೇಲಿಯ ಆರಂಭದಲ್ಲಿಯೇ ಜೋಶ್ ಪಿಲಿಪ್ 4 ವಿಕೆಟ್ ಕಳೆದುಕೊಂಡಿತು. ಆರಂಭಿಕ ಆಟಗಾರ ಟ್ರಾವೆಸ್ ಹೆಡ್ 28 ರನ್ ಗಳಿಸಿ ಉತ್ತಮ ಹೋರಾಟದ ಆಟ ಪ್ರದರ್ಶಿಸಿದರು. ಆದರೆ ರವಿ ಬಿಷ್ಟೋಯೊ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆಗಿ, ಆಸ್ಟ್ರೇಲಿಯಕ್ಕೆ ಆಘಾತ ನೀಡಿದರು. ಮೂರನೇ ಕ್ರಮಾಂಕದಲ್ಲಿ ಕ್ರೀಸ್ ಗೆ ಬಂದ ಬೆನ್ ಮೆಕ್ಕರ್ಮಾಟ್ 36 ಎಸೆತಗಳಲ್ಲಿ 5 ಸಿಕ್ಸರ್ ಸಹಿತ 54 ರನ್ ಗಳಿಸಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿ ಆಸ್ಟ್ರೇಲಿಯಾಗೆ ಗೆಲುವಿನ ಭರವಸೆ ನೀಡಿದರು. ಕೊನೆಯಲ್ಲಿ ಅಬ್ಬರಿಸಿದ ನಾಯಕ ಮ್ಯಾಥ್ಯೂ ವೇಡ್ 22ರನ್ ಬಾರಿಸಿ ಗೆಲುವಿನ ಭರವಸೆ ನೀಡಿದರು. ಆದರೆ ತಂಡವನ್ನು ಗೆಲುವಿನ ದಡ ಸೇರಿಸಲು ಆಗಲಿಲ್ಲ. ಭಾರತ ತಂಡ ಬೌಲಿಂಗ್ ಪ್ರದರ್ಶನಕ್ಕೆ ಮಂಕಾದ ಆಸೀಸ್ ಸರಣಿ ಸೋಲು ಅನುಭವಿಸಿತು.
ಭಾರತ ಪರ ಅರ್ಷ್ದೀಪ್ ಸಿಂಗ್ 2, ಮುಖೇಶ್ ಕುಮಾರ್ 3, ರವಿ ಬಿಷ್ನೋಯಿ 2 ಮತ್ತು ಅಕ್ಷರ್ಪಟೇಲ್ 1 ಪಡೆದರು.
ಪಂದ್ಯಶ್ರೇಷ್ಠ : ಅಕ್ಷರ್ ಪಟೇಲ್
ಸರಣಿ ಶ್ರೇಷ್ಠ : ರವಿ ಬಿಷ್ಣೋಯಿ
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…