ಕ್ರೀಡೆ

ಆಸೀಸ್‌ ವಿರುದ್ಧ ಭಾರತಕ್ಕೆ ರೋಚಕ ಜಯ: 4-1 ರಿಂದ ಸರಣಿ ವಶ

ಬೆಂಗಳೂರು : ಭಾರತ ತಂಡದ ಸಂಘಟಿತ ಬೌಲಿಂಗ್‌ ಮುಂದೆ ಮಂಕಾದ ಆಸ್ಟ್ರೇಲಿಯಾ ತಂಡ 6 ರನ್‌ಗಳಿಂದ ಸೋಲು ಅನುಭವಿಸಿದೆ.

ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಕೊನೆಯ ಫೈನಲ್‌ ಪಂದ್ಯದಲ್ಲಿ ಭಾರತ ತಂಡ ಆಸೀಸ್‌ ಸೋಲಿಸುವ ಮೂಲಕ ಸರಣಿಯನ್ನು 4-1 ರಿಂದ ವಶಪಡಿಸಿಕೊಂಡಿತು.

ಟಾಸ್ ಸೋತು ಬ್ಯಾಟಿಂಗ್‌ ಮಾಡಿದ ಭಾರತ ತಂಡ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 160 ರನ್ ಗಳಿಸಿತು. ಭಾರತದ ಬ್ಯಾಟರ್ ಗಳು ಉತ್ತಮ ಆರಂಭ ಪಡೆದರಾದರೂ ಭಾರತ ತಂಡ 33 ರನ್ ಗಳಿಸಿದ್ದಾಗ ಯಶಸ್ವಿ ಜೈಸ್ವಾಲ್ 21 ರನ್ ಗಳಿಸಿ ವಿಕೆಟ್ ಒಪ್ಪಿಸಿದಾಗ, ತಂಡ ಆಘಾತಕ್ಕೊಳಗಾಯಿತು. 4.6 ನೇ ಓವರ್ ನಲ್ಲಿ ಋತುರಾಜ್ ಗಾಯಕ್ವಾಡ್ ಔಟ್ ಆದಾಗ ಭಾರತ ತಂಡ ಕುಸಿಯುವ ಭೀತಿಗೊಳಗಾಯಿತು.

ಸೂರ್ಯ ಕುಮಾರ್ ಯಾದವ್ ಈ ಬಾರಿಯೂ ವೈಫಲ್ಯ ಅನುಭವಿಸಿದರು. ಕೇವಲ 5 ರನ್ ಗಳಿಸಿ ಪೆವಿಲಿಯನ್ ಗೆ ಮರಳಿದರು. ಸ್ಪೋಟಕ ಬ್ಯಾಟರ್ ರಿಂಕು ಸಿಂಗ್, ತನ್ನೀರ್ ಸಂಗ ಅವರ ಎಸೆತದಲ್ಲಿ ಟಿಮ್ ಡೇವಿಡ್ ಗೆ ಕ್ಯಾಚಿತ್ತು 6 ರನ್ ಗೆ ವಿಕೆಟ್ ಒಪ್ಪಿಸಿದರು. 53 ರನ್ ಗಳೊಂದಿಗೆ ಏಕಾಂಗಿ ಹೋರಾಟ ನಡೆಸಿದ ಶ್ರೇಯಸ್ ಅಯ್ಯರ್ ಭಾರತ ತಂಡಕ್ಕೆ ಆಸರೆಯಾದರು. 37 ಎಸೆತಗಳಲ್ಲಿ 53 ರನ್ ಗಳಿಸಿದರು. ಜಿತೇಶ್ ಶರ್ಮಾ24, ಅಕ್ಸರ್ ಪಟೇಲ್ 31 ರನ್ ಗಳಿಸಿ ತಂಡದ ಮೊತ್ತವನ್ನು 160ರ ಗಡಿ ದಾಟಿಸಿದರು.

ಭಾರತ ನೀಡಿದ 160 ರನ್ ಗಳ ಬೆನ್ನತ್ತಿದ ಆಸ್ಟ್ರೇಲಿಯ ಆರಂಭದಲ್ಲಿಯೇ ಜೋಶ್ ಪಿಲಿಪ್ 4 ವಿಕೆಟ್ ಕಳೆದುಕೊಂಡಿತು. ಆರಂಭಿಕ ಆಟಗಾರ ಟ್ರಾವೆಸ್ ಹೆಡ್ 28 ರನ್ ಗಳಿಸಿ ಉತ್ತಮ ಹೋರಾಟದ ಆಟ ಪ್ರದರ್ಶಿಸಿದರು. ಆದರೆ ರವಿ ಬಿಷ್ಟೋಯೊ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆಗಿ, ಆಸ್ಟ್ರೇಲಿಯಕ್ಕೆ ಆಘಾತ ನೀಡಿದರು. ಮೂರನೇ ಕ್ರಮಾಂಕದಲ್ಲಿ ಕ್ರೀಸ್ ಗೆ ಬಂದ ಬೆನ್ ಮೆಕ್ಕರ್ಮಾಟ್ 36 ಎಸೆತಗಳಲ್ಲಿ 5 ಸಿಕ್ಸರ್ ಸಹಿತ 54 ರನ್ ಗಳಿಸಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿ ಆಸ್ಟ್ರೇಲಿಯಾಗೆ ಗೆಲುವಿನ ಭರವಸೆ ನೀಡಿದರು. ಕೊನೆಯಲ್ಲಿ ಅಬ್ಬರಿಸಿದ ನಾಯಕ ಮ್ಯಾಥ್ಯೂ ವೇಡ್‌ 22ರನ್‌ ಬಾರಿಸಿ ಗೆಲುವಿನ ಭರವಸೆ ನೀಡಿದರು. ಆದರೆ ತಂಡವನ್ನು ಗೆಲುವಿನ ದಡ ಸೇರಿಸಲು ಆಗಲಿಲ್ಲ. ಭಾರತ ತಂಡ ಬೌಲಿಂಗ್‌ ಪ್ರದರ್ಶನಕ್ಕೆ ಮಂಕಾದ ಆಸೀಸ್‌ ಸರಣಿ ಸೋಲು ಅನುಭವಿಸಿತು.

ಭಾರತ ಪರ ಅರ್ಷ್‌ದೀಪ್‌ ಸಿಂಗ್‌ 2, ಮುಖೇಶ್‌ ಕುಮಾರ್‌ 3, ರವಿ ಬಿಷ್ನೋಯಿ 2 ಮತ್ತು ಅಕ್ಷರ್‌ಪಟೇಲ್‌ 1 ಪಡೆದರು.

ಪಂದ್ಯಶ್ರೇಷ್ಠ : ಅಕ್ಷರ್‌ ಪಟೇಲ್‌
ಸರಣಿ ಶ್ರೇಷ್ಠ : ರವಿ ಬಿಷ್ಣೋಯಿ

andolanait

Recent Posts

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

6 hours ago

ಮೈಸೂರು ʼಜಯದೇವʼಕ್ಕೆ ಹೃದಯ ಬಿರಿಯುವಷ್ಟು ಒತ್ತಡ

ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…

6 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಚಿತ್ರೋದ್ಯಮವೂ ಪೈರಸಿ ಎಂಬ ಪೆಡಂಬೂತವೂ

ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್‌ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…

7 hours ago

ಮೀಸಲಾತಿ ಸಾಂವಿಧಾನಿಕ ಹಕ್ಕು ; ಸಮಾನತೆಯ ಮೆಟ್ಟಿಲು

ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 19  ಶುಕ್ರವಾರ  

7 hours ago

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

16 hours ago