ಕ್ರೀಡೆ

ಆಸೀಸ್‌ ವಿರುದ್ಧ ಭಾರತಕ್ಕೆ ರೋಚಕ ಜಯ: 4-1 ರಿಂದ ಸರಣಿ ವಶ

ಬೆಂಗಳೂರು : ಭಾರತ ತಂಡದ ಸಂಘಟಿತ ಬೌಲಿಂಗ್‌ ಮುಂದೆ ಮಂಕಾದ ಆಸ್ಟ್ರೇಲಿಯಾ ತಂಡ 6 ರನ್‌ಗಳಿಂದ ಸೋಲು ಅನುಭವಿಸಿದೆ.

ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಕೊನೆಯ ಫೈನಲ್‌ ಪಂದ್ಯದಲ್ಲಿ ಭಾರತ ತಂಡ ಆಸೀಸ್‌ ಸೋಲಿಸುವ ಮೂಲಕ ಸರಣಿಯನ್ನು 4-1 ರಿಂದ ವಶಪಡಿಸಿಕೊಂಡಿತು.

ಟಾಸ್ ಸೋತು ಬ್ಯಾಟಿಂಗ್‌ ಮಾಡಿದ ಭಾರತ ತಂಡ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 160 ರನ್ ಗಳಿಸಿತು. ಭಾರತದ ಬ್ಯಾಟರ್ ಗಳು ಉತ್ತಮ ಆರಂಭ ಪಡೆದರಾದರೂ ಭಾರತ ತಂಡ 33 ರನ್ ಗಳಿಸಿದ್ದಾಗ ಯಶಸ್ವಿ ಜೈಸ್ವಾಲ್ 21 ರನ್ ಗಳಿಸಿ ವಿಕೆಟ್ ಒಪ್ಪಿಸಿದಾಗ, ತಂಡ ಆಘಾತಕ್ಕೊಳಗಾಯಿತು. 4.6 ನೇ ಓವರ್ ನಲ್ಲಿ ಋತುರಾಜ್ ಗಾಯಕ್ವಾಡ್ ಔಟ್ ಆದಾಗ ಭಾರತ ತಂಡ ಕುಸಿಯುವ ಭೀತಿಗೊಳಗಾಯಿತು.

ಸೂರ್ಯ ಕುಮಾರ್ ಯಾದವ್ ಈ ಬಾರಿಯೂ ವೈಫಲ್ಯ ಅನುಭವಿಸಿದರು. ಕೇವಲ 5 ರನ್ ಗಳಿಸಿ ಪೆವಿಲಿಯನ್ ಗೆ ಮರಳಿದರು. ಸ್ಪೋಟಕ ಬ್ಯಾಟರ್ ರಿಂಕು ಸಿಂಗ್, ತನ್ನೀರ್ ಸಂಗ ಅವರ ಎಸೆತದಲ್ಲಿ ಟಿಮ್ ಡೇವಿಡ್ ಗೆ ಕ್ಯಾಚಿತ್ತು 6 ರನ್ ಗೆ ವಿಕೆಟ್ ಒಪ್ಪಿಸಿದರು. 53 ರನ್ ಗಳೊಂದಿಗೆ ಏಕಾಂಗಿ ಹೋರಾಟ ನಡೆಸಿದ ಶ್ರೇಯಸ್ ಅಯ್ಯರ್ ಭಾರತ ತಂಡಕ್ಕೆ ಆಸರೆಯಾದರು. 37 ಎಸೆತಗಳಲ್ಲಿ 53 ರನ್ ಗಳಿಸಿದರು. ಜಿತೇಶ್ ಶರ್ಮಾ24, ಅಕ್ಸರ್ ಪಟೇಲ್ 31 ರನ್ ಗಳಿಸಿ ತಂಡದ ಮೊತ್ತವನ್ನು 160ರ ಗಡಿ ದಾಟಿಸಿದರು.

ಭಾರತ ನೀಡಿದ 160 ರನ್ ಗಳ ಬೆನ್ನತ್ತಿದ ಆಸ್ಟ್ರೇಲಿಯ ಆರಂಭದಲ್ಲಿಯೇ ಜೋಶ್ ಪಿಲಿಪ್ 4 ವಿಕೆಟ್ ಕಳೆದುಕೊಂಡಿತು. ಆರಂಭಿಕ ಆಟಗಾರ ಟ್ರಾವೆಸ್ ಹೆಡ್ 28 ರನ್ ಗಳಿಸಿ ಉತ್ತಮ ಹೋರಾಟದ ಆಟ ಪ್ರದರ್ಶಿಸಿದರು. ಆದರೆ ರವಿ ಬಿಷ್ಟೋಯೊ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆಗಿ, ಆಸ್ಟ್ರೇಲಿಯಕ್ಕೆ ಆಘಾತ ನೀಡಿದರು. ಮೂರನೇ ಕ್ರಮಾಂಕದಲ್ಲಿ ಕ್ರೀಸ್ ಗೆ ಬಂದ ಬೆನ್ ಮೆಕ್ಕರ್ಮಾಟ್ 36 ಎಸೆತಗಳಲ್ಲಿ 5 ಸಿಕ್ಸರ್ ಸಹಿತ 54 ರನ್ ಗಳಿಸಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿ ಆಸ್ಟ್ರೇಲಿಯಾಗೆ ಗೆಲುವಿನ ಭರವಸೆ ನೀಡಿದರು. ಕೊನೆಯಲ್ಲಿ ಅಬ್ಬರಿಸಿದ ನಾಯಕ ಮ್ಯಾಥ್ಯೂ ವೇಡ್‌ 22ರನ್‌ ಬಾರಿಸಿ ಗೆಲುವಿನ ಭರವಸೆ ನೀಡಿದರು. ಆದರೆ ತಂಡವನ್ನು ಗೆಲುವಿನ ದಡ ಸೇರಿಸಲು ಆಗಲಿಲ್ಲ. ಭಾರತ ತಂಡ ಬೌಲಿಂಗ್‌ ಪ್ರದರ್ಶನಕ್ಕೆ ಮಂಕಾದ ಆಸೀಸ್‌ ಸರಣಿ ಸೋಲು ಅನುಭವಿಸಿತು.

ಭಾರತ ಪರ ಅರ್ಷ್‌ದೀಪ್‌ ಸಿಂಗ್‌ 2, ಮುಖೇಶ್‌ ಕುಮಾರ್‌ 3, ರವಿ ಬಿಷ್ನೋಯಿ 2 ಮತ್ತು ಅಕ್ಷರ್‌ಪಟೇಲ್‌ 1 ಪಡೆದರು.

ಪಂದ್ಯಶ್ರೇಷ್ಠ : ಅಕ್ಷರ್‌ ಪಟೇಲ್‌
ಸರಣಿ ಶ್ರೇಷ್ಠ : ರವಿ ಬಿಷ್ಣೋಯಿ

andolanait

Recent Posts

8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ; ವಾರದಲ್ಲಿ ಅಧಿಸೂಚನೆ : ಗೃಹ ಸಚಿವ ಪರಮೇಶ್ವರ

ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…

4 hours ago

ಇರಾನ್‌ ಅಣ್ವಸ್ತ್ರ ಹೊಂದಲು ಬ್ರಿಟನ್‌ ರಾಜ ಚಾರ್ಲ್‌ ಬಯಸುವುದಿಲ್ಲ : ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

5 hours ago

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ನಟ ದರ್ಶನ್‌

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಈಗ ಎರಡನೇ ಬಾರಿ ಜಾಮೀನಿಗಾಗಿ…

7 hours ago

ಚಾ.ನಗರ | ಚಿನ್ನಾಭರಣಕ್ಕಾಗಿ ಮದುವೆ ಮನೆಯಲ್ಲಿ ಮಾರಮಾರಿ ; ಚಾಕು ಇರಿತ

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…

8 hours ago

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

11 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

11 hours ago