ಬ್ರೆಝಿಲ್ನ ಖ್ಯಾತ ಫುಟ್ಬಾಲ್ ತಾರೆ ನೇಮರ್ ಜೂನಿಯರ್ ಅಲ್ ಹಿಲಾಲ್ ಕ್ಲಬ್ ಪರ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಪ್ರಸ್ತುತ ಕ್ಲಬ್ ಪ್ಯಾರಿಸ್ ಸೇಂಟ್-ಜರ್ಮೈನ್ ಜೊತೆಗಿನ ಒಪ್ಪಂದವನ್ನು ಕೊನೆಗೊಳಿಸಲು ನೇಮರ್ ನಿರ್ಧರಿಸಿದ್ದು, ಇದರ ಬೆನ್ನಲ್ಲೇ ಸ್ಟಾರ್ ಆಟಗಾರನನ್ನು ಟ್ರಾನ್ಸ್ಫರ್ ಮಾಡಲು ಪಿಎಸ್ಜಿ ಮುಂದಾಗಿದೆ. ಅದರಂತೆ ಇದೀಗ ಸೌದಿ ಅರೇಬಿಯಾದ ಖ್ಯಾತ ಕ್ಲಬ್ ಅಲ್ ಹಿಲಾಲ್ ಜೊತೆ ಪಿಎಸ್ಜಿ ವರ್ಗಾವಣೆ ಒಪ್ಪಂದ ಮಾಡಿಕೊಂಡಿದೆ ಎಂದು ವರದಿಯಾಗಿದೆ.
2017 ರಲ್ಲಿ ಸ್ಪೇನ್ನ ಖ್ಯಾತ ಫುಟ್ಬಾಲ್ ಕ್ಲಬ್ ಬಾರ್ಸಿಲೋನಾ ನೇಮರ್ ಜೂನಿಯರ್ ಅವರನ್ನು ಸಾರ್ವಕಾಲಿಕ ದಾಖಲೆಯ ಮೊತ್ತಕ್ಕೆ ಪ್ಯಾರಿಸ್ ಸೇಂಟ್-ಜರ್ಮೈನ್ ತಂಡಕ್ಕೆ ವರ್ಗಾವಣೆ ಮಾಡಿಕೊಂಡಿತ್ತು. ಅದರಂತೆ 6 ವರ್ಷಗಳ ಕಾಲ ಪಿಎಸ್ಜಿ ಪರ ಕಣಕ್ಕಿಳಿದಿದ್ದ ನೇಮರ್ 173 ಪಂದ್ಯಗಳಲ್ಲಿ 118 ಗೋಲುಗಳನ್ನು ಬಾರಿಸಿದ್ದರು.
ಇದೀಗ ಆರು ವರ್ಷಗಳ ಬಳಿಕ ಯುರೋಪ್ ಫುಟ್ಬಾಲ್ ಅಂಗಳವನ್ನು ತೊರೆಯಲು ನೇಮರ್ ನಿರ್ಧರಿಸಿದ್ದಾರೆ. ಈ ನಿರ್ಧಾರದ ಬೆನ್ನಲ್ಲೇ ಸೌದಿ ಅರೇಬಿಯಾ ಕ್ಲಬ್ ಬ್ರೆಝಿಲ್ ಸೂಪರ್ ಸ್ಟಾರ್ನನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಅಲ್ ಹಿಲಾಲ್ ಕ್ಲಬ್ ಹಾಗೂ ನೇಮರ್ ಜೊತೆಗಿನ ಒಪ್ಪಂದ ಮೊತ್ತ ಇನ್ನೂ ಬಹಿರಂಗಪಡಿಸಲಾಗಿಲ್ಲ. ಇದಾಗ್ಯೂ ಫ್ರಾನ್ಸ್ನ ಪ್ರಮುಖ ಕ್ರೀಡಾ ಪತ್ರಿಕೆ L’Equipe , ಅಲ್ ಹಿಲಾಲ್ ನೇಮರ್ಗೆ ಒಟ್ಟು 160 ಮಿಲಿಯನ್ ಯುರೋಗಳನ್ನು ಪಾತಿಸಲಿದೆ ಎಂದು ವರದಿ ಮಾಡಿದೆ. ಅಂದರೆ ಭಾರತೀಯ ರೂಪಾಯಿ ಮೌಲ್ಯ ಸುಮಾರು 1450 ಕೋಟಿ ರೂ.
ಕಳೆದ ಆರು ವರ್ಷಗಳಿಂದ ಫ್ರಾನ್ಸ್ನ ಪ್ಯಾರಿಸ್ ಸೇಂಟ್-ಜರ್ಮೈನ್ ಕ್ಲಬ್ ಪರ ಆಡುತ್ತಿರುವ ನೇಮರ್ ಜೂನಿಯರ್ ವಾರ್ಷಿಕವಾಗಿ 71 ಮಿಲಿಯನ್ ಯೂರೋ ವೇತನ ಪಡೆಯುತ್ತಿದ್ದಾರೆ. ಅಂದರೆ ಭಾರತೀಯ ರೂಪಾಯಿ ಮೌಲ್ಯ ಸುಮಾರು 643 ಕೋಟಿ ರೂ. ಇದೀಗ ಇದಕ್ಕಿಂತಲೂ ಹೆಚ್ಚಿನ ಮೊತ್ತವನ್ನು ಪಾವತಿಸಲು ಅಲ್ ಹಿಲಾಲ್ ಕ್ಲಬ್ ಮುಂದಾಗಿದೆ.
ಸೌದಿ ಪ್ರೊ ಲೀಗ್ನಲ್ಲಿ ಅಲ್ ನಾಸ್ರ್ ಪರ ಆಡುತ್ತಿರುವ ಕ್ರಿಸ್ಟಿಯಾನೊ ರೊನಾಲ್ಡೊ ವಾರ್ಷಿಕ ವೇತನವಾಗಿ 1,770 ಕೋಟಿ ರೂ. ಪಡೆಯುತ್ತಿದ್ದಾರೆ. ಇತ್ತ ರೊನಾಲ್ಡೊ ಬೆನ್ನಲ್ಲೇ ಸ್ಯಾಡಿಯೊ ಮಾನೆ, ಕರೀಮ್ ಬೆನ್ಝೆಮಾ ಸೇರಿದಂತೆ ಯುರೋಪ್ ಲೀಗ್ನಲ್ಲಿ ಮಿಂಚಿದ್ದ ಸ್ಟಾರ್ ಆಟಗಾರರು ಸೌದಿ ಅರೇಬಿಯಾ ಕ್ಲಬ್ನತ್ತ ಮುಖ ಮಾಡಿದ್ದರು.
ಇದೀಗ ನೇಮರ್ ಜೂನಿಯರ್ ಕೂಡ ಸೌದಿ ಕ್ಲಬ್ ಪರ ಕಣಕ್ಕಿಳಿಯಲು ಮುಂದಾಗಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲಿ ಸೌದಿ ಪ್ರೊ ಲೀಗ್ ಫುಟ್ಬಾಲ್ ಅಂಗಳದ ಹೊಸ ರಣರಂಗವಾಗಿ ಮಾರ್ಪಟ್ಟರೂ ಅಚ್ಚರಿಪಡಬೇಕಿಲ್ಲ.
ಪಾಟ್ನಾ : ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಪದವಿಗೆ ರಾಜೀನಾಮೆ ನೀಡಿದ್ದಾರೆ. ಅದರ ಬೆನ್ನಲ್ಲೇ ಬಿಹಾರದ ಹೊಸ…
ಗುಂಡ್ಲುಪೇಟೆ : ಕೇರಳ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್ಗೆ ಕಾರುವೊಂದು ಡಿಕ್ಕಿ ಹೊಡೆದು ತಾಯಿ-ಮಗಳು ಸ್ಥಳದಲ್ಲೇ ಮೃತಪಟ್ಟ ದುರಂತ ಘಟನೆ ಮಂಗಳವಾರ…
ಬೆಳಗಾವಿ : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್ ಅಹಮ್ಮದ್ ಬಿಡುಗಡೆಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ…
ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್ ಸಿಲಿಂಡರ್ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ…
ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್ಪಿಜಿ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…