ಬ್ರೆಝಿಲ್ನ ಖ್ಯಾತ ಫುಟ್ಬಾಲ್ ತಾರೆ ನೇಮರ್ ಜೂನಿಯರ್ ಅಲ್ ಹಿಲಾಲ್ ಕ್ಲಬ್ ಪರ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಪ್ರಸ್ತುತ ಕ್ಲಬ್ ಪ್ಯಾರಿಸ್ ಸೇಂಟ್-ಜರ್ಮೈನ್ ಜೊತೆಗಿನ ಒಪ್ಪಂದವನ್ನು ಕೊನೆಗೊಳಿಸಲು ನೇಮರ್ ನಿರ್ಧರಿಸಿದ್ದು, ಇದರ ಬೆನ್ನಲ್ಲೇ ಸ್ಟಾರ್ ಆಟಗಾರನನ್ನು ಟ್ರಾನ್ಸ್ಫರ್ ಮಾಡಲು ಪಿಎಸ್ಜಿ ಮುಂದಾಗಿದೆ. ಅದರಂತೆ ಇದೀಗ ಸೌದಿ ಅರೇಬಿಯಾದ ಖ್ಯಾತ ಕ್ಲಬ್ ಅಲ್ ಹಿಲಾಲ್ ಜೊತೆ ಪಿಎಸ್ಜಿ ವರ್ಗಾವಣೆ ಒಪ್ಪಂದ ಮಾಡಿಕೊಂಡಿದೆ ಎಂದು ವರದಿಯಾಗಿದೆ.
2017 ರಲ್ಲಿ ಸ್ಪೇನ್ನ ಖ್ಯಾತ ಫುಟ್ಬಾಲ್ ಕ್ಲಬ್ ಬಾರ್ಸಿಲೋನಾ ನೇಮರ್ ಜೂನಿಯರ್ ಅವರನ್ನು ಸಾರ್ವಕಾಲಿಕ ದಾಖಲೆಯ ಮೊತ್ತಕ್ಕೆ ಪ್ಯಾರಿಸ್ ಸೇಂಟ್-ಜರ್ಮೈನ್ ತಂಡಕ್ಕೆ ವರ್ಗಾವಣೆ ಮಾಡಿಕೊಂಡಿತ್ತು. ಅದರಂತೆ 6 ವರ್ಷಗಳ ಕಾಲ ಪಿಎಸ್ಜಿ ಪರ ಕಣಕ್ಕಿಳಿದಿದ್ದ ನೇಮರ್ 173 ಪಂದ್ಯಗಳಲ್ಲಿ 118 ಗೋಲುಗಳನ್ನು ಬಾರಿಸಿದ್ದರು.
ಇದೀಗ ಆರು ವರ್ಷಗಳ ಬಳಿಕ ಯುರೋಪ್ ಫುಟ್ಬಾಲ್ ಅಂಗಳವನ್ನು ತೊರೆಯಲು ನೇಮರ್ ನಿರ್ಧರಿಸಿದ್ದಾರೆ. ಈ ನಿರ್ಧಾರದ ಬೆನ್ನಲ್ಲೇ ಸೌದಿ ಅರೇಬಿಯಾ ಕ್ಲಬ್ ಬ್ರೆಝಿಲ್ ಸೂಪರ್ ಸ್ಟಾರ್ನನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಅಲ್ ಹಿಲಾಲ್ ಕ್ಲಬ್ ಹಾಗೂ ನೇಮರ್ ಜೊತೆಗಿನ ಒಪ್ಪಂದ ಮೊತ್ತ ಇನ್ನೂ ಬಹಿರಂಗಪಡಿಸಲಾಗಿಲ್ಲ. ಇದಾಗ್ಯೂ ಫ್ರಾನ್ಸ್ನ ಪ್ರಮುಖ ಕ್ರೀಡಾ ಪತ್ರಿಕೆ L’Equipe , ಅಲ್ ಹಿಲಾಲ್ ನೇಮರ್ಗೆ ಒಟ್ಟು 160 ಮಿಲಿಯನ್ ಯುರೋಗಳನ್ನು ಪಾತಿಸಲಿದೆ ಎಂದು ವರದಿ ಮಾಡಿದೆ. ಅಂದರೆ ಭಾರತೀಯ ರೂಪಾಯಿ ಮೌಲ್ಯ ಸುಮಾರು 1450 ಕೋಟಿ ರೂ.
ಕಳೆದ ಆರು ವರ್ಷಗಳಿಂದ ಫ್ರಾನ್ಸ್ನ ಪ್ಯಾರಿಸ್ ಸೇಂಟ್-ಜರ್ಮೈನ್ ಕ್ಲಬ್ ಪರ ಆಡುತ್ತಿರುವ ನೇಮರ್ ಜೂನಿಯರ್ ವಾರ್ಷಿಕವಾಗಿ 71 ಮಿಲಿಯನ್ ಯೂರೋ ವೇತನ ಪಡೆಯುತ್ತಿದ್ದಾರೆ. ಅಂದರೆ ಭಾರತೀಯ ರೂಪಾಯಿ ಮೌಲ್ಯ ಸುಮಾರು 643 ಕೋಟಿ ರೂ. ಇದೀಗ ಇದಕ್ಕಿಂತಲೂ ಹೆಚ್ಚಿನ ಮೊತ್ತವನ್ನು ಪಾವತಿಸಲು ಅಲ್ ಹಿಲಾಲ್ ಕ್ಲಬ್ ಮುಂದಾಗಿದೆ.
ಸೌದಿ ಪ್ರೊ ಲೀಗ್ನಲ್ಲಿ ಅಲ್ ನಾಸ್ರ್ ಪರ ಆಡುತ್ತಿರುವ ಕ್ರಿಸ್ಟಿಯಾನೊ ರೊನಾಲ್ಡೊ ವಾರ್ಷಿಕ ವೇತನವಾಗಿ 1,770 ಕೋಟಿ ರೂ. ಪಡೆಯುತ್ತಿದ್ದಾರೆ. ಇತ್ತ ರೊನಾಲ್ಡೊ ಬೆನ್ನಲ್ಲೇ ಸ್ಯಾಡಿಯೊ ಮಾನೆ, ಕರೀಮ್ ಬೆನ್ಝೆಮಾ ಸೇರಿದಂತೆ ಯುರೋಪ್ ಲೀಗ್ನಲ್ಲಿ ಮಿಂಚಿದ್ದ ಸ್ಟಾರ್ ಆಟಗಾರರು ಸೌದಿ ಅರೇಬಿಯಾ ಕ್ಲಬ್ನತ್ತ ಮುಖ ಮಾಡಿದ್ದರು.
ಇದೀಗ ನೇಮರ್ ಜೂನಿಯರ್ ಕೂಡ ಸೌದಿ ಕ್ಲಬ್ ಪರ ಕಣಕ್ಕಿಳಿಯಲು ಮುಂದಾಗಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲಿ ಸೌದಿ ಪ್ರೊ ಲೀಗ್ ಫುಟ್ಬಾಲ್ ಅಂಗಳದ ಹೊಸ ರಣರಂಗವಾಗಿ ಮಾರ್ಪಟ್ಟರೂ ಅಚ್ಚರಿಪಡಬೇಕಿಲ್ಲ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…