ಕ್ರೀಡೆ

ಕ್ರಿಶ್ಚಿಯಾನೊ ರೊನಾಲ್ಡೊಗೆ ಫಿಫಾ ವಿಶೇಷ ಗೌರವ

ದೋಹಾ(ಕತಾರ್​): ಕ್ರಿಶ್ಚಿಯಾನೊ ರೊನಾಲ್ಡೊ ಈ ಪೀಳಿಗೆಯ ವಿಶ್ವಶ್ರೇಷ್ಠ ಫುಟ್ಬಾಲಿಗ. ಚಿರತೆ ವೇಗವೇ ಆತನ ಬಲ. ಮೈದಾನದಲ್ಲಿ ಪಾದರಸದಂತೆ ಓಡಾಡಿ ಅಸಾಧ್ಯವೆಂಬ ಗೋಲುಗಳನ್ನು ಬಾರಿಸಿ ಇತಿಹಾಸ ನಿರ್ಮಿಸಿದ ಆಟಗಾರನಿಗೆ ಫಿಫಾ ವಿಶೇಷ ರೀತಿಯಲ್ಲಿ ಧನ್ಯವಾದ ಹೇಳಿದೆ.

ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ರೊನಾಲ್ಡೊ, ತಾವಾಡಿದ 5 ವಿಶ್ವಕಪ್​ಗಳಲ್ಲಿ ಗಳಿಸಿದ 8 ಗೋಲುಗಳ ವಿಡಿಯೋವನ್ನು ಫಿಫಾ ತನ್ನ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡು ಒಬ್ರಿಗಾಡ್​(ಧನ್ಯವಾದ) ಅರ್ಪಿಸಿತು. ರೊನಾಲ್ಡೊ 2006 ರಲ್ಲಿ ತಾವಾಡಿದ ಮೊದಲ ವಿಶ್ವಕಪ್​ನಲ್ಲಿ ಇರಾನ್​ ವಿರುದ್ಧ ಪ್ರಥಮ ಗೋಲು ಗಳಿಸಿದ್ದರು.

2014 ರಲ್ಲಿ ಘಾನಾ ವಿರುದ್ಧ ಒಂದು ಗೋಲು ಬಾರಿಸಿದ್ದರು. ಇದಾದ ಬಳಿಕ 2018 ರಲ್ಲಿ ನಡೆದ ವಿಶ್ವಕಪ್​ ರೊನಾಲ್ಡೊರ ಅದ್ಭುತ ಪ್ರದರ್ಶನಕ್ಕೆ ಸಾಕ್ಷಿಯಾಯಿತು. ಸ್ಪೇನ್​ ವಿರುದ್ಧ ಹ್ಯಾಟ್ರಿಕ್​​ ಗೋಲು ಮತ್ತು ಮೊರಾಕ್ಕೊ ವಿರುದ್ಧ ಹೆಡ್ಡರ್​ ಮೂಲಕ ದಾಖಲಾದ ವಿಶ್ವದಾಖಲೆಯ ಗೋಲೂ ಒಂದಾಗಿದೆ. 2022 ರ ಈ ಸಲದ ವಿಶ್ವಕಪ್​ನಲ್ಲಿ ರೊನಾಲ್ಡೊ ಘಾನಾ ವಿರುದ್ಧ ಒಂದು ಗೋಲು ಮಾತ್ರ ಗಳಿಸಿದ್ದಾರೆ.

ಬಹುತೇಕ ಕೊನೆಯ ವಿಶ್ವಕಪ್​ ಆಡುತ್ತಿರುವ ರೊನಾಲ್ಡೊ ವೃತ್ತಿಜೀವನದಲ್ಲಿ ಅತಿಹೆಚ್ಚು ಸವಾಲನ್ನು ಎದುರಿಸುತ್ತಿದ್ದಾರೆ. ಮ್ಯಾಂಚೆಸ್ಟರ್​ ಫುಟ್ಬಾಲ್​ ಸಂಸ್ಥೆಯಿಂದ ಹೊರಕ್ಕೆ, ಪೋರ್ಚುಗಲ್​ ತಂಡದ ಕೋಚ್​ ಫೆರ್ನಾಂಡೋ ಸ್ಯಾಂಟೋಸ್​ರ ಅವಕೃಪೆಗೆ ಒಳಗಾಗಿ ವಿಶ್ವಕಪ್​ನ ಪಂದ್ಯಗಳಿಂದ ಹೊರಗುಳಿದಿರುವುದು ರೊನಾಲ್ಡೊರನ್ನು ಕುಗ್ಗಿಸಿದೆ.

ನಿವೃತ್ತಿಯ ಅಂಚಿನಲ್ಲಿರುವ ರೊನಾಲ್ಡೊಗೆ ಗಾಯದ ಮೇಲೆ ಬರೆ ಎಳೆದಂತೆ ಶನಿವಾರ ರಾತ್ರಿ ನಡೆದ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಮೊರಾಕ್ಕೊ ವಿರುದ್ಧ ಪೋರ್ಚುಗಲ್​ 1-0 ಗೋಲಿನಿಂದ ಸೋತು ವಿಶ್ವಕಪ್​ನಿಂದ ಹೊರಬಿತ್ತು. ಹೀಗಾಗಿ ವಿಶ್ವಕಪ್​ ಗೆಲ್ಲದೇ ರೊನಾಲ್ಡೊ ವೃತ್ತಿಜೀವನ ಮುಗಿಸುವ ಸಾಧ್ಯತೆಗಳಿವೆ.

andolanait

Recent Posts

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

21 mins ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

2 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

5 hours ago

ಇಂದು ರಾತ್ರಿ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ…

5 hours ago

ಹಾಸನ: ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ

ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಮೂರನೇ…

5 hours ago

ಏಪ್ರಿಲ್.‌20ರಿಂದ ಸಿಎಂ ಸಿದ್ದರಾಮಯ್ಯ ಮೈಸೂರು, ಚಾಮರಾಜನಗರ ಜಿಲ್ಲಾ ಪ್ರವಾಸ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಏಪ್ರಿಲ್.‌20 ಹಾಗೂ 21ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಏಪ್ರಿಲ್.‌20ರಂದು ಬೆಳಿಗ್ಗೆ ವಿಶೇಷ ವಿಮಾನದಲ್ಲಿ ಮೈಸೂರಿಗೆ…

5 hours ago