ಕ್ರೀಡೆ

ಕ್ರಿಶ್ಚಿಯಾನೊ ರೊನಾಲ್ಡೊಗೆ ಫಿಫಾ ವಿಶೇಷ ಗೌರವ

ದೋಹಾ(ಕತಾರ್​): ಕ್ರಿಶ್ಚಿಯಾನೊ ರೊನಾಲ್ಡೊ ಈ ಪೀಳಿಗೆಯ ವಿಶ್ವಶ್ರೇಷ್ಠ ಫುಟ್ಬಾಲಿಗ. ಚಿರತೆ ವೇಗವೇ ಆತನ ಬಲ. ಮೈದಾನದಲ್ಲಿ ಪಾದರಸದಂತೆ ಓಡಾಡಿ ಅಸಾಧ್ಯವೆಂಬ ಗೋಲುಗಳನ್ನು ಬಾರಿಸಿ ಇತಿಹಾಸ ನಿರ್ಮಿಸಿದ ಆಟಗಾರನಿಗೆ ಫಿಫಾ ವಿಶೇಷ ರೀತಿಯಲ್ಲಿ ಧನ್ಯವಾದ ಹೇಳಿದೆ.

ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ರೊನಾಲ್ಡೊ, ತಾವಾಡಿದ 5 ವಿಶ್ವಕಪ್​ಗಳಲ್ಲಿ ಗಳಿಸಿದ 8 ಗೋಲುಗಳ ವಿಡಿಯೋವನ್ನು ಫಿಫಾ ತನ್ನ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡು ಒಬ್ರಿಗಾಡ್​(ಧನ್ಯವಾದ) ಅರ್ಪಿಸಿತು. ರೊನಾಲ್ಡೊ 2006 ರಲ್ಲಿ ತಾವಾಡಿದ ಮೊದಲ ವಿಶ್ವಕಪ್​ನಲ್ಲಿ ಇರಾನ್​ ವಿರುದ್ಧ ಪ್ರಥಮ ಗೋಲು ಗಳಿಸಿದ್ದರು.

2014 ರಲ್ಲಿ ಘಾನಾ ವಿರುದ್ಧ ಒಂದು ಗೋಲು ಬಾರಿಸಿದ್ದರು. ಇದಾದ ಬಳಿಕ 2018 ರಲ್ಲಿ ನಡೆದ ವಿಶ್ವಕಪ್​ ರೊನಾಲ್ಡೊರ ಅದ್ಭುತ ಪ್ರದರ್ಶನಕ್ಕೆ ಸಾಕ್ಷಿಯಾಯಿತು. ಸ್ಪೇನ್​ ವಿರುದ್ಧ ಹ್ಯಾಟ್ರಿಕ್​​ ಗೋಲು ಮತ್ತು ಮೊರಾಕ್ಕೊ ವಿರುದ್ಧ ಹೆಡ್ಡರ್​ ಮೂಲಕ ದಾಖಲಾದ ವಿಶ್ವದಾಖಲೆಯ ಗೋಲೂ ಒಂದಾಗಿದೆ. 2022 ರ ಈ ಸಲದ ವಿಶ್ವಕಪ್​ನಲ್ಲಿ ರೊನಾಲ್ಡೊ ಘಾನಾ ವಿರುದ್ಧ ಒಂದು ಗೋಲು ಮಾತ್ರ ಗಳಿಸಿದ್ದಾರೆ.

ಬಹುತೇಕ ಕೊನೆಯ ವಿಶ್ವಕಪ್​ ಆಡುತ್ತಿರುವ ರೊನಾಲ್ಡೊ ವೃತ್ತಿಜೀವನದಲ್ಲಿ ಅತಿಹೆಚ್ಚು ಸವಾಲನ್ನು ಎದುರಿಸುತ್ತಿದ್ದಾರೆ. ಮ್ಯಾಂಚೆಸ್ಟರ್​ ಫುಟ್ಬಾಲ್​ ಸಂಸ್ಥೆಯಿಂದ ಹೊರಕ್ಕೆ, ಪೋರ್ಚುಗಲ್​ ತಂಡದ ಕೋಚ್​ ಫೆರ್ನಾಂಡೋ ಸ್ಯಾಂಟೋಸ್​ರ ಅವಕೃಪೆಗೆ ಒಳಗಾಗಿ ವಿಶ್ವಕಪ್​ನ ಪಂದ್ಯಗಳಿಂದ ಹೊರಗುಳಿದಿರುವುದು ರೊನಾಲ್ಡೊರನ್ನು ಕುಗ್ಗಿಸಿದೆ.

ನಿವೃತ್ತಿಯ ಅಂಚಿನಲ್ಲಿರುವ ರೊನಾಲ್ಡೊಗೆ ಗಾಯದ ಮೇಲೆ ಬರೆ ಎಳೆದಂತೆ ಶನಿವಾರ ರಾತ್ರಿ ನಡೆದ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಮೊರಾಕ್ಕೊ ವಿರುದ್ಧ ಪೋರ್ಚುಗಲ್​ 1-0 ಗೋಲಿನಿಂದ ಸೋತು ವಿಶ್ವಕಪ್​ನಿಂದ ಹೊರಬಿತ್ತು. ಹೀಗಾಗಿ ವಿಶ್ವಕಪ್​ ಗೆಲ್ಲದೇ ರೊನಾಲ್ಡೊ ವೃತ್ತಿಜೀವನ ಮುಗಿಸುವ ಸಾಧ್ಯತೆಗಳಿವೆ.

andolanait

Recent Posts

ಬೆಳ್ಳಂಬೆಳಗ್ಗೆ JCB ಘರ್ಜನೆ ; ಸರ್ಕಾರಿ ಜಾಗ ಅಕ್ರಮ ತೆರವು

ಮೈಸೂರು : ಮೈಸೂರು ನಗರದಲ್ಲಿ ಬೆಳ್ಳಂಬೆಳಿಗ್ಗೆ ಜೆಸಿಬಿ ಘರ್ಜನೆ ಕೇಳಿ ಬಂದಿದ್ದು, ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದ ಜಾಗವನ್ನು ಸರ್ಕಾರದ…

22 mins ago

ಡ್ರಗ್ಸ್‌ ಹಾವಳಿ ನಿಯಂತ್ರಣದಲ್ಲಿ ಸಿಸಿಬಿ ವೈಫಲ್ಯ ; ಕಮಿಷನರ್ ಸೀಮಾ ಲಾಟ್ಕರ್ ಸಿಬ್ಬಂದಿಗೆ ಬಿಗ್ ಶಾಕ್!

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇತ್ತೀಚಿಗೆ ಮಾದಕ ವಸ್ತುಗಳ (ಡ್ರಗ್ಸ್) ತಯಾರಿಕೆ ಮತ್ತು ಮಾರಾಟದ ಜಾಲಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ…

1 hour ago

ಹೊತ್ತಿ ಉರಿದ ಖಾಸಗಿ ಬಸ್‌ : ಸಂಪೂರ್ಣ ಕರಕಲು ; 40 ಪ್ರಯಾಣಿಕರು ಬಚಾವ್‌

ಬೆಂಗಳೂರು : ನೆಲಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬೆಂಗಳೂರಿನಿಂದ ಯಾದಗಿರಿ ಕಡೆಗೆ ಹೊರಟಿದ್ದ ಖಾಸಗಿ ನಾನ್-ಎಸಿ ಸ್ಲೀಪರ್ ಬಸ್‌ವೊಂದು…

2 hours ago

ಓದುಗರ ಪತ್ರ: ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ

ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ನಿಗಮ (ಸೆಸ್ಕ್)ನಿಂದ ಅಂಡರ್ ಗ್ರೌಂಡ್ ಕೇಬಲ್…

6 hours ago

ಓದುಗರ ಪತ್ರ: ನ್ಯಾಯಾಂಗ ಬಡಾವಣೆಗೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ರಾಜರಾಜೇಶ್ವರಿ ನಗರದ ಬಳಿಯ ನ್ಯಾಯಾಂಗ ಬಡಾವಣೆಯಲ್ಲಿ ಐದಕ್ಕೂ ಹೆಚ್ಚು ಸರ್ಕಾರಿ ವಸತಿನಿಲಯಗಳಿದ್ದು, ಬೆಳಿಗ್ಗೆ ಹಾಗೂ ಸಂಜೆ ಸಾಕಷ್ಟು ನಗರ…

6 hours ago

ಓದುಗರ ಪತ್ರ: ಮಹಾರಾಣಿ ಕಾಲೇಜು ಆವರಣದಲ್ಲಿನ ಕಸ ತೆರವುಗೊಳಿಸಿ

ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಆವರಣದಲ್ಲಿ ಪ್ಲಾಸ್ಟಿಕ್ ಬಾಟಲಿ, ಪ್ಲೇಟ್, ಚೀಲಗಳು ಹಾಗೂ ಮರದ ಎಲೆಗಳು ತುಂಬಿದ್ದು, ಅನೈರ್ಮಲ್ಯದ…

6 hours ago