ಕ್ರೀಡೆ

ಕ್ರಿಶ್ಚಿಯಾನೊ ರೊನಾಲ್ಡೊಗೆ ಫಿಫಾ ವಿಶೇಷ ಗೌರವ

ದೋಹಾ(ಕತಾರ್​): ಕ್ರಿಶ್ಚಿಯಾನೊ ರೊನಾಲ್ಡೊ ಈ ಪೀಳಿಗೆಯ ವಿಶ್ವಶ್ರೇಷ್ಠ ಫುಟ್ಬಾಲಿಗ. ಚಿರತೆ ವೇಗವೇ ಆತನ ಬಲ. ಮೈದಾನದಲ್ಲಿ ಪಾದರಸದಂತೆ ಓಡಾಡಿ ಅಸಾಧ್ಯವೆಂಬ ಗೋಲುಗಳನ್ನು ಬಾರಿಸಿ ಇತಿಹಾಸ ನಿರ್ಮಿಸಿದ ಆಟಗಾರನಿಗೆ ಫಿಫಾ ವಿಶೇಷ ರೀತಿಯಲ್ಲಿ ಧನ್ಯವಾದ ಹೇಳಿದೆ.

ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ರೊನಾಲ್ಡೊ, ತಾವಾಡಿದ 5 ವಿಶ್ವಕಪ್​ಗಳಲ್ಲಿ ಗಳಿಸಿದ 8 ಗೋಲುಗಳ ವಿಡಿಯೋವನ್ನು ಫಿಫಾ ತನ್ನ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡು ಒಬ್ರಿಗಾಡ್​(ಧನ್ಯವಾದ) ಅರ್ಪಿಸಿತು. ರೊನಾಲ್ಡೊ 2006 ರಲ್ಲಿ ತಾವಾಡಿದ ಮೊದಲ ವಿಶ್ವಕಪ್​ನಲ್ಲಿ ಇರಾನ್​ ವಿರುದ್ಧ ಪ್ರಥಮ ಗೋಲು ಗಳಿಸಿದ್ದರು.

2014 ರಲ್ಲಿ ಘಾನಾ ವಿರುದ್ಧ ಒಂದು ಗೋಲು ಬಾರಿಸಿದ್ದರು. ಇದಾದ ಬಳಿಕ 2018 ರಲ್ಲಿ ನಡೆದ ವಿಶ್ವಕಪ್​ ರೊನಾಲ್ಡೊರ ಅದ್ಭುತ ಪ್ರದರ್ಶನಕ್ಕೆ ಸಾಕ್ಷಿಯಾಯಿತು. ಸ್ಪೇನ್​ ವಿರುದ್ಧ ಹ್ಯಾಟ್ರಿಕ್​​ ಗೋಲು ಮತ್ತು ಮೊರಾಕ್ಕೊ ವಿರುದ್ಧ ಹೆಡ್ಡರ್​ ಮೂಲಕ ದಾಖಲಾದ ವಿಶ್ವದಾಖಲೆಯ ಗೋಲೂ ಒಂದಾಗಿದೆ. 2022 ರ ಈ ಸಲದ ವಿಶ್ವಕಪ್​ನಲ್ಲಿ ರೊನಾಲ್ಡೊ ಘಾನಾ ವಿರುದ್ಧ ಒಂದು ಗೋಲು ಮಾತ್ರ ಗಳಿಸಿದ್ದಾರೆ.

ಬಹುತೇಕ ಕೊನೆಯ ವಿಶ್ವಕಪ್​ ಆಡುತ್ತಿರುವ ರೊನಾಲ್ಡೊ ವೃತ್ತಿಜೀವನದಲ್ಲಿ ಅತಿಹೆಚ್ಚು ಸವಾಲನ್ನು ಎದುರಿಸುತ್ತಿದ್ದಾರೆ. ಮ್ಯಾಂಚೆಸ್ಟರ್​ ಫುಟ್ಬಾಲ್​ ಸಂಸ್ಥೆಯಿಂದ ಹೊರಕ್ಕೆ, ಪೋರ್ಚುಗಲ್​ ತಂಡದ ಕೋಚ್​ ಫೆರ್ನಾಂಡೋ ಸ್ಯಾಂಟೋಸ್​ರ ಅವಕೃಪೆಗೆ ಒಳಗಾಗಿ ವಿಶ್ವಕಪ್​ನ ಪಂದ್ಯಗಳಿಂದ ಹೊರಗುಳಿದಿರುವುದು ರೊನಾಲ್ಡೊರನ್ನು ಕುಗ್ಗಿಸಿದೆ.

ನಿವೃತ್ತಿಯ ಅಂಚಿನಲ್ಲಿರುವ ರೊನಾಲ್ಡೊಗೆ ಗಾಯದ ಮೇಲೆ ಬರೆ ಎಳೆದಂತೆ ಶನಿವಾರ ರಾತ್ರಿ ನಡೆದ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಮೊರಾಕ್ಕೊ ವಿರುದ್ಧ ಪೋರ್ಚುಗಲ್​ 1-0 ಗೋಲಿನಿಂದ ಸೋತು ವಿಶ್ವಕಪ್​ನಿಂದ ಹೊರಬಿತ್ತು. ಹೀಗಾಗಿ ವಿಶ್ವಕಪ್​ ಗೆಲ್ಲದೇ ರೊನಾಲ್ಡೊ ವೃತ್ತಿಜೀವನ ಮುಗಿಸುವ ಸಾಧ್ಯತೆಗಳಿವೆ.

andolanait

Recent Posts

ಕಾವೇರಿ ನದಿಗಿಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆ

ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ…

7 hours ago

ಪಾಕ್‌ನಿಂದ ಆಫ್ಗಾನಿಸ್ತಾನದ ಮೇಲೆ ವಾಯು ದಾಳಿ ; 13 ಮಂದಿ ಸಾವು; 14 ಮಂದಿಗೆ ಗಾಯ

ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…

9 hours ago

ಭಾರತಿರಾಜ್‌ ಅಂತಿಮ ದರ್ಶನ ಪಡೆದ ರಜನಿ, ಕಮಲ್‌, ಸಿ.ಎಂ.ವಿಜಯ್‌

ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…

12 hours ago

ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನಕ್ಕೆ ದಲಿತ ಸಂಘಟನೆಗಳ ಆಗ್ರಹ

ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…

12 hours ago

ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಬಿಟ್ಟು ಬೇರೇನೂ ಮಾಡಲಿಲ್ಲ ಸಿದ್ದರಾಮಯ್ಯ: ಟೀಕೆ

ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…

12 hours ago

ರಾಜ್ಯಸಭಾ ಸ್ಥಾನ ಕೇಳಿಲ್ಲ, ಚರ್ಚೆಯೂ ನಡೆಸಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್‌ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…

15 hours ago