ಕ್ರೀಡೆ

ಕ್ರಿಶ್ಚಿಯಾನೊ ರೊನಾಲ್ಡೊಗೆ ಫಿಫಾ ವಿಶೇಷ ಗೌರವ

ದೋಹಾ(ಕತಾರ್​): ಕ್ರಿಶ್ಚಿಯಾನೊ ರೊನಾಲ್ಡೊ ಈ ಪೀಳಿಗೆಯ ವಿಶ್ವಶ್ರೇಷ್ಠ ಫುಟ್ಬಾಲಿಗ. ಚಿರತೆ ವೇಗವೇ ಆತನ ಬಲ. ಮೈದಾನದಲ್ಲಿ ಪಾದರಸದಂತೆ ಓಡಾಡಿ ಅಸಾಧ್ಯವೆಂಬ ಗೋಲುಗಳನ್ನು ಬಾರಿಸಿ ಇತಿಹಾಸ ನಿರ್ಮಿಸಿದ ಆಟಗಾರನಿಗೆ ಫಿಫಾ ವಿಶೇಷ ರೀತಿಯಲ್ಲಿ ಧನ್ಯವಾದ ಹೇಳಿದೆ.

ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ರೊನಾಲ್ಡೊ, ತಾವಾಡಿದ 5 ವಿಶ್ವಕಪ್​ಗಳಲ್ಲಿ ಗಳಿಸಿದ 8 ಗೋಲುಗಳ ವಿಡಿಯೋವನ್ನು ಫಿಫಾ ತನ್ನ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡು ಒಬ್ರಿಗಾಡ್​(ಧನ್ಯವಾದ) ಅರ್ಪಿಸಿತು. ರೊನಾಲ್ಡೊ 2006 ರಲ್ಲಿ ತಾವಾಡಿದ ಮೊದಲ ವಿಶ್ವಕಪ್​ನಲ್ಲಿ ಇರಾನ್​ ವಿರುದ್ಧ ಪ್ರಥಮ ಗೋಲು ಗಳಿಸಿದ್ದರು.

2014 ರಲ್ಲಿ ಘಾನಾ ವಿರುದ್ಧ ಒಂದು ಗೋಲು ಬಾರಿಸಿದ್ದರು. ಇದಾದ ಬಳಿಕ 2018 ರಲ್ಲಿ ನಡೆದ ವಿಶ್ವಕಪ್​ ರೊನಾಲ್ಡೊರ ಅದ್ಭುತ ಪ್ರದರ್ಶನಕ್ಕೆ ಸಾಕ್ಷಿಯಾಯಿತು. ಸ್ಪೇನ್​ ವಿರುದ್ಧ ಹ್ಯಾಟ್ರಿಕ್​​ ಗೋಲು ಮತ್ತು ಮೊರಾಕ್ಕೊ ವಿರುದ್ಧ ಹೆಡ್ಡರ್​ ಮೂಲಕ ದಾಖಲಾದ ವಿಶ್ವದಾಖಲೆಯ ಗೋಲೂ ಒಂದಾಗಿದೆ. 2022 ರ ಈ ಸಲದ ವಿಶ್ವಕಪ್​ನಲ್ಲಿ ರೊನಾಲ್ಡೊ ಘಾನಾ ವಿರುದ್ಧ ಒಂದು ಗೋಲು ಮಾತ್ರ ಗಳಿಸಿದ್ದಾರೆ.

ಬಹುತೇಕ ಕೊನೆಯ ವಿಶ್ವಕಪ್​ ಆಡುತ್ತಿರುವ ರೊನಾಲ್ಡೊ ವೃತ್ತಿಜೀವನದಲ್ಲಿ ಅತಿಹೆಚ್ಚು ಸವಾಲನ್ನು ಎದುರಿಸುತ್ತಿದ್ದಾರೆ. ಮ್ಯಾಂಚೆಸ್ಟರ್​ ಫುಟ್ಬಾಲ್​ ಸಂಸ್ಥೆಯಿಂದ ಹೊರಕ್ಕೆ, ಪೋರ್ಚುಗಲ್​ ತಂಡದ ಕೋಚ್​ ಫೆರ್ನಾಂಡೋ ಸ್ಯಾಂಟೋಸ್​ರ ಅವಕೃಪೆಗೆ ಒಳಗಾಗಿ ವಿಶ್ವಕಪ್​ನ ಪಂದ್ಯಗಳಿಂದ ಹೊರಗುಳಿದಿರುವುದು ರೊನಾಲ್ಡೊರನ್ನು ಕುಗ್ಗಿಸಿದೆ.

ನಿವೃತ್ತಿಯ ಅಂಚಿನಲ್ಲಿರುವ ರೊನಾಲ್ಡೊಗೆ ಗಾಯದ ಮೇಲೆ ಬರೆ ಎಳೆದಂತೆ ಶನಿವಾರ ರಾತ್ರಿ ನಡೆದ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಮೊರಾಕ್ಕೊ ವಿರುದ್ಧ ಪೋರ್ಚುಗಲ್​ 1-0 ಗೋಲಿನಿಂದ ಸೋತು ವಿಶ್ವಕಪ್​ನಿಂದ ಹೊರಬಿತ್ತು. ಹೀಗಾಗಿ ವಿಶ್ವಕಪ್​ ಗೆಲ್ಲದೇ ರೊನಾಲ್ಡೊ ವೃತ್ತಿಜೀವನ ಮುಗಿಸುವ ಸಾಧ್ಯತೆಗಳಿವೆ.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

12 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

12 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

13 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

14 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

19 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

19 hours ago