ಸಿಡ್ನಿ : ಸಿಡ್ನಿಯಲ್ಲಿ ನಡೆದ ಫಿಫಾ ಮಹಿಳಾ ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡಕ್ಕೆ ಸೋಲುಣಿಸಿ ಸ್ಪೇನ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಜಿದ್ದಾಜಿದ್ದಿನ ಹೋರಾಟಕ್ಕೆ ಸಾಕ್ಷಿಯಾಗಿದ್ದ ಈ ಪಂದ್ಯದಲ್ಲಿ ಸ್ಪೇನ್ ತಂಡದ ನಾಯಕಿ ಓಲ್ಗಾ ಕಾರ್ಮೋನಾ ಏಕೈಕ ಗೋಲು ದಾಖಲಿಸಿದ್ದರು. ಈ ಗೋಲಿನೊಂದಿಗೆ ಸ್ಪ್ಯಾನಿಷ್ ಪಡೆ ವಿಶ್ವ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದು ವಿಶೇಷ.
ಉಭಯ ತಂಡಗಳು ಇದೇ ಮೊದಲ ಬಾರಿಗೆ ಮಹಿಳಾ ವಿಶ್ವಕಪ್ ಫುಟ್ಬಾಲ್ನಲ್ಲಿ ಫೈನಲ್ ಆಡಿದ್ದು, ಇದಾಗ್ಯೂ ಹೀಗಾಗಿ ಹೊಸ ಚಾಂಪಿಯನ್ ತಂಡವನ್ನು ನಿರೀಕ್ಷಿಸಲಾಗಿತ್ತು. ಅದರಂತೆ ಪಂದ್ಯದ 29ನೇ ನಿಮಿಷಲ್ಲಿ ಕಾರ್ಮೋನಾ ಬಾರಿಸಿದ ಚೆಂಡು ಇಂಗ್ಲೆಂಡ್ ಗೋಲಿಯನ್ನು ವಂಚಿಸಿ ಬಲೆಯೊಳಗೆ ಸೇರಿತು.
ಇದಾದ ಬಳಿಕ ಇಂಗ್ಲೆಂಡ್ ಆಟಗಾರ್ತಿಯರು ಸಮಬಲ ಸಾಧಿಸಲು ಕೊನೆಯವರೆಗೆ ಹೋರಾಟ ನಡೆಸಿದರು. ಆದರೆ ದ್ವಿತಿಯಾರ್ಧದಲ್ಲೇ ರಕ್ಷಣಾತ್ಮಕ ಆಟಕ್ಕೆ ಹೆಚ್ಚಿನ ಒತ್ತು ನೀಡಿದ ಸ್ಪೇನ್ ಪಡೆಯು ಮೊದಲಾರ್ಧದ ಮುನ್ನಡೆಯನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾದರು.
ಈ ಪಂದ್ಯದಲ್ಲಿ ಇಂಗ್ಲೆಂಡ್ ಆಟಗಾರ್ತಿಯರಿಗಿಂತ ಸ್ಪೇನ್ ತಂಡ ಚೆಂಡಿನ ಮೇಲೆ ಹೆಚ್ಚಿನ ಹಿಡಿತ ಸಾಧಿಸಿದ್ದರು. ಇಂಗ್ಲೆಂಡ್ ಶೇ.70 ರಷ್ಟು ನಿಖರ ಪಾಸ್ಗಳ ಮೂಲಕ ಗಮನ ಸೆಳೆದರೆ, ಸ್ಪೇನ್ ಆಟಗಾರ್ತಿಯರು ಶೇ.81 ರಷ್ಟು ಪಾಸ್ಗಳ ಮೂಲಕ ಪಂದ್ಯವನ್ನು ಹತೋಟಿಗೆ ತೆಗೆದುಕೊಂಡಿದ್ದರು. ಈ ಮೂಲಕ ಪೂರ್ಣ ಸಮಯದವರೆಗೆ ಚೆಂಡಿನ ಮೇಲೆ ಹಿಡಿತ ಸಾಧಿಸಿದ ಸ್ಪೇನ್ ತಂಡವು ಅಂತಿಮವಾಗಿ 1-0 ಅಂತರದ ಮುನ್ನಡೆಯೊಂದಿಗೆ ಶಸ್ತಿಯನ್ನು ಮುಡಿಗೇರಿಸಿಕೊಂಡಿತು.
ಇನ್ನು ಟೂರ್ನಿಯುದ್ದಕ್ಕೂ ಅದ್ಭುತ ಪ್ರದರ್ಶನ ನೀಡಿದ್ದ ಸ್ಪೇನ್ನ ಐತಾನಾ ಬೊನ್ಮಾಟಿಗೆ ಗೋಲ್ಡನ್ ಬಾಲ್ ಪ್ರಶಸ್ತಿ ಲಭಿಸಿದರೆ, ಇಂಗ್ಲೆಂಡ್ ಗೋಲ್ ಕೀಪರ್ ಮೇರಿ ಇಯರ್ಪ್ಸ್ ಗೋಲ್ಡನ್ ಗ್ಲೋವ್ ಅವಾರ್ಡ್ ಪಡೆದರು.
ಹಾಗೆಯೇ ಬೆಸ್ಟ್ ಯಂಗ್ ಪ್ಲೇಯರ್ ಪ್ರಶಸ್ತಿ ಸ್ಪೇನ್ನ ಸಲ್ಮಾ ಪ್ಯಾರಲ್ಯುಲೋಗೆ ನೀಡಲಾಗಿದೆ. ಇನ್ನು ಟೂರ್ನಿಯಲ್ಲಿ ಅತ್ಯಧಿಕ ಗೋಲು ಬಾರಿಸಿದ ಗೋಲ್ಡನ್ ಬೂಟ್ ಪ್ರಶಸ್ತಿಯು ಜಪಾನಿನ ಹಿನಾತಾ ಪಾಲಾಗಿದೆ.
ಮಹಿಳಾ ವಿಶ್ವಕಪ್ ಗೆದ್ದ ರಾಷ್ಟ್ರಗಳು :
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…