ಕ್ರೀಡೆ

ಫಿಫಾ ಮಹಿಳಾ ವಿಶ್ವಕಪ್ ಫೈನಲ್: ಇಂಗ್ಲೆಂಡ್ ವಿರುದ್ಧ ಗೆದ್ದ ಸ್ಪೇನ್ ವಿಶ್ವ ಚಾಂಪಿಯನ್!

ಸಿಡ್ನಿ : ಸಿಡ್ನಿಯಲ್ಲಿ ನಡೆದ ಫಿಫಾ ಮಹಿಳಾ ವಿಶ್ವಕಪ್‌ನ ಫೈನಲ್​ ಪಂದ್ಯದಲ್ಲಿ ಇಂಗ್ಲೆಂಡ್ ತಂಡಕ್ಕೆ ಸೋಲುಣಿಸಿ ಸ್ಪೇನ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಜಿದ್ದಾಜಿದ್ದಿನ ಹೋರಾಟಕ್ಕೆ ಸಾಕ್ಷಿಯಾಗಿದ್ದ ಈ ಪಂದ್ಯದಲ್ಲಿ ಸ್ಪೇನ್ ತಂಡದ ನಾಯಕಿ ಓಲ್ಗಾ ಕಾರ್ಮೋನಾ ಏಕೈಕ ಗೋಲು ದಾಖಲಿಸಿದ್ದರು. ಈ ಗೋಲಿನೊಂದಿಗೆ ಸ್ಪ್ಯಾನಿಷ್ ಪಡೆ ವಿಶ್ವ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದು ವಿಶೇಷ.

ಉಭಯ ತಂಡಗಳು ಇದೇ ಮೊದಲ ಬಾರಿಗೆ ಮಹಿಳಾ ವಿಶ್ವಕಪ್ ಫುಟ್​ಬಾಲ್​ನಲ್ಲಿ ಫೈನಲ್ ಆಡಿದ್ದು, ಇದಾಗ್ಯೂ ಹೀಗಾಗಿ ಹೊಸ ಚಾಂಪಿಯನ್ ತಂಡವನ್ನು ನಿರೀಕ್ಷಿಸಲಾಗಿತ್ತು. ಅದರಂತೆ ಪಂದ್ಯದ 29ನೇ ನಿಮಿಷಲ್ಲಿ ಕಾರ್ಮೋನಾ ಬಾರಿಸಿದ ಚೆಂಡು ಇಂಗ್ಲೆಂಡ್ ಗೋಲಿಯನ್ನು ವಂಚಿಸಿ ಬಲೆಯೊಳಗೆ ಸೇರಿತು.

ಇದಾದ ಬಳಿಕ ಇಂಗ್ಲೆಂಡ್ ಆಟಗಾರ್ತಿಯರು ಸಮಬಲ ಸಾಧಿಸಲು ಕೊನೆಯವರೆಗೆ ಹೋರಾಟ ನಡೆಸಿದರು. ಆದರೆ ದ್ವಿತಿಯಾರ್ಧದಲ್ಲೇ ರಕ್ಷಣಾತ್ಮಕ ಆಟಕ್ಕೆ ಹೆಚ್ಚಿನ ಒತ್ತು ನೀಡಿದ ಸ್ಪೇನ್ ಪಡೆಯು ಮೊದಲಾರ್ಧದ ಮುನ್ನಡೆಯನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾದರು.

ಈ ಪಂದ್ಯದಲ್ಲಿ ಇಂಗ್ಲೆಂಡ್ ಆಟಗಾರ್ತಿಯರಿಗಿಂತ ಸ್ಪೇನ್ ತಂಡ ಚೆಂಡಿನ ಮೇಲೆ ಹೆಚ್ಚಿನ ಹಿಡಿತ ಸಾಧಿಸಿದ್ದರು. ಇಂಗ್ಲೆಂಡ್ ಶೇ.70 ರಷ್ಟು ನಿಖರ ಪಾಸ್​ಗಳ ಮೂಲಕ ಗಮನ ಸೆಳೆದರೆ, ಸ್ಪೇನ್ ಆಟಗಾರ್ತಿಯರು ಶೇ.81 ರಷ್ಟು ಪಾಸ್​ಗಳ ಮೂಲಕ ಪಂದ್ಯವನ್ನು ಹತೋಟಿಗೆ ತೆಗೆದುಕೊಂಡಿದ್ದರು. ಈ ಮೂಲಕ ಪೂರ್ಣ ಸಮಯದವರೆಗೆ ಚೆಂಡಿನ ಮೇಲೆ ಹಿಡಿತ ಸಾಧಿಸಿದ ಸ್ಪೇನ್ ತಂಡವು ಅಂತಿಮವಾಗಿ  1-0 ಅಂತರದ ಮುನ್ನಡೆಯೊಂದಿಗೆ ಶಸ್ತಿಯನ್ನು ಮುಡಿಗೇರಿಸಿಕೊಂಡಿತು.

ಇನ್ನು ಟೂರ್ನಿಯುದ್ದಕ್ಕೂ ಅದ್ಭುತ ಪ್ರದರ್ಶನ ನೀಡಿದ್ದ ಸ್ಪೇನ್​ನ ಐತಾನಾ ಬೊನ್ಮಾಟಿಗೆ ಗೋಲ್ಡನ್ ಬಾಲ್ ಪ್ರಶಸ್ತಿ ಲಭಿಸಿದರೆ, ಇಂಗ್ಲೆಂಡ್ ಗೋಲ್ ಕೀಪರ್ ಮೇರಿ ಇಯರ್ಪ್ಸ್ ಗೋಲ್ಡನ್ ಗ್ಲೋವ್ ಅವಾರ್ಡ್ ಪಡೆದರು.

ಹಾಗೆಯೇ ಬೆಸ್ಟ್ ಯಂಗ್ ಪ್ಲೇಯರ್ ಪ್ರಶಸ್ತಿ ಸ್ಪೇನ್​ನ ಸಲ್ಮಾ ಪ್ಯಾರಲ್ಯುಲೋಗೆ ನೀಡಲಾಗಿದೆ. ಇನ್ನು ಟೂರ್ನಿಯಲ್ಲಿ ಅತ್ಯಧಿಕ ಗೋಲು ಬಾರಿಸಿದ ಗೋಲ್ಡನ್ ಬೂಟ್ ಪ್ರಶಸ್ತಿಯು ಜಪಾನಿನ ಹಿನಾತಾ ಪಾಲಾಗಿದೆ.

ಮಹಿಳಾ ವಿಶ್ವಕಪ್ ಗೆದ್ದ ರಾಷ್ಟ್ರಗಳು :

  1. 1991- ಯುಎಸ್​ಎ
  2. 1995- ನಾರ್ವೆ
  3. 1999- ಯುಎಸ್​ಎ
  4. 2003- ಜರ್ಮನಿ
  5. 2007- ಜರ್ಮನಿ
  6. 2011- ಜಪಾನ್
  7. 2015- ಯುಎಸ್​ಎ
  8. 2019- ಯುಎಸ್​ಎ
  9. 2023- ಸ್ಪೇನ್
andolanait

Recent Posts

ಕರ್ನಾಟಕ ಸೋಲಿಸಿ ಮೊದಲ ಬಾರಿಗೆ ರಣಜಿ ಟ್ರೋಫಿ ಎತ್ತಿ ಹಿಡಿದ ಜಮ್ಮು-ಕಾಶ್ಮೀರ

ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್‌ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್‌ಗೆ ಬಂದು, ಜಮ್ಮು-ಕಾಶ್ಮೀರ…

2 hours ago

ಹನೂರಿನಲ್ಲಿ ವಿಜೃಂಭಣೆಯಿಂದ ನಡೆದ ಸೇವಾಲಾಲ್‌ ಜಯಂತಿ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…

3 hours ago

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ.ಸುರೇಶ್‌

ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆ ನೀಡಿದ್ದಾರೆ. ಈ…

3 hours ago

ಸದ್ದಿಲ್ಲದೆ ಸಮಾಜಸೇವೆಗೆ ನಿಂತ ಎಂಬಿಶ್ರೀ ಪ್ರತಿಷ್ಠಾನ ತಂಡ

ಹೇಮಂತ್‌ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…

3 hours ago

ನಟ ದರ್ಶನ್‌ ವಿರುದ್ಧ ಸುಳ್ಳು ದಾಖಲೆ ಸೃಷ್ಟಿ ಆರೋಪ: ಕನ್ನಡ ಒಕ್ಕೂಟದಿಂದ ಧರಣಿಗೆ ಕರೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ನಟ ದರ್ಶನ್‌ ವಿರುದ್ಧ ಸುಳ್ಳು ದಾಖಲೆ ಸೃಷ್ಟಿಸಿದ್ದಾರೆ ಎಂಬ…

3 hours ago

ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ

ಟೆಹರಾನ್:‌ ಇರಾನ್‌ ಮತ್ತು ಇಸ್ರೇಲ್‌ ನಡುವೆ ಯುದ್ಧದ ಕಾರ್ಮೋದ ಹೆಚ್ಚಿದ್ದು, ಇರಾನ್‌ನ ಸರ್ವೋಚ್ಛ ನಾಯಕ ಅಲಿ ಖಮೇನಿ ಹಾಗೂ ಅಧ್ಯಕ್ಷ…

4 hours ago