ಕ್ರೀಡೆ

FIFA World Cup :ವಿಶ್ವಕಪ್​ಗೆ ಮುತ್ತಿಕ್ಕಿದ ಅರ್ಜೆಂಟೀನಾ

ದೋಹಾ (ಕತಾರ್​): ಭಾನುವಾರ ಕತಾರ್‌ನ ಲುಸೇಲ್ ಸ್ಟೇಡಿಯಂ ರಣರೋಚಕ ಫುಟ್ಬಾಲ್ ಪಂದ್ಯಕ್ಕೆ ಸಾಕ್ಷಿಯಾಯಿತು. ವಿಶ್ವಕಪ್​ ಫೈನಲ್​ ಹಣಾಹಣಿಯಲ್ಲಿ ಪೆನಾಲ್ಟಿ ಶೂಟೌಟ್‌ನಲ್ಲಿ ಫ್ರಾನ್ಸ್ ತಂಡವನ್ನು 4-2 ಗೋಲುಗಳಿಂದ ಸೋಲಿಸಿದ ಅರ್ಜೆಂಟೀನಾ 36 ವರ್ಷಗಳ ಬಳಿಕ ಚಾಂಪಿಯನ್​ ಪಟ್ಟ ಗೆದ್ದುಕೊಂಡಿತು. ವಿಶ್ವದ ಶ್ರೇಷ್ಠ ಫುಟ್ಬಾಲ್ ಆಟಗಾರರಲ್ಲಿ ಒಬ್ಬರಾದ ಲಿಯೋನೆಲ್ ಮೆಸ್ಸಿ ಮತ್ತು ಫ್ರಾನ್ಸ್​ನ ಯುವ ತಾರೆ ಕೈಲಿಯನ್ ಎಂಬಪ್ಪೆ ಅದ್ಭುತ ಆಟ ಪ್ರದರ್ಶಿಸಿದರು. ಮೆಸ್ಸಿ ಎರಡು ಮತ್ತು ಎಂಬಪ್ಪೆ ಮೂರು ಗೋಲು ಗಳಿಸಿ ಅಭಿಮಾನಿಗಳ ಹೃದಯ ಗೆದ್ದರು. 

ಲಿಯೋನೆಲ್ ಮೆಸ್ಸಿ 23ನೇ ನಿಮಿಷದಲ್ಲಿ ದೊರೆತ ಪೆನಾಲ್ಟಿಯಲ್ಲಿ ಮೊದಲ ಗೋಲು ಗಳಿಸಿದರು. ಈ ಮೂಲಕ ವಿಶ್ವಕಪ್‌ನ ಎಲ್ಲಾ ನಾಕೌಟ್ ಪಂದ್ಯಗಳಲ್ಲಿ ಸ್ಕೋರ್ ಮಾಡಿದ ವಿಶ್ವದ ಮೊದಲ ಫುಟ್‌ಬಾಲ್ ಆಟಗಾರರೆನಿಸಿದರು. ಅದರ ನಂತರ, ಏಂಜೆಲ್ ಡಿ ಮಾರಿಯಾ 36ನೇ ನಿಮಿಷದಲ್ಲಿ ಗೋಲು ಗಳಿಸಿ ಅರ್ಜೆಂಟೀನಾವನ್ನು 2-0 ಮುನ್ನಡೆಗೆ ತಂದರು. ವಿರಾಮದ ವೇಳೆಗೆ ಅರ್ಜೆಂಟೀನಾ 2-0 ಮುನ್ನಡೆಯಲ್ಲಿತ್ತು. ವಿರಾಮದ ಬಳಿಕ ಉಭಯ ತಂಡಗಳು ಪೈಪೋಟಿ ಮುಂದುವರೆಸಿದರೂ ಗೋಲು ಗಳಿಸಲು ಸಾಧ್ಯವಾಗಲಿಲ್ಲ. ಪಂದ್ಯದ 80ನೇ ನಿಮಿಷದವರೆಗೂ ಪಂದ್ಯವನ್ನು ಅರ್ಜೆಂಟೀನಾ ಸುಲಭವಾಗಿ ಗೆಲ್ಲುತ್ತದೆ ಎಂದೆನಿಸಿತ್ತು. ಆದರೆ ಕೈಲಿಯನ್ ಎಂಬಪ್ಪೆ 80 ಮತ್ತು 81ನೇ ನಿಮಿಷದಲ್ಲಿ ಎರಡು ಗೋಲು ಬಾರಿ ಪಂದ್ಯಕ್ಕೆ ಪಂದ್ಯಕ್ಕೆ ತಿರುವು ನೀಡಿದರು.
ನಿಗದಿತ 90 ನಿಮಿಷಗಳ ನಂತರ ಸ್ಕೋರ್ 2-2ರಲ್ಲಿ ಸಮನಾದ ನಂತರ ಪಂದ್ಯ ಹೆಚ್ಚುವರಿ ಸಮಯದ ಮೊರೆ ಹೋಗಲಾಯಿತು.

108ನೇ ನಿಮಿಷದಲ್ಲಿ ಲಿಯೋನೆಲ್ ಮೆಸ್ಸಿ ಗೋಲು ಬಾರಿಸಿ ಅರ್ಜೆಂಟೀನಾವನ್ನು 3-2 ಗೋಲುಗಳಿಂದ ಮುನ್ನಡೆಸಿದರು. ಮತ್ತೊಮ್ಮೆ ಅರ್ಜೆಂಟೀನಾ ಗೆಲುವಿನ ಹೊಸ್ತಿಲಿಗೆ ಬಂದು ನಿಂತಿತು. ಆದರೆ, 117ನೇ ನಿಮಿಷದಲ್ಲಿ ಫ್ರಾನ್ಸ್​ ತಂಡ ಗೋಲು ಬಾರಿಸುವ ಮೂಲಕ ಪಂದ್ಯವನ್ನು 3-3ರಲ್ಲಿ ಸಮಬಲಗೊಳಿಸಿದರು. ಇದಾದ ಬಳಿಕ ಪಂದ್ಯ ಪೆನಾಲ್ಟಿ ಶೂಟೌಟ್ ನಡೆಯಿತು.

ಶೂಟೌಟ್​ನಲ್ಲಿ ಗೆದ್ದ ಅರ್ಜೆಂಟೀನಾ: ಅರ್ಜೆಂಟೀನಾದ ಗೋಲ್‌ಕೀಪರ್ ಎಮಿಲಿಯಾನೊ ಮಾರ್ಟಿನೆಜ್ ಶೂಟೌಟ್‌ನ ಹೀರೋ ಆಗಿ ಹೊರಹೊಮ್ಮಿದರು. ಎಂಬಪ್ಪೆ ಫ್ರಾನ್ಸ್‌ಗೆ ಮೊದಲ ಪೆನಾಲ್ಟಿಯ ಲಾಭ ಪಡೆದರು. ನಂತರ ಮೆಸ್ಸಿ ಅರ್ಜೆಂಟೀನಾ ಪರ ಗೋಲು ಗಳಿಸಿದರು. ಆ ಬಳಿಕ ಕೋಮನ್ (ಎರಡನೇ ಪೆನಾಲ್ಟಿ) ಮತ್ತು ಚೌಮಾನಿ (ಮೂರನೇ ಪೆನಾಲ್ಟಿ) ಸತತ ವಿಫಲವಾದಾಗ ಅರ್ಜೆಂಟೀನಾ ಅಭಿಮಾನಿಗಳು ಸಂಭ್ರಮಿಸಿದರು. ಅರ್ಜೆಂಟೀನಾ ಪರ ಎರಡು ಮತ್ತು ಮೂರನೇ ಪ್ರಯತ್ನಗಳಲ್ಲಿ ಡೈಬಾಲಾ ಮತ್ತು ಪರೆಡೆಸ್ ಯಶಸ್ವಿಯಾಗಿದ್ದರಿಂದ ತಂಡವು 3-1ರ ಮುನ್ನಡೆ ಸಾಧಿಸಿತು. ಕೊಲೊ ಮೌನಿ ನಾಲ್ಕನೇ ಪೆನಾಲ್ಟಿಯ ಲಾಭ (2-3) ಪಡೆಯುವ ಮೂಲಕ ಫ್ರಾನ್ಸ್‌ನ ಭರವಸೆಯನ್ನು ಜೀವಂತವಾಗಿಟ್ಟರು. ಆದರೆ ನಂತರ ಮೊಂಟಿಯೆಲ್ ಒದ್ದ ಚೆಂಡನ್ನು ಫ್ರಾನ್ಸ್​ನ ಗೋಲ್ ಕೀಪರ್ ತಡೆಯುವಲ್ಲಿ ವಿಫಲರಾದರು. ಹೀಗಾಗಿ ಫ್ರಾನ್ಸ್ ವಿರುದ್ಧ​ ಅರ್ಜೆಂಟೀನಾ 4-2ರಿಂದ ಪಂದ್ಯ ಗೆದ್ದು ವಿಶ್ವಕಪ್​ಗೆ ಮುತ್ತಿಕ್ಕಿದೆ

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

11 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

11 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

12 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

14 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

17 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

18 hours ago