ಕ್ರೀಡೆ

FIFA World Cup :ವಿಶ್ವಕಪ್​ಗೆ ಮುತ್ತಿಕ್ಕಿದ ಅರ್ಜೆಂಟೀನಾ

ದೋಹಾ (ಕತಾರ್​): ಭಾನುವಾರ ಕತಾರ್‌ನ ಲುಸೇಲ್ ಸ್ಟೇಡಿಯಂ ರಣರೋಚಕ ಫುಟ್ಬಾಲ್ ಪಂದ್ಯಕ್ಕೆ ಸಾಕ್ಷಿಯಾಯಿತು. ವಿಶ್ವಕಪ್​ ಫೈನಲ್​ ಹಣಾಹಣಿಯಲ್ಲಿ ಪೆನಾಲ್ಟಿ ಶೂಟೌಟ್‌ನಲ್ಲಿ ಫ್ರಾನ್ಸ್ ತಂಡವನ್ನು 4-2 ಗೋಲುಗಳಿಂದ ಸೋಲಿಸಿದ ಅರ್ಜೆಂಟೀನಾ 36 ವರ್ಷಗಳ ಬಳಿಕ ಚಾಂಪಿಯನ್​ ಪಟ್ಟ ಗೆದ್ದುಕೊಂಡಿತು. ವಿಶ್ವದ ಶ್ರೇಷ್ಠ ಫುಟ್ಬಾಲ್ ಆಟಗಾರರಲ್ಲಿ ಒಬ್ಬರಾದ ಲಿಯೋನೆಲ್ ಮೆಸ್ಸಿ ಮತ್ತು ಫ್ರಾನ್ಸ್​ನ ಯುವ ತಾರೆ ಕೈಲಿಯನ್ ಎಂಬಪ್ಪೆ ಅದ್ಭುತ ಆಟ ಪ್ರದರ್ಶಿಸಿದರು. ಮೆಸ್ಸಿ ಎರಡು ಮತ್ತು ಎಂಬಪ್ಪೆ ಮೂರು ಗೋಲು ಗಳಿಸಿ ಅಭಿಮಾನಿಗಳ ಹೃದಯ ಗೆದ್ದರು. 

ಲಿಯೋನೆಲ್ ಮೆಸ್ಸಿ 23ನೇ ನಿಮಿಷದಲ್ಲಿ ದೊರೆತ ಪೆನಾಲ್ಟಿಯಲ್ಲಿ ಮೊದಲ ಗೋಲು ಗಳಿಸಿದರು. ಈ ಮೂಲಕ ವಿಶ್ವಕಪ್‌ನ ಎಲ್ಲಾ ನಾಕೌಟ್ ಪಂದ್ಯಗಳಲ್ಲಿ ಸ್ಕೋರ್ ಮಾಡಿದ ವಿಶ್ವದ ಮೊದಲ ಫುಟ್‌ಬಾಲ್ ಆಟಗಾರರೆನಿಸಿದರು. ಅದರ ನಂತರ, ಏಂಜೆಲ್ ಡಿ ಮಾರಿಯಾ 36ನೇ ನಿಮಿಷದಲ್ಲಿ ಗೋಲು ಗಳಿಸಿ ಅರ್ಜೆಂಟೀನಾವನ್ನು 2-0 ಮುನ್ನಡೆಗೆ ತಂದರು. ವಿರಾಮದ ವೇಳೆಗೆ ಅರ್ಜೆಂಟೀನಾ 2-0 ಮುನ್ನಡೆಯಲ್ಲಿತ್ತು. ವಿರಾಮದ ಬಳಿಕ ಉಭಯ ತಂಡಗಳು ಪೈಪೋಟಿ ಮುಂದುವರೆಸಿದರೂ ಗೋಲು ಗಳಿಸಲು ಸಾಧ್ಯವಾಗಲಿಲ್ಲ. ಪಂದ್ಯದ 80ನೇ ನಿಮಿಷದವರೆಗೂ ಪಂದ್ಯವನ್ನು ಅರ್ಜೆಂಟೀನಾ ಸುಲಭವಾಗಿ ಗೆಲ್ಲುತ್ತದೆ ಎಂದೆನಿಸಿತ್ತು. ಆದರೆ ಕೈಲಿಯನ್ ಎಂಬಪ್ಪೆ 80 ಮತ್ತು 81ನೇ ನಿಮಿಷದಲ್ಲಿ ಎರಡು ಗೋಲು ಬಾರಿ ಪಂದ್ಯಕ್ಕೆ ಪಂದ್ಯಕ್ಕೆ ತಿರುವು ನೀಡಿದರು.
ನಿಗದಿತ 90 ನಿಮಿಷಗಳ ನಂತರ ಸ್ಕೋರ್ 2-2ರಲ್ಲಿ ಸಮನಾದ ನಂತರ ಪಂದ್ಯ ಹೆಚ್ಚುವರಿ ಸಮಯದ ಮೊರೆ ಹೋಗಲಾಯಿತು.

108ನೇ ನಿಮಿಷದಲ್ಲಿ ಲಿಯೋನೆಲ್ ಮೆಸ್ಸಿ ಗೋಲು ಬಾರಿಸಿ ಅರ್ಜೆಂಟೀನಾವನ್ನು 3-2 ಗೋಲುಗಳಿಂದ ಮುನ್ನಡೆಸಿದರು. ಮತ್ತೊಮ್ಮೆ ಅರ್ಜೆಂಟೀನಾ ಗೆಲುವಿನ ಹೊಸ್ತಿಲಿಗೆ ಬಂದು ನಿಂತಿತು. ಆದರೆ, 117ನೇ ನಿಮಿಷದಲ್ಲಿ ಫ್ರಾನ್ಸ್​ ತಂಡ ಗೋಲು ಬಾರಿಸುವ ಮೂಲಕ ಪಂದ್ಯವನ್ನು 3-3ರಲ್ಲಿ ಸಮಬಲಗೊಳಿಸಿದರು. ಇದಾದ ಬಳಿಕ ಪಂದ್ಯ ಪೆನಾಲ್ಟಿ ಶೂಟೌಟ್ ನಡೆಯಿತು.

ಶೂಟೌಟ್​ನಲ್ಲಿ ಗೆದ್ದ ಅರ್ಜೆಂಟೀನಾ: ಅರ್ಜೆಂಟೀನಾದ ಗೋಲ್‌ಕೀಪರ್ ಎಮಿಲಿಯಾನೊ ಮಾರ್ಟಿನೆಜ್ ಶೂಟೌಟ್‌ನ ಹೀರೋ ಆಗಿ ಹೊರಹೊಮ್ಮಿದರು. ಎಂಬಪ್ಪೆ ಫ್ರಾನ್ಸ್‌ಗೆ ಮೊದಲ ಪೆನಾಲ್ಟಿಯ ಲಾಭ ಪಡೆದರು. ನಂತರ ಮೆಸ್ಸಿ ಅರ್ಜೆಂಟೀನಾ ಪರ ಗೋಲು ಗಳಿಸಿದರು. ಆ ಬಳಿಕ ಕೋಮನ್ (ಎರಡನೇ ಪೆನಾಲ್ಟಿ) ಮತ್ತು ಚೌಮಾನಿ (ಮೂರನೇ ಪೆನಾಲ್ಟಿ) ಸತತ ವಿಫಲವಾದಾಗ ಅರ್ಜೆಂಟೀನಾ ಅಭಿಮಾನಿಗಳು ಸಂಭ್ರಮಿಸಿದರು. ಅರ್ಜೆಂಟೀನಾ ಪರ ಎರಡು ಮತ್ತು ಮೂರನೇ ಪ್ರಯತ್ನಗಳಲ್ಲಿ ಡೈಬಾಲಾ ಮತ್ತು ಪರೆಡೆಸ್ ಯಶಸ್ವಿಯಾಗಿದ್ದರಿಂದ ತಂಡವು 3-1ರ ಮುನ್ನಡೆ ಸಾಧಿಸಿತು. ಕೊಲೊ ಮೌನಿ ನಾಲ್ಕನೇ ಪೆನಾಲ್ಟಿಯ ಲಾಭ (2-3) ಪಡೆಯುವ ಮೂಲಕ ಫ್ರಾನ್ಸ್‌ನ ಭರವಸೆಯನ್ನು ಜೀವಂತವಾಗಿಟ್ಟರು. ಆದರೆ ನಂತರ ಮೊಂಟಿಯೆಲ್ ಒದ್ದ ಚೆಂಡನ್ನು ಫ್ರಾನ್ಸ್​ನ ಗೋಲ್ ಕೀಪರ್ ತಡೆಯುವಲ್ಲಿ ವಿಫಲರಾದರು. ಹೀಗಾಗಿ ಫ್ರಾನ್ಸ್ ವಿರುದ್ಧ​ ಅರ್ಜೆಂಟೀನಾ 4-2ರಿಂದ ಪಂದ್ಯ ಗೆದ್ದು ವಿಶ್ವಕಪ್​ಗೆ ಮುತ್ತಿಕ್ಕಿದೆ

andolanait

Recent Posts

ಧಾರವಾಡ ಆಕಾಶವಾಣಿ ಕೇಂದ್ರ ಸ್ಥಳಾಂತರಿಸದಂತೆ ಅಶ್ವಿನಿ ವೈಷ್ಣವ್‌ ಆದೇಶ

ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…

58 mins ago

ಮುರುಘಾ ಮಠದ ಆಸ್ತಿ ಕೇಸ್:‌ ಸುಪ್ರೀಂಕೋರ್ಟ್‌ನಿಂದ ರಾಜ್ಯ ಸರ್ಕಾರಕ್ಕೆ ನೋಟಿಸ್‌

ನವದೆಹಲಿ: ಮುರುಘಾ ಮಠದ ಆಸ್ತಿಯನ್ನು ಸರ್ಕಾರದ ವಶಕ್ಕೆ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ರಾಜ್ಯ ಸರ್ಕಾರಕ್ಕೆ…

1 hour ago

ತಮಿಳುನಾಡು ವಿಧಾನಸಭೆ ಚುನಾವಣೆ: ನಾಳೆ ಮತದಾನಕ್ಕೆ ಸಕಲ ಸಿದ್ಧತೆ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಗೆ ನಾಳೆ ಮತದಾನ ನಡೆಯಲಿದ್ದು, ರಾಜ್ಯದ ಒಟ್ಟು 234 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.…

1 hour ago

ಕೊಡಗಿನ ಹೋಂಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಇಬ್ಬರನ್ನು ಬಂಧಿಸಲಾಗಿದೆ: ಶಾಸಕ ಪೊನ್ನಣ್ಣ ಮಾಹಿತಿ

ಬೆಂಗಳೂರು: ಕೊಡಗಿನ ಹೋಂ ಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಇಬ್ಬರ ಬಂಧನ ಆಗಿದೆ ಎಂದು…

3 hours ago

ಹರ ಹರ ಮಹಾದೇವ ಘೋಷಣೆಯೊಂದಿಗೆ ಚಾರ್‌ ಧಾಮ್‌ ಯಾತ್ರೆ ಆರಂಭ

ಉತ್ತರಾಖಂಡ್:‌ ಇಲ್ಲಿನ ಪವಿತ್ರ ಚಾರ್‌ ಧಾಮ್‌ ಯಾತ್ರೆ ಇಂದಿನಿಂದ ಅಧಿಕೃತವಾಗಿ ಪ್ರಾರಂಭವಾಗಿದೆ. ಭಕ್ತರ ದರ್ಶನಕ್ಕಾಗಿ ಕೇದಾರನಾಥ ದೇವಾಲಯದ ದ್ವಾರಗಳನ್ನು ಇಂದು…

3 hours ago

ಗುಡುಮಾದನಹಳ್ಳಿ ರೈತರ ಪರ ನಿಂತ ಶಾಸಕ ದರ್ಶನ್ ಪುಟ್ಟಣ್ಣಯ್ಯ

ಮೈಸೂರು: ಕೃಷಿ ಭೂಮಿಯಲ್ಲಿ ನಿಮ್ಹಾನ್ಸ್‌ ಆಸ್ಪತ್ರೆ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರು ರೈತರ ಪರ ನಿಂತಿದ್ದು,…

3 hours ago