ಕ್ರೀಡೆ

FIFA World Cup :ವಿಶ್ವಕಪ್​ಗೆ ಮುತ್ತಿಕ್ಕಿದ ಅರ್ಜೆಂಟೀನಾ

ದೋಹಾ (ಕತಾರ್​): ಭಾನುವಾರ ಕತಾರ್‌ನ ಲುಸೇಲ್ ಸ್ಟೇಡಿಯಂ ರಣರೋಚಕ ಫುಟ್ಬಾಲ್ ಪಂದ್ಯಕ್ಕೆ ಸಾಕ್ಷಿಯಾಯಿತು. ವಿಶ್ವಕಪ್​ ಫೈನಲ್​ ಹಣಾಹಣಿಯಲ್ಲಿ ಪೆನಾಲ್ಟಿ ಶೂಟೌಟ್‌ನಲ್ಲಿ ಫ್ರಾನ್ಸ್ ತಂಡವನ್ನು 4-2 ಗೋಲುಗಳಿಂದ ಸೋಲಿಸಿದ ಅರ್ಜೆಂಟೀನಾ 36 ವರ್ಷಗಳ ಬಳಿಕ ಚಾಂಪಿಯನ್​ ಪಟ್ಟ ಗೆದ್ದುಕೊಂಡಿತು. ವಿಶ್ವದ ಶ್ರೇಷ್ಠ ಫುಟ್ಬಾಲ್ ಆಟಗಾರರಲ್ಲಿ ಒಬ್ಬರಾದ ಲಿಯೋನೆಲ್ ಮೆಸ್ಸಿ ಮತ್ತು ಫ್ರಾನ್ಸ್​ನ ಯುವ ತಾರೆ ಕೈಲಿಯನ್ ಎಂಬಪ್ಪೆ ಅದ್ಭುತ ಆಟ ಪ್ರದರ್ಶಿಸಿದರು. ಮೆಸ್ಸಿ ಎರಡು ಮತ್ತು ಎಂಬಪ್ಪೆ ಮೂರು ಗೋಲು ಗಳಿಸಿ ಅಭಿಮಾನಿಗಳ ಹೃದಯ ಗೆದ್ದರು. 

ಲಿಯೋನೆಲ್ ಮೆಸ್ಸಿ 23ನೇ ನಿಮಿಷದಲ್ಲಿ ದೊರೆತ ಪೆನಾಲ್ಟಿಯಲ್ಲಿ ಮೊದಲ ಗೋಲು ಗಳಿಸಿದರು. ಈ ಮೂಲಕ ವಿಶ್ವಕಪ್‌ನ ಎಲ್ಲಾ ನಾಕೌಟ್ ಪಂದ್ಯಗಳಲ್ಲಿ ಸ್ಕೋರ್ ಮಾಡಿದ ವಿಶ್ವದ ಮೊದಲ ಫುಟ್‌ಬಾಲ್ ಆಟಗಾರರೆನಿಸಿದರು. ಅದರ ನಂತರ, ಏಂಜೆಲ್ ಡಿ ಮಾರಿಯಾ 36ನೇ ನಿಮಿಷದಲ್ಲಿ ಗೋಲು ಗಳಿಸಿ ಅರ್ಜೆಂಟೀನಾವನ್ನು 2-0 ಮುನ್ನಡೆಗೆ ತಂದರು. ವಿರಾಮದ ವೇಳೆಗೆ ಅರ್ಜೆಂಟೀನಾ 2-0 ಮುನ್ನಡೆಯಲ್ಲಿತ್ತು. ವಿರಾಮದ ಬಳಿಕ ಉಭಯ ತಂಡಗಳು ಪೈಪೋಟಿ ಮುಂದುವರೆಸಿದರೂ ಗೋಲು ಗಳಿಸಲು ಸಾಧ್ಯವಾಗಲಿಲ್ಲ. ಪಂದ್ಯದ 80ನೇ ನಿಮಿಷದವರೆಗೂ ಪಂದ್ಯವನ್ನು ಅರ್ಜೆಂಟೀನಾ ಸುಲಭವಾಗಿ ಗೆಲ್ಲುತ್ತದೆ ಎಂದೆನಿಸಿತ್ತು. ಆದರೆ ಕೈಲಿಯನ್ ಎಂಬಪ್ಪೆ 80 ಮತ್ತು 81ನೇ ನಿಮಿಷದಲ್ಲಿ ಎರಡು ಗೋಲು ಬಾರಿ ಪಂದ್ಯಕ್ಕೆ ಪಂದ್ಯಕ್ಕೆ ತಿರುವು ನೀಡಿದರು.
ನಿಗದಿತ 90 ನಿಮಿಷಗಳ ನಂತರ ಸ್ಕೋರ್ 2-2ರಲ್ಲಿ ಸಮನಾದ ನಂತರ ಪಂದ್ಯ ಹೆಚ್ಚುವರಿ ಸಮಯದ ಮೊರೆ ಹೋಗಲಾಯಿತು.

108ನೇ ನಿಮಿಷದಲ್ಲಿ ಲಿಯೋನೆಲ್ ಮೆಸ್ಸಿ ಗೋಲು ಬಾರಿಸಿ ಅರ್ಜೆಂಟೀನಾವನ್ನು 3-2 ಗೋಲುಗಳಿಂದ ಮುನ್ನಡೆಸಿದರು. ಮತ್ತೊಮ್ಮೆ ಅರ್ಜೆಂಟೀನಾ ಗೆಲುವಿನ ಹೊಸ್ತಿಲಿಗೆ ಬಂದು ನಿಂತಿತು. ಆದರೆ, 117ನೇ ನಿಮಿಷದಲ್ಲಿ ಫ್ರಾನ್ಸ್​ ತಂಡ ಗೋಲು ಬಾರಿಸುವ ಮೂಲಕ ಪಂದ್ಯವನ್ನು 3-3ರಲ್ಲಿ ಸಮಬಲಗೊಳಿಸಿದರು. ಇದಾದ ಬಳಿಕ ಪಂದ್ಯ ಪೆನಾಲ್ಟಿ ಶೂಟೌಟ್ ನಡೆಯಿತು.

ಶೂಟೌಟ್​ನಲ್ಲಿ ಗೆದ್ದ ಅರ್ಜೆಂಟೀನಾ: ಅರ್ಜೆಂಟೀನಾದ ಗೋಲ್‌ಕೀಪರ್ ಎಮಿಲಿಯಾನೊ ಮಾರ್ಟಿನೆಜ್ ಶೂಟೌಟ್‌ನ ಹೀರೋ ಆಗಿ ಹೊರಹೊಮ್ಮಿದರು. ಎಂಬಪ್ಪೆ ಫ್ರಾನ್ಸ್‌ಗೆ ಮೊದಲ ಪೆನಾಲ್ಟಿಯ ಲಾಭ ಪಡೆದರು. ನಂತರ ಮೆಸ್ಸಿ ಅರ್ಜೆಂಟೀನಾ ಪರ ಗೋಲು ಗಳಿಸಿದರು. ಆ ಬಳಿಕ ಕೋಮನ್ (ಎರಡನೇ ಪೆನಾಲ್ಟಿ) ಮತ್ತು ಚೌಮಾನಿ (ಮೂರನೇ ಪೆನಾಲ್ಟಿ) ಸತತ ವಿಫಲವಾದಾಗ ಅರ್ಜೆಂಟೀನಾ ಅಭಿಮಾನಿಗಳು ಸಂಭ್ರಮಿಸಿದರು. ಅರ್ಜೆಂಟೀನಾ ಪರ ಎರಡು ಮತ್ತು ಮೂರನೇ ಪ್ರಯತ್ನಗಳಲ್ಲಿ ಡೈಬಾಲಾ ಮತ್ತು ಪರೆಡೆಸ್ ಯಶಸ್ವಿಯಾಗಿದ್ದರಿಂದ ತಂಡವು 3-1ರ ಮುನ್ನಡೆ ಸಾಧಿಸಿತು. ಕೊಲೊ ಮೌನಿ ನಾಲ್ಕನೇ ಪೆನಾಲ್ಟಿಯ ಲಾಭ (2-3) ಪಡೆಯುವ ಮೂಲಕ ಫ್ರಾನ್ಸ್‌ನ ಭರವಸೆಯನ್ನು ಜೀವಂತವಾಗಿಟ್ಟರು. ಆದರೆ ನಂತರ ಮೊಂಟಿಯೆಲ್ ಒದ್ದ ಚೆಂಡನ್ನು ಫ್ರಾನ್ಸ್​ನ ಗೋಲ್ ಕೀಪರ್ ತಡೆಯುವಲ್ಲಿ ವಿಫಲರಾದರು. ಹೀಗಾಗಿ ಫ್ರಾನ್ಸ್ ವಿರುದ್ಧ​ ಅರ್ಜೆಂಟೀನಾ 4-2ರಿಂದ ಪಂದ್ಯ ಗೆದ್ದು ವಿಶ್ವಕಪ್​ಗೆ ಮುತ್ತಿಕ್ಕಿದೆ

andolanait

Recent Posts

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

4 mins ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

9 mins ago

ಅಕ್ಕಿ ಬೆಲೆ ಹೆಚ್ಚಳ: ಗ್ರಾಹಕರ ಜೇಬಿಗೆ ಹೊರೆ

ಚನ್ನೇಶ ಬಿ.ಇದರಮನಿ ಬರ ಪರಿಸ್ಥಿತಿಯಿಂದ ಅಕ್ಕಿ ಬೆಲೆ ಇನ್ನಷ್ಟು ಏರಿಕೆ ಸಾಧ್ಯತೆ ಪ್ರತಿ ಕೆಜಿಗೆ ೬ ರಿಂದ ೧೦ ರೂ.ಗಳಷ್ಟು…

14 mins ago

ಧ್ರುವರ ಹೆಸರಿಗೆ ಹೊಳಪು ನೀಡುವ ಅಭಿಮಾನಿ ಬಳಗ

ಎಸ್.ಎಸ್.ಭಟ್ಟ ನಾಳೆ ಉದ್ಯೋಗ ಮೇಳ, ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ ಶಿಬಿರ ಆಯೋಜನೆ  ನಂಜನಗೂಡು: ಮಾಜಿ ಸಂಸದರಾಗಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ…

19 mins ago

ಓದುಗರ ಪತ್ರ: ಚುಟುಕು ಸಾಹಿತ್ಯ ಪ್ರಶಸ್ತಿ ಸೇರ್ಪಡೆ ಸ್ವಾಗತಾರ್ಹ

೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…

24 hours ago