ಕ್ರೀಡೆ

ಫಿಫಾ ವಿಶ್ವಕಪ್‌ : ಇಂಗ್ಲೆಂಡ್‌ ಸೋಲಿಸಿ ಸೆಮಿಫೈನಲ್ ಗೆ ಫ್ರಾನ್ಸ್

ದೋಹಾ: ಫಿಫಾ ವಿಶ್ವಕಪ್‌ ಫುಟ್‌ಬಾಲ್‌ ಪಂದ್ಯಾವಳಿಯ ಕೊನೆಯ ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ
ಹಾಲಿ ಚಾಂಪಿಯನ್‌ ಫ್ರಾನ್ಸ್‌ ತಂಡ ಪ್ರಬಲ ಇಂಗ್ಲೆಂಡ್‌ ತಂಡವನ್ನು ಸೋಲಿಸುವ ಮೂಲಕ ಸೆಮಿಪೈನಲ್‌ ಪ್ರವೇಶವನ್ನು ಪಡೆದುಕೊಂಡಿದೆ.

ಅಲ್‌ ಖೊರ್‌ನ ಅಲ್‌ ಬೈತ್‌ ಕ್ರೀಡಾಂಗಣದಲ್ಲಿ ಶನಿವಾರ ತಡರಾತ್ರಿ ನಡೆದ ಪಂದ್ಯದಲ್ಲಿ  ಫ್ರಾನ್ಸ್ 2–1 ಗೋಲುಗಳ ಅಂತರದಲ್ಲಿ ಪ್ರಬಲ ಇಂಗ್ಲೆಂಡ್‌ ತಂಡವನ್ನು ಮಣಿಸಿತು. ಪಂದ್ಯ ಆರಂಭದಿಂದಲೂ ಸಮಬಲದ ಪೈಪೋಟಿಯನ್ನು ಎರಡು ತಂಡಗಳು ನೀಡಿದವು.  ಆದರೆ ಫ್ರಾನ್ಸ್‌ ತಂಡದ ಸ್ಟ್ರೈಕರ್‌ಗಳು ಇಂಗ್ಲೆಂಡ್‌ನ ಡಿಫೆಂಡರ್‌ಗಳ ರಕ್ಷಣಾ ಕೋಟೆ  ಭೇದಿಸಿ ಎರಡು ಗೋಲು ಹೊಡೆದರು. ಆದರೆ ಇಂಗ್ಲೆಂಡ್‌ ತಂಡ ಒಂದು ಗೋಲು ಗಳಿಸುವಲ್ಲಿ ಮಾತ್ರ ಯಶಸ್ವಿಯಾಯಿತು. ಆಟ ಮುಗಿಯಲು ಕೇವಲ 12 ನಿಮಿಷಗಳಿದ್ದಾಗ ಫ್ರಾನ್ಸ್‌ನ ಅತ್ಯಧಿಕ ಗೋಲುಗಳ ಸರದಾರ ಗಿರಾಡ್ ಗೋಲು ಗಳಿಸಿ ತಂಡವನ್ನು 2-1 ಅಂತರಕ್ಕೇರಿಸಿ ವಿಜಯ ಸಾರಿದರು.

ಇದಕ್ಕೂ ಮುನ್ನ ಇಂಗ್ಲೆಂಡಿನ ಹ್ಯಾರಿ ಕೇನ್ 54ನೇ ನಿಮಿಷದಲ್ಲಿ ಪೆನಾಲ್ಟಿ ಕಿಕ್ ಮೂಲಕ ಗೋಲು ಗಳಿಸಿದ್ದರು.
ಈ ಮೂಲಕ 1- 1 ಸಮಬಲ ಸಾಧಿಸಿದರು. 17ನೇ ನಿಮಿಷದಲ್ಲೇ ಅರುಲಿನ್ ಚೊಮೇನಿಯ ಬಾರಿಸಿದ ಗೋಲಿನ ಮೂಲಕ ಫ್ರಾನ್ಸ್ 1-0 ಗೋಲಿನ ಖಾತೆ ತೆರೆಯಿತು. ಕೇನ್ ಅವರು ಈ ಪಂದ್ಯದಲ್ಲಿ ಗೋಲು ಬಾರಿಸಿಸುವ ಮೂಲಕ ತಮ್ಮ 53ನೇ ಅಂತಾರಾಷ್ಟ್ರೀಯ ಗೋಲು ದಾಖಲಿಸಿದ ಸಾಧನೆ ಮಾಡಿದರು. ಈ ಮೂಲಕ ಇಂಗ್ಲೆಂಡ್ ಪರ ಅತ್ಯಧಿಕ ಗೋಲು ಗಳಿಸಿದ ವೇನ್ ರೂನಿ ಅವರ ದಾಖಲೆಯನ್ನು ಸರಿಗಟ್ಟಿದರು. ದ್ವಿತೀಯಾರ್ಧದಲ್ಲಿ ಇಂಗ್ಲೆಂಡ್ ಅದ್ಭುತ ಪ್ರದರ್ಶನ ತೋರಿದರೂ ಪಂದ್ಯದಲ್ಲಿ ಮೇಲುಗೈ ಸಾಧಿಸುವಲ್ಲಿ ವಿಫಲವಾಯಿತು. ಅನುಭವಿ ಮತ್ತು ಯುವ ಆಟಗಾರರನ್ನು ಒಳಗೊಂಡಿದ್ದರೂ ಇಂಗ್ಲೆಂಡ್‌ ತಂಡದ ಆಟ ಫ್ರಾನ್ಸ್‌ ಎದುರು ನಡೆಯಲಿಲ್ಲ. ಅಂತಿಮವಾಗಿ ಹಾಲಿ ಚಾಂಪಿಯನ್‌ ಎದುರು ಇಂಗ್ಲೆಂಡ್‌ ಕನಸು ಭಗ್ನಗೊಂಡಿತು.

ಫ್ರಾನ್ಸ್‌ ತಂಡ ಸೆಮಿಫೈನಲ್‌ನಲ್ಲಿ ಮೊರಕ್ಕೊ ತಂಡವನ್ನು ಎದುರಿಸಲಿದೆ.

ಇಂಗ್ಲೆಂಡ್‌ ಮತ್ತು ಫ್ರಾನ್ಸ್‌ ತಂಡಗಳು ವಿಶ್ವಕಪ್‌ ಟೂರ್ನಿಯಲ್ಲಿ ಈ ಹಿಂದೆ ಎರಡು ಸಲ ಎದುರಾಗಿದ್ದು, ಎರಡೂ ಪಂದ್ಯಗಳಲ್ಲಿ ಇಂಗ್ಲೆಂಡ್‌ ತಂಡ ಜಯಿಸಿತ್ತು. 1966ರ ಟೂರ್ನಿಯ ಗುಂಪು ಹಂತದ ಪಂದ್ಯವನ್ನು 2–0 ಗೋಲುಗಳಿಂದ ಹಾಗೂ 1982ರ ಟೂರ್ನಿಯ ಪಂದ್ಯವನ್ನು 3–1 ಗೋಲುಗಳಿಂದ ಜಯಿಸಿತ್ತು.

andolanait

Recent Posts

ಉಡುತೊರೆ ಹಳ್ಳ ಜಲಾಶಯದ 490 ಕೋಟಿ ವೆಚ್ಚದ ಕಾಮಗಾರಿಗೆ ಅನುಮೋದನೆ: ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಿದ ಪುಟಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ…

5 hours ago

ಹನೂರು| ಕುಡಿಯುವ ನೀರಿನ ಸಮಸ್ಯೆ ಉದ್ಭವ: ಅಧಿಕಾರಿಗಳ ವಿರುದ್ಧವೇ ದೂರು ನೀಡಿದ ಗ್ರಾಮಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…

6 hours ago

ಯಾವುದೇ ಕಾರಣಕ್ಕೂ ಟಿ.ನರಸೀಪುರ ರೇಷ್ಮೆ ಕಾರ್ಖಾನೆ ಮುಚ್ಚಲ್ಲ: ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…

7 hours ago

ಹಾಸನ: ಕೆರೆಗೆ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…

7 hours ago

ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿದ ಸಾರಂಗ: ಅರಣ್ಯ ಇಲಾಖೆಯಿಂದ ರಕ್ಷಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…

7 hours ago

ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಯ ಮುಂಚೂಣಿಯಲ್ಲಿದೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…

7 hours ago