ಕ್ರೀಡೆ

ಫಿಫಾ ವಿಶ್ವಕಪ್‌ : ಇಂಗ್ಲೆಂಡ್‌ ಸೋಲಿಸಿ ಸೆಮಿಫೈನಲ್ ಗೆ ಫ್ರಾನ್ಸ್

ದೋಹಾ: ಫಿಫಾ ವಿಶ್ವಕಪ್‌ ಫುಟ್‌ಬಾಲ್‌ ಪಂದ್ಯಾವಳಿಯ ಕೊನೆಯ ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ
ಹಾಲಿ ಚಾಂಪಿಯನ್‌ ಫ್ರಾನ್ಸ್‌ ತಂಡ ಪ್ರಬಲ ಇಂಗ್ಲೆಂಡ್‌ ತಂಡವನ್ನು ಸೋಲಿಸುವ ಮೂಲಕ ಸೆಮಿಪೈನಲ್‌ ಪ್ರವೇಶವನ್ನು ಪಡೆದುಕೊಂಡಿದೆ.

ಅಲ್‌ ಖೊರ್‌ನ ಅಲ್‌ ಬೈತ್‌ ಕ್ರೀಡಾಂಗಣದಲ್ಲಿ ಶನಿವಾರ ತಡರಾತ್ರಿ ನಡೆದ ಪಂದ್ಯದಲ್ಲಿ  ಫ್ರಾನ್ಸ್ 2–1 ಗೋಲುಗಳ ಅಂತರದಲ್ಲಿ ಪ್ರಬಲ ಇಂಗ್ಲೆಂಡ್‌ ತಂಡವನ್ನು ಮಣಿಸಿತು. ಪಂದ್ಯ ಆರಂಭದಿಂದಲೂ ಸಮಬಲದ ಪೈಪೋಟಿಯನ್ನು ಎರಡು ತಂಡಗಳು ನೀಡಿದವು.  ಆದರೆ ಫ್ರಾನ್ಸ್‌ ತಂಡದ ಸ್ಟ್ರೈಕರ್‌ಗಳು ಇಂಗ್ಲೆಂಡ್‌ನ ಡಿಫೆಂಡರ್‌ಗಳ ರಕ್ಷಣಾ ಕೋಟೆ  ಭೇದಿಸಿ ಎರಡು ಗೋಲು ಹೊಡೆದರು. ಆದರೆ ಇಂಗ್ಲೆಂಡ್‌ ತಂಡ ಒಂದು ಗೋಲು ಗಳಿಸುವಲ್ಲಿ ಮಾತ್ರ ಯಶಸ್ವಿಯಾಯಿತು. ಆಟ ಮುಗಿಯಲು ಕೇವಲ 12 ನಿಮಿಷಗಳಿದ್ದಾಗ ಫ್ರಾನ್ಸ್‌ನ ಅತ್ಯಧಿಕ ಗೋಲುಗಳ ಸರದಾರ ಗಿರಾಡ್ ಗೋಲು ಗಳಿಸಿ ತಂಡವನ್ನು 2-1 ಅಂತರಕ್ಕೇರಿಸಿ ವಿಜಯ ಸಾರಿದರು.

ಇದಕ್ಕೂ ಮುನ್ನ ಇಂಗ್ಲೆಂಡಿನ ಹ್ಯಾರಿ ಕೇನ್ 54ನೇ ನಿಮಿಷದಲ್ಲಿ ಪೆನಾಲ್ಟಿ ಕಿಕ್ ಮೂಲಕ ಗೋಲು ಗಳಿಸಿದ್ದರು.
ಈ ಮೂಲಕ 1- 1 ಸಮಬಲ ಸಾಧಿಸಿದರು. 17ನೇ ನಿಮಿಷದಲ್ಲೇ ಅರುಲಿನ್ ಚೊಮೇನಿಯ ಬಾರಿಸಿದ ಗೋಲಿನ ಮೂಲಕ ಫ್ರಾನ್ಸ್ 1-0 ಗೋಲಿನ ಖಾತೆ ತೆರೆಯಿತು. ಕೇನ್ ಅವರು ಈ ಪಂದ್ಯದಲ್ಲಿ ಗೋಲು ಬಾರಿಸಿಸುವ ಮೂಲಕ ತಮ್ಮ 53ನೇ ಅಂತಾರಾಷ್ಟ್ರೀಯ ಗೋಲು ದಾಖಲಿಸಿದ ಸಾಧನೆ ಮಾಡಿದರು. ಈ ಮೂಲಕ ಇಂಗ್ಲೆಂಡ್ ಪರ ಅತ್ಯಧಿಕ ಗೋಲು ಗಳಿಸಿದ ವೇನ್ ರೂನಿ ಅವರ ದಾಖಲೆಯನ್ನು ಸರಿಗಟ್ಟಿದರು. ದ್ವಿತೀಯಾರ್ಧದಲ್ಲಿ ಇಂಗ್ಲೆಂಡ್ ಅದ್ಭುತ ಪ್ರದರ್ಶನ ತೋರಿದರೂ ಪಂದ್ಯದಲ್ಲಿ ಮೇಲುಗೈ ಸಾಧಿಸುವಲ್ಲಿ ವಿಫಲವಾಯಿತು. ಅನುಭವಿ ಮತ್ತು ಯುವ ಆಟಗಾರರನ್ನು ಒಳಗೊಂಡಿದ್ದರೂ ಇಂಗ್ಲೆಂಡ್‌ ತಂಡದ ಆಟ ಫ್ರಾನ್ಸ್‌ ಎದುರು ನಡೆಯಲಿಲ್ಲ. ಅಂತಿಮವಾಗಿ ಹಾಲಿ ಚಾಂಪಿಯನ್‌ ಎದುರು ಇಂಗ್ಲೆಂಡ್‌ ಕನಸು ಭಗ್ನಗೊಂಡಿತು.

ಫ್ರಾನ್ಸ್‌ ತಂಡ ಸೆಮಿಫೈನಲ್‌ನಲ್ಲಿ ಮೊರಕ್ಕೊ ತಂಡವನ್ನು ಎದುರಿಸಲಿದೆ.

ಇಂಗ್ಲೆಂಡ್‌ ಮತ್ತು ಫ್ರಾನ್ಸ್‌ ತಂಡಗಳು ವಿಶ್ವಕಪ್‌ ಟೂರ್ನಿಯಲ್ಲಿ ಈ ಹಿಂದೆ ಎರಡು ಸಲ ಎದುರಾಗಿದ್ದು, ಎರಡೂ ಪಂದ್ಯಗಳಲ್ಲಿ ಇಂಗ್ಲೆಂಡ್‌ ತಂಡ ಜಯಿಸಿತ್ತು. 1966ರ ಟೂರ್ನಿಯ ಗುಂಪು ಹಂತದ ಪಂದ್ಯವನ್ನು 2–0 ಗೋಲುಗಳಿಂದ ಹಾಗೂ 1982ರ ಟೂರ್ನಿಯ ಪಂದ್ಯವನ್ನು 3–1 ಗೋಲುಗಳಿಂದ ಜಯಿಸಿತ್ತು.

andolanait

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

2 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

2 hours ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

2 hours ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

2 hours ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

2 hours ago