ಕ್ರೀಡೆ

ಫಿಫಾ ವಿಶ್ವಕಪ್‌ : ಇಂಗ್ಲೆಂಡ್‌ ಸೋಲಿಸಿ ಸೆಮಿಫೈನಲ್ ಗೆ ಫ್ರಾನ್ಸ್

ದೋಹಾ: ಫಿಫಾ ವಿಶ್ವಕಪ್‌ ಫುಟ್‌ಬಾಲ್‌ ಪಂದ್ಯಾವಳಿಯ ಕೊನೆಯ ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ
ಹಾಲಿ ಚಾಂಪಿಯನ್‌ ಫ್ರಾನ್ಸ್‌ ತಂಡ ಪ್ರಬಲ ಇಂಗ್ಲೆಂಡ್‌ ತಂಡವನ್ನು ಸೋಲಿಸುವ ಮೂಲಕ ಸೆಮಿಪೈನಲ್‌ ಪ್ರವೇಶವನ್ನು ಪಡೆದುಕೊಂಡಿದೆ.

ಅಲ್‌ ಖೊರ್‌ನ ಅಲ್‌ ಬೈತ್‌ ಕ್ರೀಡಾಂಗಣದಲ್ಲಿ ಶನಿವಾರ ತಡರಾತ್ರಿ ನಡೆದ ಪಂದ್ಯದಲ್ಲಿ  ಫ್ರಾನ್ಸ್ 2–1 ಗೋಲುಗಳ ಅಂತರದಲ್ಲಿ ಪ್ರಬಲ ಇಂಗ್ಲೆಂಡ್‌ ತಂಡವನ್ನು ಮಣಿಸಿತು. ಪಂದ್ಯ ಆರಂಭದಿಂದಲೂ ಸಮಬಲದ ಪೈಪೋಟಿಯನ್ನು ಎರಡು ತಂಡಗಳು ನೀಡಿದವು.  ಆದರೆ ಫ್ರಾನ್ಸ್‌ ತಂಡದ ಸ್ಟ್ರೈಕರ್‌ಗಳು ಇಂಗ್ಲೆಂಡ್‌ನ ಡಿಫೆಂಡರ್‌ಗಳ ರಕ್ಷಣಾ ಕೋಟೆ  ಭೇದಿಸಿ ಎರಡು ಗೋಲು ಹೊಡೆದರು. ಆದರೆ ಇಂಗ್ಲೆಂಡ್‌ ತಂಡ ಒಂದು ಗೋಲು ಗಳಿಸುವಲ್ಲಿ ಮಾತ್ರ ಯಶಸ್ವಿಯಾಯಿತು. ಆಟ ಮುಗಿಯಲು ಕೇವಲ 12 ನಿಮಿಷಗಳಿದ್ದಾಗ ಫ್ರಾನ್ಸ್‌ನ ಅತ್ಯಧಿಕ ಗೋಲುಗಳ ಸರದಾರ ಗಿರಾಡ್ ಗೋಲು ಗಳಿಸಿ ತಂಡವನ್ನು 2-1 ಅಂತರಕ್ಕೇರಿಸಿ ವಿಜಯ ಸಾರಿದರು.

ಇದಕ್ಕೂ ಮುನ್ನ ಇಂಗ್ಲೆಂಡಿನ ಹ್ಯಾರಿ ಕೇನ್ 54ನೇ ನಿಮಿಷದಲ್ಲಿ ಪೆನಾಲ್ಟಿ ಕಿಕ್ ಮೂಲಕ ಗೋಲು ಗಳಿಸಿದ್ದರು.
ಈ ಮೂಲಕ 1- 1 ಸಮಬಲ ಸಾಧಿಸಿದರು. 17ನೇ ನಿಮಿಷದಲ್ಲೇ ಅರುಲಿನ್ ಚೊಮೇನಿಯ ಬಾರಿಸಿದ ಗೋಲಿನ ಮೂಲಕ ಫ್ರಾನ್ಸ್ 1-0 ಗೋಲಿನ ಖಾತೆ ತೆರೆಯಿತು. ಕೇನ್ ಅವರು ಈ ಪಂದ್ಯದಲ್ಲಿ ಗೋಲು ಬಾರಿಸಿಸುವ ಮೂಲಕ ತಮ್ಮ 53ನೇ ಅಂತಾರಾಷ್ಟ್ರೀಯ ಗೋಲು ದಾಖಲಿಸಿದ ಸಾಧನೆ ಮಾಡಿದರು. ಈ ಮೂಲಕ ಇಂಗ್ಲೆಂಡ್ ಪರ ಅತ್ಯಧಿಕ ಗೋಲು ಗಳಿಸಿದ ವೇನ್ ರೂನಿ ಅವರ ದಾಖಲೆಯನ್ನು ಸರಿಗಟ್ಟಿದರು. ದ್ವಿತೀಯಾರ್ಧದಲ್ಲಿ ಇಂಗ್ಲೆಂಡ್ ಅದ್ಭುತ ಪ್ರದರ್ಶನ ತೋರಿದರೂ ಪಂದ್ಯದಲ್ಲಿ ಮೇಲುಗೈ ಸಾಧಿಸುವಲ್ಲಿ ವಿಫಲವಾಯಿತು. ಅನುಭವಿ ಮತ್ತು ಯುವ ಆಟಗಾರರನ್ನು ಒಳಗೊಂಡಿದ್ದರೂ ಇಂಗ್ಲೆಂಡ್‌ ತಂಡದ ಆಟ ಫ್ರಾನ್ಸ್‌ ಎದುರು ನಡೆಯಲಿಲ್ಲ. ಅಂತಿಮವಾಗಿ ಹಾಲಿ ಚಾಂಪಿಯನ್‌ ಎದುರು ಇಂಗ್ಲೆಂಡ್‌ ಕನಸು ಭಗ್ನಗೊಂಡಿತು.

ಫ್ರಾನ್ಸ್‌ ತಂಡ ಸೆಮಿಫೈನಲ್‌ನಲ್ಲಿ ಮೊರಕ್ಕೊ ತಂಡವನ್ನು ಎದುರಿಸಲಿದೆ.

ಇಂಗ್ಲೆಂಡ್‌ ಮತ್ತು ಫ್ರಾನ್ಸ್‌ ತಂಡಗಳು ವಿಶ್ವಕಪ್‌ ಟೂರ್ನಿಯಲ್ಲಿ ಈ ಹಿಂದೆ ಎರಡು ಸಲ ಎದುರಾಗಿದ್ದು, ಎರಡೂ ಪಂದ್ಯಗಳಲ್ಲಿ ಇಂಗ್ಲೆಂಡ್‌ ತಂಡ ಜಯಿಸಿತ್ತು. 1966ರ ಟೂರ್ನಿಯ ಗುಂಪು ಹಂತದ ಪಂದ್ಯವನ್ನು 2–0 ಗೋಲುಗಳಿಂದ ಹಾಗೂ 1982ರ ಟೂರ್ನಿಯ ಪಂದ್ಯವನ್ನು 3–1 ಗೋಲುಗಳಿಂದ ಜಯಿಸಿತ್ತು.

andolanait

Recent Posts

ಕಟಾವಿಗೆ ಬಂದಿದ್ದ ಕಬ್ಬಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ರೈತರು ಕಂಗಾಲು

ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…

12 hours ago

ಹನೂರು| ಬಿರುಗಾಳಿ ಸಹಿತ ಭಾರೀ ಮಳೆಗೆ ಬೆಳೆ ನಾಶ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…

12 hours ago

ಗುಂಡ್ಲುಪೇಟೆ| ಭಾರೀ ಗಾಳಿ ಮಳೆಗೆ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ‌ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…

12 hours ago

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಸಾವು: ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್‌ ಅನ್ನು ಕೂಡಲೇ ಅಮಾನತು…

12 hours ago

ಗುಂಡ್ಲುಪೇಟೆ| ಮನೆ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…

12 hours ago

ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಗೊಂದಲವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…

12 hours ago