ಕ್ರೀಡೆ

ಫಿಫಾ ವಿಶ್ವಕಪ್‌ : ಇಂಗ್ಲೆಂಡ್‌ ಸೋಲಿಸಿ ಸೆಮಿಫೈನಲ್ ಗೆ ಫ್ರಾನ್ಸ್

ದೋಹಾ: ಫಿಫಾ ವಿಶ್ವಕಪ್‌ ಫುಟ್‌ಬಾಲ್‌ ಪಂದ್ಯಾವಳಿಯ ಕೊನೆಯ ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ
ಹಾಲಿ ಚಾಂಪಿಯನ್‌ ಫ್ರಾನ್ಸ್‌ ತಂಡ ಪ್ರಬಲ ಇಂಗ್ಲೆಂಡ್‌ ತಂಡವನ್ನು ಸೋಲಿಸುವ ಮೂಲಕ ಸೆಮಿಪೈನಲ್‌ ಪ್ರವೇಶವನ್ನು ಪಡೆದುಕೊಂಡಿದೆ.

ಅಲ್‌ ಖೊರ್‌ನ ಅಲ್‌ ಬೈತ್‌ ಕ್ರೀಡಾಂಗಣದಲ್ಲಿ ಶನಿವಾರ ತಡರಾತ್ರಿ ನಡೆದ ಪಂದ್ಯದಲ್ಲಿ  ಫ್ರಾನ್ಸ್ 2–1 ಗೋಲುಗಳ ಅಂತರದಲ್ಲಿ ಪ್ರಬಲ ಇಂಗ್ಲೆಂಡ್‌ ತಂಡವನ್ನು ಮಣಿಸಿತು. ಪಂದ್ಯ ಆರಂಭದಿಂದಲೂ ಸಮಬಲದ ಪೈಪೋಟಿಯನ್ನು ಎರಡು ತಂಡಗಳು ನೀಡಿದವು.  ಆದರೆ ಫ್ರಾನ್ಸ್‌ ತಂಡದ ಸ್ಟ್ರೈಕರ್‌ಗಳು ಇಂಗ್ಲೆಂಡ್‌ನ ಡಿಫೆಂಡರ್‌ಗಳ ರಕ್ಷಣಾ ಕೋಟೆ  ಭೇದಿಸಿ ಎರಡು ಗೋಲು ಹೊಡೆದರು. ಆದರೆ ಇಂಗ್ಲೆಂಡ್‌ ತಂಡ ಒಂದು ಗೋಲು ಗಳಿಸುವಲ್ಲಿ ಮಾತ್ರ ಯಶಸ್ವಿಯಾಯಿತು. ಆಟ ಮುಗಿಯಲು ಕೇವಲ 12 ನಿಮಿಷಗಳಿದ್ದಾಗ ಫ್ರಾನ್ಸ್‌ನ ಅತ್ಯಧಿಕ ಗೋಲುಗಳ ಸರದಾರ ಗಿರಾಡ್ ಗೋಲು ಗಳಿಸಿ ತಂಡವನ್ನು 2-1 ಅಂತರಕ್ಕೇರಿಸಿ ವಿಜಯ ಸಾರಿದರು.

ಇದಕ್ಕೂ ಮುನ್ನ ಇಂಗ್ಲೆಂಡಿನ ಹ್ಯಾರಿ ಕೇನ್ 54ನೇ ನಿಮಿಷದಲ್ಲಿ ಪೆನಾಲ್ಟಿ ಕಿಕ್ ಮೂಲಕ ಗೋಲು ಗಳಿಸಿದ್ದರು.
ಈ ಮೂಲಕ 1- 1 ಸಮಬಲ ಸಾಧಿಸಿದರು. 17ನೇ ನಿಮಿಷದಲ್ಲೇ ಅರುಲಿನ್ ಚೊಮೇನಿಯ ಬಾರಿಸಿದ ಗೋಲಿನ ಮೂಲಕ ಫ್ರಾನ್ಸ್ 1-0 ಗೋಲಿನ ಖಾತೆ ತೆರೆಯಿತು. ಕೇನ್ ಅವರು ಈ ಪಂದ್ಯದಲ್ಲಿ ಗೋಲು ಬಾರಿಸಿಸುವ ಮೂಲಕ ತಮ್ಮ 53ನೇ ಅಂತಾರಾಷ್ಟ್ರೀಯ ಗೋಲು ದಾಖಲಿಸಿದ ಸಾಧನೆ ಮಾಡಿದರು. ಈ ಮೂಲಕ ಇಂಗ್ಲೆಂಡ್ ಪರ ಅತ್ಯಧಿಕ ಗೋಲು ಗಳಿಸಿದ ವೇನ್ ರೂನಿ ಅವರ ದಾಖಲೆಯನ್ನು ಸರಿಗಟ್ಟಿದರು. ದ್ವಿತೀಯಾರ್ಧದಲ್ಲಿ ಇಂಗ್ಲೆಂಡ್ ಅದ್ಭುತ ಪ್ರದರ್ಶನ ತೋರಿದರೂ ಪಂದ್ಯದಲ್ಲಿ ಮೇಲುಗೈ ಸಾಧಿಸುವಲ್ಲಿ ವಿಫಲವಾಯಿತು. ಅನುಭವಿ ಮತ್ತು ಯುವ ಆಟಗಾರರನ್ನು ಒಳಗೊಂಡಿದ್ದರೂ ಇಂಗ್ಲೆಂಡ್‌ ತಂಡದ ಆಟ ಫ್ರಾನ್ಸ್‌ ಎದುರು ನಡೆಯಲಿಲ್ಲ. ಅಂತಿಮವಾಗಿ ಹಾಲಿ ಚಾಂಪಿಯನ್‌ ಎದುರು ಇಂಗ್ಲೆಂಡ್‌ ಕನಸು ಭಗ್ನಗೊಂಡಿತು.

ಫ್ರಾನ್ಸ್‌ ತಂಡ ಸೆಮಿಫೈನಲ್‌ನಲ್ಲಿ ಮೊರಕ್ಕೊ ತಂಡವನ್ನು ಎದುರಿಸಲಿದೆ.

ಇಂಗ್ಲೆಂಡ್‌ ಮತ್ತು ಫ್ರಾನ್ಸ್‌ ತಂಡಗಳು ವಿಶ್ವಕಪ್‌ ಟೂರ್ನಿಯಲ್ಲಿ ಈ ಹಿಂದೆ ಎರಡು ಸಲ ಎದುರಾಗಿದ್ದು, ಎರಡೂ ಪಂದ್ಯಗಳಲ್ಲಿ ಇಂಗ್ಲೆಂಡ್‌ ತಂಡ ಜಯಿಸಿತ್ತು. 1966ರ ಟೂರ್ನಿಯ ಗುಂಪು ಹಂತದ ಪಂದ್ಯವನ್ನು 2–0 ಗೋಲುಗಳಿಂದ ಹಾಗೂ 1982ರ ಟೂರ್ನಿಯ ಪಂದ್ಯವನ್ನು 3–1 ಗೋಲುಗಳಿಂದ ಜಯಿಸಿತ್ತು.

andolanait

Recent Posts

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

6 hours ago

ಓದುಗರ ಪತ್ರ: ಸಿಜೆಪಿ ಯಾವುದೇ ಪಕ್ಷದ ಬಾಲಂಗೋಚಿಯಾಗದಿರಲಿ

ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…

6 hours ago

ಓದುಗರ ಪತ್ರ: ದಸರೆಯಲ್ಲಿ ಕಂಬಳದ ವ್ಯಾಮೋಹವೇಕೇ?

ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ.…

6 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗದ ಕಾಯಕಲ್ಪವೂ, ಅವರಿವರ ಭಾವವೂ

ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು…

6 hours ago

ಮಳೆಗಾಲದ ಸಾಂಕ್ರಾಮಿಕ ರೋಗಗಳ ಆತಂಕ

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ೨೯ ಡೆಂಗ್ಯು ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ   ಮಡಿಕೇರಿ:…

6 hours ago