ಕ್ರೀಡೆ

ಫಿಫಾ ವಿಶ್ವಕಪ್‌ : ಇಂಗ್ಲೆಂಡ್‌ ಸೋಲಿಸಿ ಸೆಮಿಫೈನಲ್ ಗೆ ಫ್ರಾನ್ಸ್

ದೋಹಾ: ಫಿಫಾ ವಿಶ್ವಕಪ್‌ ಫುಟ್‌ಬಾಲ್‌ ಪಂದ್ಯಾವಳಿಯ ಕೊನೆಯ ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ
ಹಾಲಿ ಚಾಂಪಿಯನ್‌ ಫ್ರಾನ್ಸ್‌ ತಂಡ ಪ್ರಬಲ ಇಂಗ್ಲೆಂಡ್‌ ತಂಡವನ್ನು ಸೋಲಿಸುವ ಮೂಲಕ ಸೆಮಿಪೈನಲ್‌ ಪ್ರವೇಶವನ್ನು ಪಡೆದುಕೊಂಡಿದೆ.

ಅಲ್‌ ಖೊರ್‌ನ ಅಲ್‌ ಬೈತ್‌ ಕ್ರೀಡಾಂಗಣದಲ್ಲಿ ಶನಿವಾರ ತಡರಾತ್ರಿ ನಡೆದ ಪಂದ್ಯದಲ್ಲಿ  ಫ್ರಾನ್ಸ್ 2–1 ಗೋಲುಗಳ ಅಂತರದಲ್ಲಿ ಪ್ರಬಲ ಇಂಗ್ಲೆಂಡ್‌ ತಂಡವನ್ನು ಮಣಿಸಿತು. ಪಂದ್ಯ ಆರಂಭದಿಂದಲೂ ಸಮಬಲದ ಪೈಪೋಟಿಯನ್ನು ಎರಡು ತಂಡಗಳು ನೀಡಿದವು.  ಆದರೆ ಫ್ರಾನ್ಸ್‌ ತಂಡದ ಸ್ಟ್ರೈಕರ್‌ಗಳು ಇಂಗ್ಲೆಂಡ್‌ನ ಡಿಫೆಂಡರ್‌ಗಳ ರಕ್ಷಣಾ ಕೋಟೆ  ಭೇದಿಸಿ ಎರಡು ಗೋಲು ಹೊಡೆದರು. ಆದರೆ ಇಂಗ್ಲೆಂಡ್‌ ತಂಡ ಒಂದು ಗೋಲು ಗಳಿಸುವಲ್ಲಿ ಮಾತ್ರ ಯಶಸ್ವಿಯಾಯಿತು. ಆಟ ಮುಗಿಯಲು ಕೇವಲ 12 ನಿಮಿಷಗಳಿದ್ದಾಗ ಫ್ರಾನ್ಸ್‌ನ ಅತ್ಯಧಿಕ ಗೋಲುಗಳ ಸರದಾರ ಗಿರಾಡ್ ಗೋಲು ಗಳಿಸಿ ತಂಡವನ್ನು 2-1 ಅಂತರಕ್ಕೇರಿಸಿ ವಿಜಯ ಸಾರಿದರು.

ಇದಕ್ಕೂ ಮುನ್ನ ಇಂಗ್ಲೆಂಡಿನ ಹ್ಯಾರಿ ಕೇನ್ 54ನೇ ನಿಮಿಷದಲ್ಲಿ ಪೆನಾಲ್ಟಿ ಕಿಕ್ ಮೂಲಕ ಗೋಲು ಗಳಿಸಿದ್ದರು.
ಈ ಮೂಲಕ 1- 1 ಸಮಬಲ ಸಾಧಿಸಿದರು. 17ನೇ ನಿಮಿಷದಲ್ಲೇ ಅರುಲಿನ್ ಚೊಮೇನಿಯ ಬಾರಿಸಿದ ಗೋಲಿನ ಮೂಲಕ ಫ್ರಾನ್ಸ್ 1-0 ಗೋಲಿನ ಖಾತೆ ತೆರೆಯಿತು. ಕೇನ್ ಅವರು ಈ ಪಂದ್ಯದಲ್ಲಿ ಗೋಲು ಬಾರಿಸಿಸುವ ಮೂಲಕ ತಮ್ಮ 53ನೇ ಅಂತಾರಾಷ್ಟ್ರೀಯ ಗೋಲು ದಾಖಲಿಸಿದ ಸಾಧನೆ ಮಾಡಿದರು. ಈ ಮೂಲಕ ಇಂಗ್ಲೆಂಡ್ ಪರ ಅತ್ಯಧಿಕ ಗೋಲು ಗಳಿಸಿದ ವೇನ್ ರೂನಿ ಅವರ ದಾಖಲೆಯನ್ನು ಸರಿಗಟ್ಟಿದರು. ದ್ವಿತೀಯಾರ್ಧದಲ್ಲಿ ಇಂಗ್ಲೆಂಡ್ ಅದ್ಭುತ ಪ್ರದರ್ಶನ ತೋರಿದರೂ ಪಂದ್ಯದಲ್ಲಿ ಮೇಲುಗೈ ಸಾಧಿಸುವಲ್ಲಿ ವಿಫಲವಾಯಿತು. ಅನುಭವಿ ಮತ್ತು ಯುವ ಆಟಗಾರರನ್ನು ಒಳಗೊಂಡಿದ್ದರೂ ಇಂಗ್ಲೆಂಡ್‌ ತಂಡದ ಆಟ ಫ್ರಾನ್ಸ್‌ ಎದುರು ನಡೆಯಲಿಲ್ಲ. ಅಂತಿಮವಾಗಿ ಹಾಲಿ ಚಾಂಪಿಯನ್‌ ಎದುರು ಇಂಗ್ಲೆಂಡ್‌ ಕನಸು ಭಗ್ನಗೊಂಡಿತು.

ಫ್ರಾನ್ಸ್‌ ತಂಡ ಸೆಮಿಫೈನಲ್‌ನಲ್ಲಿ ಮೊರಕ್ಕೊ ತಂಡವನ್ನು ಎದುರಿಸಲಿದೆ.

ಇಂಗ್ಲೆಂಡ್‌ ಮತ್ತು ಫ್ರಾನ್ಸ್‌ ತಂಡಗಳು ವಿಶ್ವಕಪ್‌ ಟೂರ್ನಿಯಲ್ಲಿ ಈ ಹಿಂದೆ ಎರಡು ಸಲ ಎದುರಾಗಿದ್ದು, ಎರಡೂ ಪಂದ್ಯಗಳಲ್ಲಿ ಇಂಗ್ಲೆಂಡ್‌ ತಂಡ ಜಯಿಸಿತ್ತು. 1966ರ ಟೂರ್ನಿಯ ಗುಂಪು ಹಂತದ ಪಂದ್ಯವನ್ನು 2–0 ಗೋಲುಗಳಿಂದ ಹಾಗೂ 1982ರ ಟೂರ್ನಿಯ ಪಂದ್ಯವನ್ನು 3–1 ಗೋಲುಗಳಿಂದ ಜಯಿಸಿತ್ತು.

andolanait

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

2 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

15 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

16 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

16 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

16 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

16 hours ago