ಅಲ್ ದಾಯೆನ್ (ಕತಾರ್): ಕತಾರ್ ಫಿಫಾ ವಿಶ್ವಕಪ್ನ ಮೊದಲ ಪಂದ್ಯದಲ್ಲಿ ತವರು ತಂಡವಾದ ಸೌದಿ ಅರೇಬಿಯಾ ವಿರುದ್ಧ ಸೋತಾಗ ವಿಶ್ವಶ್ರೇಷ್ಠ ತಂಡವಾದ ಅರ್ಜೆಂಟೀನಾವನ್ನು ಗೇಲಿ ಮಾಡಿದವರೇ ಹೆಚ್ಚು. ಲಿಯೋನೆಲ್ ಮೆಸ್ಸಿಯಂತಹ ಈ ಪೀಳಿಗೆಯ ಶ್ರೇಷ್ಠ ಆಟಗಾರರಿರುವ ತಂಡ ಹೀನಾಯವಾಗಿ ಸೋತಿದ್ದು, ಯಾರಿಂದಲೂ ಅರಗಿಸಿಕೊಳ್ಳಲಾಗಲಿಲ್ಲ.
ಮೊದಲ ಸೋಲು ತಂಡದ ತಂತ್ರಗಳನ್ನೇ ಬದಲಿಸಿತು. ವಿಶ್ವಕಪ್ ಗೆದ್ದು ತೋರಿಸುವ ಛಲ ತೊಟ್ಟ ಆಟಗಾರರು ವಿಶ್ವಕಪ್ ಗೆಲ್ಲಲೇಬೇಕೆಂಬ ಹಠದೊಂದಿಗೆ ಕಾಲ್ಚೆಂಡಿನ ಜೊತೆ ಹಠಕ್ಕೆ ಬಿದ್ದು ಹೋರಾಡಿದರು. ಅದರ ಫಲಿತಾಂಶವೇ ಇಂದು ಅರ್ಜೆಂಟೀನಾ ವಿಶ್ವಕಪ್ನ ಮೊದಲ ತಂಡವಾಗಿ ಪೈನಲ್ ತಲುಪಿದೆ. ಅಚ್ಚರಿಗಳನ್ನೇ ಸೃಷ್ಟಿಸುತ್ತ ಬಂದಿದ್ದ ಕ್ರೊವೇಷಿಯಾ ಎದುರು ಮಧ್ಯರಾತ್ರಿ ನಡೆದ ಪಂದ್ಯದಲ್ಲಿ 3-0 ಗೋಲುಗಳಿಂದ ಗೆದ್ದು ಅಂತಿಮ ಹಣಾಹಣಿಗೆ ಅರ್ಹತೆ ಪಡೆಯಿತು.ಬಹುತೇಕ ಅಂತಿಮ ವಿಶ್ವಕಪ್ ಆಡುತ್ತಿರುವ ಲಿಯೋನೆಲ್ ಮೆಸ್ಸಿ 34 ನೇ ನಿಮಿಷದಲ್ಲಿ ಬಾರಿಸಿದ ಗೋಲು, ತಂಡದ ಭರವಸೆಯ ಆಟಗಾರ ಜೂಲಿಯನ್ ಅಲ್ವಾರೆಜ್ ಬ್ರೇಸ್ 39, 69 ನೇ ನಿಮಿಷದಲ್ಲಿ ದಾಖಲಿಸಿದ ಎರಡುಗಳ ಗೋಲುಗಳು ಕ್ರೊವೇಷಿಯಾದ ಫೈನಲ್ ಹಾದಿಯನ್ನು ಮುಚ್ಚಿ ಹಾಕಿತು.
ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…
ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…
ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…
ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…
ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…
ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…