ಕ್ರೀಡೆ

ಫಿಫಾ ವಿಶ್ವಕಪ್ : ಫೈನಲ್​ ತಲುಪಿದ ಅರ್ಜೆಂಟೀನಾ

ಅಲ್ ದಾಯೆನ್ (ಕತಾರ್): ಕತಾರ್​​ ಫಿಫಾ ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ತವರು ತಂಡವಾದ ಸೌದಿ ಅರೇಬಿಯಾ ವಿರುದ್ಧ ಸೋತಾಗ ವಿಶ್ವಶ್ರೇಷ್ಠ ತಂಡವಾದ ಅರ್ಜೆಂಟೀನಾವನ್ನು ಗೇಲಿ ಮಾಡಿದವರೇ ಹೆಚ್ಚು. ಲಿಯೋನೆಲ್​ ಮೆಸ್ಸಿಯಂತಹ ಈ ಪೀಳಿಗೆಯ ಶ್ರೇಷ್ಠ ಆಟಗಾರರಿರುವ ತಂಡ ಹೀನಾಯವಾಗಿ ಸೋತಿದ್ದು, ಯಾರಿಂದಲೂ ಅರಗಿಸಿಕೊಳ್ಳಲಾಗಲಿಲ್ಲ.

ಮೊದಲ ಸೋಲು ತಂಡದ ತಂತ್ರಗಳನ್ನೇ ಬದಲಿಸಿತು. ವಿಶ್ವಕಪ್​ ಗೆದ್ದು ತೋರಿಸುವ ಛಲ ತೊಟ್ಟ ಆಟಗಾರರು ವಿಶ್ವಕಪ್​ ಗೆಲ್ಲಲೇಬೇಕೆಂಬ ಹಠದೊಂದಿಗೆ ಕಾಲ್ಚೆಂಡಿನ ಜೊತೆ ಹಠಕ್ಕೆ ಬಿದ್ದು ಹೋರಾಡಿದರು. ಅದರ ಫಲಿತಾಂಶವೇ ಇಂದು ಅರ್ಜೆಂಟೀನಾ ವಿಶ್ವಕಪ್​ನ ಮೊದಲ ತಂಡವಾಗಿ ಪೈನಲ್​ ತಲುಪಿದೆ. ಅಚ್ಚರಿಗಳನ್ನೇ ಸೃಷ್ಟಿಸುತ್ತ ಬಂದಿದ್ದ ಕ್ರೊವೇಷಿಯಾ ಎದುರು ಮಧ್ಯರಾತ್ರಿ ನಡೆದ ಪಂದ್ಯದಲ್ಲಿ 3-0 ಗೋಲುಗಳಿಂದ ಗೆದ್ದು ಅಂತಿಮ ಹಣಾಹಣಿಗೆ ಅರ್ಹತೆ ಪಡೆಯಿತು.ಬಹುತೇಕ ಅಂತಿಮ ವಿಶ್ವಕಪ್​ ಆಡುತ್ತಿರುವ ಲಿಯೋನೆಲ್​ ಮೆಸ್ಸಿ 34 ನೇ ನಿಮಿಷದಲ್ಲಿ ಬಾರಿಸಿದ ಗೋಲು, ತಂಡದ ಭರವಸೆಯ ಆಟಗಾರ ಜೂಲಿಯನ್ ಅಲ್ವಾರೆಜ್ ಬ್ರೇಸ್​ 39, 69 ನೇ ನಿಮಿಷದಲ್ಲಿ ದಾಖಲಿಸಿದ ಎರಡುಗಳ ಗೋಲುಗಳು ಕ್ರೊವೇಷಿಯಾದ ಫೈನಲ್​ ಹಾದಿಯನ್ನು ಮುಚ್ಚಿ ಹಾಕಿತು.

andolanait

Recent Posts

ಸಿಲಿಂಡರ್‌ಗೆ ಮುಗಿಬಿದ್ದ ಜನ : ಪೊಲೀಸ್‌ ರಕ್ಷಣೆಯಲ್ಲಿ ಸಿಲಿಂಡರ್‌ ವಿತರಣೆ

ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…

18 mins ago

ಒಮ್ಮತದ ಅಭ್ಯರ್ಥಿ ಆಯ್ಕೆ ಆಗಿದೆ ; ಅಲ್ಪಸಂಖ್ಯಾತರು ಟಿಕೆಟ್ ಕೇಳುವುದರಲ್ಲಿ ತಪ್ಪಿಲ್ಲ : ಡಿಸಿಎಂ ಡಿ.ಕೆ

ಬೆಂಗಳೂರು : ದಾವಣಗೆರೆ ಮತ್ತು ಬಾಗಲಕೋಟೆ ಉಪ ಚುನಾವಣೆಗೆ ಕಾಂಗ್ರೆಸ್‌ನಿಂದ ಒಮ್ಮತದಿಂದ ಅಭ್ಯರ್ಥಿ ಆಯ್ಕೆ ಆಗಿದೆ ಎಂದು ಉಪ ಮುಖ್ಯಮಂತ್ರಿ…

58 mins ago

ಮೇಲುಕೋಟೆಯಲ್ಲಿ ವಾಹನ ದಟ್ಟಣೆ ; ನಿಯಂತ್ರಣಕ್ಕೆ ಶಾಸಕರ ಸೂಚನೆ

ಮೇಲುಕೋಟೆ : ಶ್ರೀ ಚೆಲುವನಾರಾಯಣಸ್ವಾಮಿ ದೇವಾಲಯದ ಸುತ್ತ ಮತ್ತು ಉತ್ಸವ ಬೀದಿಗಳಲ್ಲಿ ಭಕ್ತರ ವಾಹನ ನಿಲುಗಡೆಯನ್ನು ನಿಯಂತ್ರಿಸಬೇಕು ಎಂದು ಮೇಲುಕೋಟೆ…

2 hours ago

ಮಂಗಳೂರು ಬಂದರಿಗೆ ಬಂದ ಎಲ್‌ಪಿಜಿ ಹೊತ್ತ ಎರಡು ಹಡಗು

ಮಂಗಳೂರು : ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದ ನಡುವೆ ರಷ್ಯಾದಿಂದ 96 ಸಾವಿರ ಮೆಟ್ರಿಕ್ ಟನ್ ಕಚ್ಚಾತೈಲ…

2 hours ago

ನಮ್ಮ ವೈರಿಗಳಿಗೆ ಮಾತ್ರ ಹೊರ್ಮುಜ್‌ ಮುಚ್ಚಿದೆ : ಇರಾನ್‌

ವಿಶ್ವಸಂಸ್ಥೆ : ಇರಾನ್‌ ವೈರಿಗಳು ಹಾಗೂ ಅವರೊಂದಿಗೆ ನಂಟು ಹೊಂದಿರುವ ರಾಷ್ಟ್ರಗಳಿಗೆ ಮಾತ್ರ ಹೊರ್ಮುಜ್‌ ಜಲಸಂಧಿ ಮುಚ್ಚಲಾಗಿದೆ ಎಂದು ವಿಶ್ವಸಂಸ್ಥೆಯ…

3 hours ago

ಹುಬ್ಬೆ ಹುಣಸೆ ಜಲಾಶಯಕ್ಕೂ ಕಾವೇರಿ ನೀರು : ಶಾಸಕ ಮಂಜುನಾಥ್‌ ಭರವಸೆ

ಹನೂರು : ವಿಧಾನಸಭಾ ಕ್ಷೇತ್ರದ ಪ್ರಮುಖ ಜಲಾಶಯಗಳ ಪೈಕಿ ರಾಮನ ಗುಡ್ಡ ಜಲಾಶಯಕ್ಕೆ ಕಳೆದ ಎರಡು ತಿಂಗಳ ಹಿಂದೆ ಕಾವೇರಿ…

4 hours ago